<p><strong>ನವದೆಹಲಿ</strong>: ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಂಧಿಸಿರುವುದನ್ನು ಖಂಡಿಸಿ ವಿರೋಧ ಪಕ್ಷಗಳ ಸಂಸದರು ಇಂದು (ಶುಕ್ರವಾರ) ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.</p><p>ಈ ಸಮಸ್ಯೆಗೆ ಕೇಂದ್ರ ಸರ್ಕಾರವು ಶಾಶ್ವತ ಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>ತಮಿಳುನಾಡಿನ ಡಿಎಂಕೆ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಸಂಸದರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ‘ತಮಿಳು ಮೀನುಗಾರರನ್ನು ಮರಳಿ ತನ್ನಿ’, ‘ಮೀನುಗಾರರಿಗೆ ನ್ಯಾಯ ಕೊಡಿಸಿ’ ಮತ್ತು ‘ತಮಿಳುನಾಡು ಮೀನುಗಾರರು ಭಾರತೀಯರು’ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಂಸದರು ಪ್ರತಿಭಟನೆ ನಡೆಸಿದ್ದಾರೆ.</p><p>ತಮಿಳುನಾಡು ಮೀನುಗಾರರ ಬಂಧನವು ರಾಷ್ಟ್ರೀಯ ವಿಷಯವಾಗಿದ್ದು, ಶ್ರೀಲಂಕಾ ಭಾರತೀಯರ ಮೇಲೆ ದೌರ್ಜನ್ಯ ಎಸಗುತ್ತಿದೆ. ಮೀನುಗಾರರನ್ನು ವರ್ಷಗಳಿಂದ ಹಿಂಸಿಸಲಾಗುತ್ತಿದೆ, ಕಿರುಕುಳ ನೀಡಲಾಗುತ್ತಿದೆ ಮತ್ತು ಕೊಲ್ಲಲಾಗುತ್ತಿದೆ. ಆದರೆ, ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಮೀನುಗಾರರು ಸಮುದ್ರಕ್ಕೆ ಇಳಿಯಲು ಹೆದರುತ್ತಿದ್ದು, ಇದರಿಂದ ಅವರ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ಹೇಳಿದ್ದಾರೆ.</p><p>2024ರಲ್ಲಿ, ಶ್ರೀಲಂಕಾ ನೌಕಾಪಡೆಯು ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 550ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಿತ್ತು.</p>.ವಾಸ್ತವಾಂಶದೊಂದಿಗೆ ಉತ್ತರ: ರಾಹುಲ್ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ.ತಮಿಳುನಾಡು | 4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ನಾಲ್ವರ ಬಂಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಂಧಿಸಿರುವುದನ್ನು ಖಂಡಿಸಿ ವಿರೋಧ ಪಕ್ಷಗಳ ಸಂಸದರು ಇಂದು (ಶುಕ್ರವಾರ) ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.</p><p>ಈ ಸಮಸ್ಯೆಗೆ ಕೇಂದ್ರ ಸರ್ಕಾರವು ಶಾಶ್ವತ ಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>ತಮಿಳುನಾಡಿನ ಡಿಎಂಕೆ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಸಂಸದರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ‘ತಮಿಳು ಮೀನುಗಾರರನ್ನು ಮರಳಿ ತನ್ನಿ’, ‘ಮೀನುಗಾರರಿಗೆ ನ್ಯಾಯ ಕೊಡಿಸಿ’ ಮತ್ತು ‘ತಮಿಳುನಾಡು ಮೀನುಗಾರರು ಭಾರತೀಯರು’ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಂಸದರು ಪ್ರತಿಭಟನೆ ನಡೆಸಿದ್ದಾರೆ.</p><p>ತಮಿಳುನಾಡು ಮೀನುಗಾರರ ಬಂಧನವು ರಾಷ್ಟ್ರೀಯ ವಿಷಯವಾಗಿದ್ದು, ಶ್ರೀಲಂಕಾ ಭಾರತೀಯರ ಮೇಲೆ ದೌರ್ಜನ್ಯ ಎಸಗುತ್ತಿದೆ. ಮೀನುಗಾರರನ್ನು ವರ್ಷಗಳಿಂದ ಹಿಂಸಿಸಲಾಗುತ್ತಿದೆ, ಕಿರುಕುಳ ನೀಡಲಾಗುತ್ತಿದೆ ಮತ್ತು ಕೊಲ್ಲಲಾಗುತ್ತಿದೆ. ಆದರೆ, ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಮೀನುಗಾರರು ಸಮುದ್ರಕ್ಕೆ ಇಳಿಯಲು ಹೆದರುತ್ತಿದ್ದು, ಇದರಿಂದ ಅವರ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ಹೇಳಿದ್ದಾರೆ.</p><p>2024ರಲ್ಲಿ, ಶ್ರೀಲಂಕಾ ನೌಕಾಪಡೆಯು ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 550ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಿತ್ತು.</p>.ವಾಸ್ತವಾಂಶದೊಂದಿಗೆ ಉತ್ತರ: ರಾಹುಲ್ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ.ತಮಿಳುನಾಡು | 4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ನಾಲ್ವರ ಬಂಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>