<p class="bodytext"><strong>ನವದೆಹಲಿ:</strong> ಪೆಗಾಸಸ್ ಕುತಂತ್ರಾಂಶದ ವಿಚಾರದಲ್ಲಿ ಒಗ್ಗಟ್ಟಿನಿಂದ ಸಾಗುವ ಮತ್ತು ಜಂಟಿ ಕಾರ್ಯತಂತ್ರ ರೂಪಿಸುವ ದೃಷ್ಟಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ‘ಕಾನ್ಸ್ಟಿಟ್ಯೂಷನ್ ಕ್ಲಬ್’ನಲ್ಲಿ ಆಯೋಜಿಸಿದ್ದ ಉಪಾಹಾರ ಸಭೆಗೆ ಹಲವು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.</p>.<p class="bodytext">ಕಾಂಗ್ರೆಸ್ನ ಸುಮಾರು 100 ಸಂಸದರ ಜತೆಗೆ ತೃಣಮೂಲ ಕಾಂಗ್ರೆಸ್, ಎನ್ಸಿಪಿ, ಶಿವಸೇನೆ, ಸಿಪಿಐ-ಎಂ, ಸಿಪಿಐ, ಆರ್ಜೆಡಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p class="bodytext">ಜೆಎಂಎಂ, ಜೆಕೆಎನ್ಸಿ, ಐಯುಎಂಎಲ್, ಆರ್ಎಸ್ಪಿ, ಕೆಸಿಎಂ ನಾಯಕರೂ ಸಭೆಯಲ್ಲಿ ಹಾಜರಿದ್ದರು.</p>.<p class="bodytext">ರಾಹುಲ್ ಗಾಂಧಿ ಅವರು ಕರೆದಿದ್ದ ಹಿಂದಿನ ಸಭೆಯಲ್ಲಿ ಗೈರಾಗಿದ್ದ ತೃಣಮೂಲ ಕಾಂಗ್ರೆಸ್ ಕೂಡ ಹಾಜರಿತ್ತು. ರಾಹುಲ್ ಗಾಂಧಿ ಅವರ ಜತೆಗೆ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಇದ್ದರು.</p>.<p class="bodytext">ಪೆಗಾಸಸ್ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಹೋರಾಟ ನಡೆಸುತ್ತಿರುವ ಬೆನ್ನಲ್ಲೆ ಈ ಸಭೆ ನಡೆದಿದೆ.<br />ಆದರೆ, ಸರ್ಕಾರವು ಇದೊಂದು ಸಮಸ್ಯೆಯೇ ಅಲ್ಲ. ಇದನ್ನು ಸಂಸತ್ತಿನ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong> ಪೆಗಾಸಸ್ ಕುತಂತ್ರಾಂಶದ ವಿಚಾರದಲ್ಲಿ ಒಗ್ಗಟ್ಟಿನಿಂದ ಸಾಗುವ ಮತ್ತು ಜಂಟಿ ಕಾರ್ಯತಂತ್ರ ರೂಪಿಸುವ ದೃಷ್ಟಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ‘ಕಾನ್ಸ್ಟಿಟ್ಯೂಷನ್ ಕ್ಲಬ್’ನಲ್ಲಿ ಆಯೋಜಿಸಿದ್ದ ಉಪಾಹಾರ ಸಭೆಗೆ ಹಲವು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.</p>.<p class="bodytext">ಕಾಂಗ್ರೆಸ್ನ ಸುಮಾರು 100 ಸಂಸದರ ಜತೆಗೆ ತೃಣಮೂಲ ಕಾಂಗ್ರೆಸ್, ಎನ್ಸಿಪಿ, ಶಿವಸೇನೆ, ಸಿಪಿಐ-ಎಂ, ಸಿಪಿಐ, ಆರ್ಜೆಡಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p class="bodytext">ಜೆಎಂಎಂ, ಜೆಕೆಎನ್ಸಿ, ಐಯುಎಂಎಲ್, ಆರ್ಎಸ್ಪಿ, ಕೆಸಿಎಂ ನಾಯಕರೂ ಸಭೆಯಲ್ಲಿ ಹಾಜರಿದ್ದರು.</p>.<p class="bodytext">ರಾಹುಲ್ ಗಾಂಧಿ ಅವರು ಕರೆದಿದ್ದ ಹಿಂದಿನ ಸಭೆಯಲ್ಲಿ ಗೈರಾಗಿದ್ದ ತೃಣಮೂಲ ಕಾಂಗ್ರೆಸ್ ಕೂಡ ಹಾಜರಿತ್ತು. ರಾಹುಲ್ ಗಾಂಧಿ ಅವರ ಜತೆಗೆ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಇದ್ದರು.</p>.<p class="bodytext">ಪೆಗಾಸಸ್ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಹೋರಾಟ ನಡೆಸುತ್ತಿರುವ ಬೆನ್ನಲ್ಲೆ ಈ ಸಭೆ ನಡೆದಿದೆ.<br />ಆದರೆ, ಸರ್ಕಾರವು ಇದೊಂದು ಸಮಸ್ಯೆಯೇ ಅಲ್ಲ. ಇದನ್ನು ಸಂಸತ್ತಿನ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>