<p><strong>ಕೊಚ್ಚಿ:</strong> ವಯನಾಡ್ನ ಭೂಕುಸಿತ ಸಂತ್ರಸ್ತರಿಗೆ ನೆರವಾಗಲು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಎಲ್ಲ ಶಾಸಕರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದಾರೆ.</p>.<p>ಭೂಕುಸಿತ ಬಾಧಿತ ಪ್ರದೇಶಗಳಲ್ಲಿ ರಕ್ಷಣೆ, ಸಂತ್ರಸ್ತರಿಗೆ ನೆರವು ನೀಡಲು ಮೈತ್ರಿಕೂಟವು ಸರ್ಕಾರಕ್ಕೆ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಹೇಳಿದರು.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಕಟಿಸಿರುವ 100 ಮನೆಗಳ ನಿರ್ಮಾಣ ಹೊರತುಪಡಿಸಿ, ಮೈತ್ರಿ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ಪರಿಹಾರದ ನೆರವು ಪ್ರಕಟಿಸಿದೆ.</p>.<p>ಇದಕ್ಕೂ ಮೊದಲು ಸಿಪಿಎಂ ನೇತೃತ್ವದ ಎಲ್ಡಿಎಫ್ ಮೈತ್ರಿಕೂಟವು ವಿಧಾನಸಭೆ ಮತ್ತು ಸಂಸತ್ತಿನಲ್ಲಿರುವ ಮೈತ್ರಿಕೂಟದ ಸದಸ್ಯರು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡುವರು ಎಂದು ಪ್ರಕಟಿಸಿತ್ತು.</p>.<p>ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಿಂಗಳ ವೇತನವನ್ನು ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದರು. ಕೆಪಿಸಿಸಿ ಮುಖ್ಯಸ್ಥ ಕೆ.ಸುದರ್ಶನ್ ಅವರು ಇದಕ್ಕೆ ಆಕ್ಷೇಪಿಸಿದ್ದು, ಸಿಪಿಎಂ ನೇತೃತ್ವದ ಸರ್ಕಾರ ನಿರ್ವಹಿಸುತ್ತಿರುವ ನಿಧಿಗೆ ದೇಣಿಗೆ ನೀಡುವ ಅಗತ್ಯವಿಲ್ಲ ಎಂದಿದ್ದರು.</p>.<p>ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಸತೀಶನ್ ಅವರು, ನೆಲೆ ಕಳೆದುಕೊಂಡವರು ಹಾಗೂ ಅನಾಥರಾಗಿರುವವರಿಗೆ ನೆರವು ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಭವಿಷ್ಯದಲ್ಲಿ ಇಂತಹ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಬೇಕು. ಭೂಕುಸಿತ ಪ್ರದೇಶ ಬಾಧಿತ ವಲಯದಲ್ಲಿ ಎಚ್ಚರಿಕೆ ವಹಿಸಬೇಕು. ಕೊಚ್ಚಿನ್ ವಿಶ್ವವಿದ್ಯಾಲಯದ ಪರಿಣತರ ನೆರವು ಪಡೆಯಬೇಕು. ಜಗತ್ತಿನ ವಿವಿಧೆಡೆ ಲಭ್ಯವಿರುವ ಎಲ್ಲ ತಾಂತ್ರಿಕ ಪರಿಣತಿಯ ಬಳಕೆ ಆಗಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಕೃತಿಕ ವಿಕೋಪ ಕುರಿತು ಮುನ್ನೆಚ್ಚರಿಕೆ ನೀಡುವ, ಕಡಿಮೆ ಅವಧಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಅಗಬೇಕು. ತಾಪಮಾನ ಬದಲಾವಣೆಗೆ ಅನುಗುಣವಾಗಿ ನೀತಿ ರಚನೆ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅಗತ್ಯ ಸಲಹೆ ನೀಡಲು ಸಿದ್ಧ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ವಯನಾಡ್ನ ಭೂಕುಸಿತ ಸಂತ್ರಸ್ತರಿಗೆ ನೆರವಾಗಲು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಎಲ್ಲ ಶಾಸಕರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದಾರೆ.</p>.<p>ಭೂಕುಸಿತ ಬಾಧಿತ ಪ್ರದೇಶಗಳಲ್ಲಿ ರಕ್ಷಣೆ, ಸಂತ್ರಸ್ತರಿಗೆ ನೆರವು ನೀಡಲು ಮೈತ್ರಿಕೂಟವು ಸರ್ಕಾರಕ್ಕೆ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಹೇಳಿದರು.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಕಟಿಸಿರುವ 100 ಮನೆಗಳ ನಿರ್ಮಾಣ ಹೊರತುಪಡಿಸಿ, ಮೈತ್ರಿ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ಪರಿಹಾರದ ನೆರವು ಪ್ರಕಟಿಸಿದೆ.</p>.<p>ಇದಕ್ಕೂ ಮೊದಲು ಸಿಪಿಎಂ ನೇತೃತ್ವದ ಎಲ್ಡಿಎಫ್ ಮೈತ್ರಿಕೂಟವು ವಿಧಾನಸಭೆ ಮತ್ತು ಸಂಸತ್ತಿನಲ್ಲಿರುವ ಮೈತ್ರಿಕೂಟದ ಸದಸ್ಯರು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡುವರು ಎಂದು ಪ್ರಕಟಿಸಿತ್ತು.</p>.<p>ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಿಂಗಳ ವೇತನವನ್ನು ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದರು. ಕೆಪಿಸಿಸಿ ಮುಖ್ಯಸ್ಥ ಕೆ.ಸುದರ್ಶನ್ ಅವರು ಇದಕ್ಕೆ ಆಕ್ಷೇಪಿಸಿದ್ದು, ಸಿಪಿಎಂ ನೇತೃತ್ವದ ಸರ್ಕಾರ ನಿರ್ವಹಿಸುತ್ತಿರುವ ನಿಧಿಗೆ ದೇಣಿಗೆ ನೀಡುವ ಅಗತ್ಯವಿಲ್ಲ ಎಂದಿದ್ದರು.</p>.<p>ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಸತೀಶನ್ ಅವರು, ನೆಲೆ ಕಳೆದುಕೊಂಡವರು ಹಾಗೂ ಅನಾಥರಾಗಿರುವವರಿಗೆ ನೆರವು ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಭವಿಷ್ಯದಲ್ಲಿ ಇಂತಹ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಬೇಕು. ಭೂಕುಸಿತ ಪ್ರದೇಶ ಬಾಧಿತ ವಲಯದಲ್ಲಿ ಎಚ್ಚರಿಕೆ ವಹಿಸಬೇಕು. ಕೊಚ್ಚಿನ್ ವಿಶ್ವವಿದ್ಯಾಲಯದ ಪರಿಣತರ ನೆರವು ಪಡೆಯಬೇಕು. ಜಗತ್ತಿನ ವಿವಿಧೆಡೆ ಲಭ್ಯವಿರುವ ಎಲ್ಲ ತಾಂತ್ರಿಕ ಪರಿಣತಿಯ ಬಳಕೆ ಆಗಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಕೃತಿಕ ವಿಕೋಪ ಕುರಿತು ಮುನ್ನೆಚ್ಚರಿಕೆ ನೀಡುವ, ಕಡಿಮೆ ಅವಧಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಅಗಬೇಕು. ತಾಪಮಾನ ಬದಲಾವಣೆಗೆ ಅನುಗುಣವಾಗಿ ನೀತಿ ರಚನೆ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅಗತ್ಯ ಸಲಹೆ ನೀಡಲು ಸಿದ್ಧ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>