<p><strong>ನವದೆಹಲಿ:</strong> ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ವಿರೋಧಿಸಿ ಸಂಸತ್ನಲ್ಲಿ ಬಜೆಟ್ ಮಂಡನೆ ವೇಳೆ ತೀವ್ರ ಪ್ರತಿಭಟನೆ ನಡೆಸಲು ವಿರೋಧ ಪಕ್ಷಗಳು ನಿರ್ಧರಿಸಿವೆ ಎಂದು ಮೂಲಗಳು ಬುಧವಾರ ಹೇಳಿವೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ವಿರೋಧ ಪಕ್ಷಗಳ ನಾಯಕರು, ಸೊರೇನ್ ಬಂಧನದ ಹಿನ್ನೆಲೆಯಲ್ಲಿ ನಡೆದ ಬೆಳವಣಿಗೆಗಳ ಕುರಿತು ಚರ್ಚಿಸಿದರು ಎಂದು ತಿಳಿಸಿವೆ.</p>.<p>ಎನ್ಸಿಪಿ ವರಿಷ್ಠ ಶರದ್ ಪವಾರ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಟಿ.ಆರ್.ಬಾಲು ಸಭೆಯಲ್ಲಿ ಇದ್ದರು.</p>.<p><strong>ಖರ್ಗೆಯಿಂದ ಮತ್ತೊಂದು ಸಭೆ:</strong> ಬಜೆಟ್ ಮಂಡನೆಗೂ ಮುನ್ನ, ವಿರೋಧ ಪಕ್ಷಗಳ ಸದನ ನಾಯಕರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಹೋರಾಟದ ಕಾರ್ಯತಂತ್ರ ಕುರಿತು ಚರ್ಚಿಸಲು ಸಭೆ ನಡೆಸುವರು ಎಂದೂ ಮೂಲಗಳು ಹೇಳಿವೆ.</p>.<p><strong>ರಾಹುಲ್ ಗಾಂಧಿ ಪೋಸ್ಟ್:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೇಮಂತ್ ಸೊರೇನ್ ಬಂಧನ ಟೀಕಿಸಿ, ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>‘ಇ.ಡಿ, ಸಿಬಿಐ, ಐಟಿ ಇಲಾಖೆಗಳು ಸರ್ಕಾರದ ಸಂಸ್ಥೆಗಳಾಗಿ ಉಳಿದಿಲ್ಲ. ಅವು ಈಗ, ಬಿಜೆಪಿಯ ‘ವಿಪಕ್ಷ ನಿರ್ಮೂಲನೆ ವಿಭಾಗ’ವಾಗಿವೆ’ ಎಂದಿದ್ದಾರೆ.</p>.<p>‘ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ಅಧಿಕಾರದಲ್ಲಿರುವ ಗೀಳು. ಇದಕ್ಕಾಗಿ ಅದು ಪ್ರಜಾತಂತ್ರ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ’ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p><strong>ಪ್ರಕರಣ ಕುರಿತ ಬೆಳವಣಿಗೆಗಳು</strong></p>.<p>* ತಮ್ಮ ಬಂಧನ ಪ್ರಶ್ನಿಸಿ ಹೇಮಂತ್ ಸೊರೇನ್ ಅವರು ಬುಧವಾರ ರಾತ್ರಿ ಜಾರ್ಖಂಡ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಅನುಭಾ ರಾವತ್ ಚೌಧರಿ ಅವರಿರುವ ನ್ಯಾಯಪೀಠವು ಗುರುವಾರ ಬೆಳಿಗ್ಗೆ 10.30ಕ್ಕೆ ಅರ್ಜಿ ವಿಚಾರಣೆ ನಡೆಸಲಿದೆ</p>.<p>* ತಮ್ಮ ದೆಹಲಿ ನಿವಾಸದಲ್ಲಿ ಶೋಧ ಕೈಗೊಂಡಿದ್ದ ಇ.ಡಿ ಹಿರಿಯ ಅಧಿಕಾರಿಗಳ ವಿರುದ್ಧ ಹೇಮಂತ್ ಸೊರೇನ್ ಅವರು ರಾಂಚಿಯ ಎಸ್ಸಿ/ಎಸ್ಟಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಎಫ್ಐಆರ್ ದಾಖಲಾಗಿದೆ. </p>.<p>* ತಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ತಮ್ಮನ್ನು ಬಂಧಿಸುವುದಕ್ಕೆ ಸಂಬಂಧಿಸಿದ ಮೆಮೊಗೆ ಸಹಿ ಹಾಕಲು ಹೇಮಂತ್ ಸೊರೇನ್ ನಿರಾಕರಿಸಿದರು ಎಂದು ಮೂಲಗಳು ಹೇಳಿವೆ </p>.<p>* ಪ್ರಕರಣಕ್ಕೆ ಸಂಬಂಧಿಸಿ, 2011ರ ಬ್ಯಾಚ್ ಐಎಎಸ್ ಅಧಿಕಾರಿ ಛವಿ ರಂಜನ್ ಸೇರಿದಂತೆ ಜಾರಿ ನಿರ್ದೇಶನಾಲಯವು ಈ ವರೆಗೆ 14 ಮಂದಿಯನ್ನು ಬಂಧಿಸಿದೆ. ಛವಿ ರಂಜನ್ ಅವರು ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾಗಿ, ರಾಂಚಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ವಿರೋಧಿಸಿ ಸಂಸತ್ನಲ್ಲಿ ಬಜೆಟ್ ಮಂಡನೆ ವೇಳೆ ತೀವ್ರ ಪ್ರತಿಭಟನೆ ನಡೆಸಲು ವಿರೋಧ ಪಕ್ಷಗಳು ನಿರ್ಧರಿಸಿವೆ ಎಂದು ಮೂಲಗಳು ಬುಧವಾರ ಹೇಳಿವೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ವಿರೋಧ ಪಕ್ಷಗಳ ನಾಯಕರು, ಸೊರೇನ್ ಬಂಧನದ ಹಿನ್ನೆಲೆಯಲ್ಲಿ ನಡೆದ ಬೆಳವಣಿಗೆಗಳ ಕುರಿತು ಚರ್ಚಿಸಿದರು ಎಂದು ತಿಳಿಸಿವೆ.</p>.<p>ಎನ್ಸಿಪಿ ವರಿಷ್ಠ ಶರದ್ ಪವಾರ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಟಿ.ಆರ್.ಬಾಲು ಸಭೆಯಲ್ಲಿ ಇದ್ದರು.</p>.<p><strong>ಖರ್ಗೆಯಿಂದ ಮತ್ತೊಂದು ಸಭೆ:</strong> ಬಜೆಟ್ ಮಂಡನೆಗೂ ಮುನ್ನ, ವಿರೋಧ ಪಕ್ಷಗಳ ಸದನ ನಾಯಕರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಹೋರಾಟದ ಕಾರ್ಯತಂತ್ರ ಕುರಿತು ಚರ್ಚಿಸಲು ಸಭೆ ನಡೆಸುವರು ಎಂದೂ ಮೂಲಗಳು ಹೇಳಿವೆ.</p>.<p><strong>ರಾಹುಲ್ ಗಾಂಧಿ ಪೋಸ್ಟ್:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೇಮಂತ್ ಸೊರೇನ್ ಬಂಧನ ಟೀಕಿಸಿ, ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>‘ಇ.ಡಿ, ಸಿಬಿಐ, ಐಟಿ ಇಲಾಖೆಗಳು ಸರ್ಕಾರದ ಸಂಸ್ಥೆಗಳಾಗಿ ಉಳಿದಿಲ್ಲ. ಅವು ಈಗ, ಬಿಜೆಪಿಯ ‘ವಿಪಕ್ಷ ನಿರ್ಮೂಲನೆ ವಿಭಾಗ’ವಾಗಿವೆ’ ಎಂದಿದ್ದಾರೆ.</p>.<p>‘ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ಅಧಿಕಾರದಲ್ಲಿರುವ ಗೀಳು. ಇದಕ್ಕಾಗಿ ಅದು ಪ್ರಜಾತಂತ್ರ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ’ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p><strong>ಪ್ರಕರಣ ಕುರಿತ ಬೆಳವಣಿಗೆಗಳು</strong></p>.<p>* ತಮ್ಮ ಬಂಧನ ಪ್ರಶ್ನಿಸಿ ಹೇಮಂತ್ ಸೊರೇನ್ ಅವರು ಬುಧವಾರ ರಾತ್ರಿ ಜಾರ್ಖಂಡ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಅನುಭಾ ರಾವತ್ ಚೌಧರಿ ಅವರಿರುವ ನ್ಯಾಯಪೀಠವು ಗುರುವಾರ ಬೆಳಿಗ್ಗೆ 10.30ಕ್ಕೆ ಅರ್ಜಿ ವಿಚಾರಣೆ ನಡೆಸಲಿದೆ</p>.<p>* ತಮ್ಮ ದೆಹಲಿ ನಿವಾಸದಲ್ಲಿ ಶೋಧ ಕೈಗೊಂಡಿದ್ದ ಇ.ಡಿ ಹಿರಿಯ ಅಧಿಕಾರಿಗಳ ವಿರುದ್ಧ ಹೇಮಂತ್ ಸೊರೇನ್ ಅವರು ರಾಂಚಿಯ ಎಸ್ಸಿ/ಎಸ್ಟಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಎಫ್ಐಆರ್ ದಾಖಲಾಗಿದೆ. </p>.<p>* ತಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ತಮ್ಮನ್ನು ಬಂಧಿಸುವುದಕ್ಕೆ ಸಂಬಂಧಿಸಿದ ಮೆಮೊಗೆ ಸಹಿ ಹಾಕಲು ಹೇಮಂತ್ ಸೊರೇನ್ ನಿರಾಕರಿಸಿದರು ಎಂದು ಮೂಲಗಳು ಹೇಳಿವೆ </p>.<p>* ಪ್ರಕರಣಕ್ಕೆ ಸಂಬಂಧಿಸಿ, 2011ರ ಬ್ಯಾಚ್ ಐಎಎಸ್ ಅಧಿಕಾರಿ ಛವಿ ರಂಜನ್ ಸೇರಿದಂತೆ ಜಾರಿ ನಿರ್ದೇಶನಾಲಯವು ಈ ವರೆಗೆ 14 ಮಂದಿಯನ್ನು ಬಂಧಿಸಿದೆ. ಛವಿ ರಂಜನ್ ಅವರು ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾಗಿ, ರಾಂಚಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>