<p><strong>ನವದೆಹಲಿ:</strong> ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿ ಪ್ರಕ್ರಿಯೆ ಆರಂಭಿಸುವಂತೆ ಕೋರಿ ಸಂಸತ್ತಿನಲ್ಲಿ ಹೊಸದಾಗಿ ನೋಟಿಸ್ ಸಲ್ಲಿಸಲು ವಿರೋಧ ಪಕ್ಷಗಳು ಚಿಂತಿಸಿವೆ.</p>.<p>ಈ ಹಿಂದಿನ ನೋಟಿಸ್ ತಿರಸ್ಕೃತಗೊಂಡಿದ್ದರಿಂದ, ವಿರೋಧ ಪಕ್ಷಗಳ ಹಲವು ಮುಖಂಡರು ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಶನಿವಾರ ತಿಳಿಸಿವೆ.</p>.<p>ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳ ಕನಿಷ್ಠ ಐವರು ಸಂಸದರು ಸಿಇಸಿ ಪದಚ್ಯುತಿ ಪ್ರಕ್ರಿಯೆ ಆರಂಭಿಸಲು ಹೊಸದಾಗಿ ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.</p>.<p>ಪದಚ್ಯುತಿ ನೋಟಿಸ್ ಅನ್ನು ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಒಂದು ಸದನದಲ್ಲಿ ಸಲ್ಲಿಸಬೇಕೋ, ಇಲ್ಲವೇ ಈ ಹಿಂದಿನ ಬಾರಿಯಂತೆ ಎರಡೂ ಸದನಗಳಲ್ಲಿ ಸಲ್ಲಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂಬುದು ಗೊತ್ತಾಗಿದೆ.</p>.<p>ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಗೆ ಸೋಲುಂಟಾಗಿದ್ದು, ಇದರಿಂದ ಉತ್ತೇಜಿತರಾದ ವಿರೋಧ ಪಕ್ಷಗಳ ಮುಖಂಡರು ಸಿಇಸಿ ವಜಾ ಪ್ರಕ್ರಿಯೆ ಆರಂಭಿಸುವಂತೆ ಕೋರುವ ನೋಟಿಸ್ಗೆ ಹೆಚ್ಚಿನ ಸಂಸದರ ಸಹಿ ಪಡೆಯುವ ಉಮೇದಿನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿ ಪ್ರಕ್ರಿಯೆ ಆರಂಭಿಸುವಂತೆ ಕೋರಿ ಸಂಸತ್ತಿನಲ್ಲಿ ಹೊಸದಾಗಿ ನೋಟಿಸ್ ಸಲ್ಲಿಸಲು ವಿರೋಧ ಪಕ್ಷಗಳು ಚಿಂತಿಸಿವೆ.</p>.<p>ಈ ಹಿಂದಿನ ನೋಟಿಸ್ ತಿರಸ್ಕೃತಗೊಂಡಿದ್ದರಿಂದ, ವಿರೋಧ ಪಕ್ಷಗಳ ಹಲವು ಮುಖಂಡರು ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಶನಿವಾರ ತಿಳಿಸಿವೆ.</p>.<p>ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳ ಕನಿಷ್ಠ ಐವರು ಸಂಸದರು ಸಿಇಸಿ ಪದಚ್ಯುತಿ ಪ್ರಕ್ರಿಯೆ ಆರಂಭಿಸಲು ಹೊಸದಾಗಿ ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.</p>.<p>ಪದಚ್ಯುತಿ ನೋಟಿಸ್ ಅನ್ನು ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಒಂದು ಸದನದಲ್ಲಿ ಸಲ್ಲಿಸಬೇಕೋ, ಇಲ್ಲವೇ ಈ ಹಿಂದಿನ ಬಾರಿಯಂತೆ ಎರಡೂ ಸದನಗಳಲ್ಲಿ ಸಲ್ಲಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂಬುದು ಗೊತ್ತಾಗಿದೆ.</p>.<p>ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಗೆ ಸೋಲುಂಟಾಗಿದ್ದು, ಇದರಿಂದ ಉತ್ತೇಜಿತರಾದ ವಿರೋಧ ಪಕ್ಷಗಳ ಮುಖಂಡರು ಸಿಇಸಿ ವಜಾ ಪ್ರಕ್ರಿಯೆ ಆರಂಭಿಸುವಂತೆ ಕೋರುವ ನೋಟಿಸ್ಗೆ ಹೆಚ್ಚಿನ ಸಂಸದರ ಸಹಿ ಪಡೆಯುವ ಉಮೇದಿನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>