<p><strong>ನವದೆಹಲಿ</strong>: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ಕೋರಿ ವಿರೋಧ ಪಕ್ಷಗಳು ಶುಕ್ರವಾರ ರಾಜ್ಯಸಭೆಯಲ್ಲಿ ಹೊಸ ನೋಟಿಸ್ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.</p>.<p>‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಪಕ್ಷಪಾತ ತೋರುವುದನ್ನು ಮುಂದುವರಿಸಿದ್ದಾರೆ’ ಎಂಬ ಹೊಸ ಆರೋಪವನ್ನು ಸಿಇಸಿ ವಿರುದ್ಧ ಮಾಡಲಾಗಿದೆ.</p>.<p>ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಏಪ್ರಿಲ್ 18ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ನೀಡಿದ ದೂರಿನ ಬಗ್ಗೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿವೆ.</p>.<p>ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಟಿಎಂಸಿ ನಾಯಕಿ ಸಾಗರಿಕಾ ಘೋಷ್ ಅವರು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಸಲ್ಲಿಸಿದ್ದಾರೆ. ನೋಟಿಸ್ಗೆ 50 ಸಹಿಗಳ ಅವಶ್ಯಕತೆಯಿದ್ದು, ರಾಜ್ಯಸಭೆಯ 73 ಸದಸ್ಯರು ಸಹಿ ಹಾಕಿದ್ದಾರೆ.</p>.<p>ಕಾಂಗ್ರೆಸ್, ಎಸ್ಪಿ, ಡಿಎಂಕೆ, ಎಡಪಕ್ಷಗಳು, ಶಿವಸೇನಾ (ಯುಬಿಟಿ), ಎನ್ಸಿಪಿ (ಎಸ್ಪಿ), ಆರ್ಜೆಡಿ, ಐಯುಎಂಎಲ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಕುರಿತು ವಿರೋಧ ಪಕ್ಷಗಳು ಈ ಮುನ್ನ ಸಂಸತ್ನ ಎರಡೂ ಸದನಗಳಲ್ಲಿ ನೀಡಿದ್ದ ನೋಟಿಸ್ಅನ್ನು ತಿರಸ್ಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ಕೋರಿ ವಿರೋಧ ಪಕ್ಷಗಳು ಶುಕ್ರವಾರ ರಾಜ್ಯಸಭೆಯಲ್ಲಿ ಹೊಸ ನೋಟಿಸ್ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.</p>.<p>‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಪಕ್ಷಪಾತ ತೋರುವುದನ್ನು ಮುಂದುವರಿಸಿದ್ದಾರೆ’ ಎಂಬ ಹೊಸ ಆರೋಪವನ್ನು ಸಿಇಸಿ ವಿರುದ್ಧ ಮಾಡಲಾಗಿದೆ.</p>.<p>ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಏಪ್ರಿಲ್ 18ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ನೀಡಿದ ದೂರಿನ ಬಗ್ಗೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿವೆ.</p>.<p>ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಟಿಎಂಸಿ ನಾಯಕಿ ಸಾಗರಿಕಾ ಘೋಷ್ ಅವರು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಸಲ್ಲಿಸಿದ್ದಾರೆ. ನೋಟಿಸ್ಗೆ 50 ಸಹಿಗಳ ಅವಶ್ಯಕತೆಯಿದ್ದು, ರಾಜ್ಯಸಭೆಯ 73 ಸದಸ್ಯರು ಸಹಿ ಹಾಕಿದ್ದಾರೆ.</p>.<p>ಕಾಂಗ್ರೆಸ್, ಎಸ್ಪಿ, ಡಿಎಂಕೆ, ಎಡಪಕ್ಷಗಳು, ಶಿವಸೇನಾ (ಯುಬಿಟಿ), ಎನ್ಸಿಪಿ (ಎಸ್ಪಿ), ಆರ್ಜೆಡಿ, ಐಯುಎಂಎಲ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಕುರಿತು ವಿರೋಧ ಪಕ್ಷಗಳು ಈ ಮುನ್ನ ಸಂಸತ್ನ ಎರಡೂ ಸದನಗಳಲ್ಲಿ ನೀಡಿದ್ದ ನೋಟಿಸ್ಅನ್ನು ತಿರಸ್ಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>