<p><strong>ನವದೆಹಲಿ:</strong> ‘ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಸಂಸದ ಫಾರೂಕ್ ಅಬ್ದುಲ್ಲಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿಡಲಾಗಿದೆ’ ಎಂದು ಆರೋಪಿಸಿದ ಪ್ರತಿಪಕ್ಷಗಳ ನಾಯಕರು ಬುಧವಾರ ಲೋಕಸಭೆಯಲ್ಲಿ ಗದ್ದಲ ನಡೆಸಿ, ಸದನ ಬಹಿಷ್ಕರಿಸಿ ಹೊರನಡೆದರು.</p>.<p>ಕೇಂದ್ರ ಸರ್ಕಾರ ಆಗಸ್ಟ್ 5ರಂದುಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿತ್ತು. ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಫಾರೂಕ್ ಅಬ್ದುಲ್ಲಾ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು.</p>.<p>‘ಫಾರೂಕ್ ಅಬ್ದುಲ್ಲಾ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಯಾವುದೇ ಕಾರಣ ನೀಡದೇ ಆರು ತಿಂಗಳಿನಿಂದ ಅಕ್ರಮವಾಗಿ ಜೈಲಿನಲ್ಲಿರಿಸಲಾಗಿದೆ. ಎಲ್ಲರನ್ನೂ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದರು.</p>.<p>ಬಳಿಕ ಪ್ರತಿಪಕ್ಷಗಳ ನಾಯಕರು ಸದನವನ್ನು ಬಹಿಷ್ಕರಿಸಿ ಸದನಲ್ಲಿ ಹೊರನಡೆದರು.</p>.<p>ಅಬ್ದುಲ್ಲಾ ಬಂಧನ ಕುರಿತು ಮಾತನಾಡಿದ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ, ಸರ್ವ ಪಕ್ಷಗಳ ಸಭೆಯಲ್ಲೂ ಈ ವಿಷಯ ಚರ್ಚಿಸಲಾಗಿದೆ ಎಂದರು. ‘ಕೇಂದ್ರ ಸರ್ಕಾರ, ಕನಿಷ್ಠ ಅಬ್ದುಲ್ಲಾ ಅವರ ಆರೋಗ್ಯದ ಸ್ಥಿತಿಯ ಬಗ್ಗೆಯಾದರೂ ಮಾಹಿತಿ ನೀಡಬೇಕು’ ಎಂದು ಅವರು ಮನವಿ ಮಾಡಿದರು.</p>.<p>ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಸಂಸದ ಕೆ. ಸುರೇಶ್, ‘ಅಬ್ದುಲ್ಲಾ ಅವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಖಾತ್ರಿ ಪಡಿಸುವುದು ಸರ್ಕಾರ ಮತ್ತು ಸದನದ ಜವಾಬ್ದಾರಿಯಾಗಿದೆ’ ಎಂದರು.</p>.<p><strong>ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಕಳವಳ: </strong>ಫಾರೂಕ್ ಅಬ್ದುಲ್ಲಾ ಬಂಧನ ಕುರಿತು ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಕಳವಳ ವ್ಯಕ್ತಪಡಿಸಿದವು.ಎನ್ಸಿಪಿ, ಡಿಎಂಕೆ, ಟಿಡಿಪಿ ಮತ್ತು ಆರ್ಜೆಡಿ ಸಂಸದರು ಬಂಧನದ ಹಿಂದಿರುವ ಉದ್ದೇಶವನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದರು.</p>.<p><strong>ಜಮ್ಮು ಮತ್ತು ಕಾಶ್ಮೀರ: ಇಬ್ಬರು ನಾಯಕರ ಬಿಡುಗಡೆ</strong></p>.<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜದ್ ಲೋನ್, ಪಿಡಿಪಿ ನಾಯಕ ವಹೀದ್ ಪರ್ರಾ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಆಪ್ತ ಸಹಾಯಕನನ್ನು ಬುಧವಾರ ಬಂಧನದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋನ್ ಮತ್ತು ಪರ್ರಾ ಅವರನ್ನು ಮುನ್ನೆಚ್ಚರಿಕೆಯ ಕ್ರಮವಾಗಿ 180 ದಿನಗಳ ಹಿಂದೆ ಬಂಧಿಸಲಾಗಿತ್ತು.ಲೋನ್ ಮತ್ತು ಪರ್ರಾ ಬಿಡುಗಡೆಯ ನಂತರ 13 ರಾಜಕೀಯ ನಾಯಕರನ್ನು ಎಂಎಲ್ಎ ಹಾಸ್ಟೆಲ್ನಲ್ಲಿ ಇನ್ನೂ ಬಂಧನದಲ್ಲಿರಿಸಲಾಗಿದೆ. ಹಾಸ್ಟೆಲ್ ಅನ್ನು ತಾತ್ಕಾಲಿಕವಾಗಿ ಜೈಲಾಗಿ ಪರಿವರ್ತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಸಂಸದ ಫಾರೂಕ್ ಅಬ್ದುಲ್ಲಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿಡಲಾಗಿದೆ’ ಎಂದು ಆರೋಪಿಸಿದ ಪ್ರತಿಪಕ್ಷಗಳ ನಾಯಕರು ಬುಧವಾರ ಲೋಕಸಭೆಯಲ್ಲಿ ಗದ್ದಲ ನಡೆಸಿ, ಸದನ ಬಹಿಷ್ಕರಿಸಿ ಹೊರನಡೆದರು.</p>.<p>ಕೇಂದ್ರ ಸರ್ಕಾರ ಆಗಸ್ಟ್ 5ರಂದುಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿತ್ತು. ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಫಾರೂಕ್ ಅಬ್ದುಲ್ಲಾ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು.</p>.<p>‘ಫಾರೂಕ್ ಅಬ್ದುಲ್ಲಾ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಯಾವುದೇ ಕಾರಣ ನೀಡದೇ ಆರು ತಿಂಗಳಿನಿಂದ ಅಕ್ರಮವಾಗಿ ಜೈಲಿನಲ್ಲಿರಿಸಲಾಗಿದೆ. ಎಲ್ಲರನ್ನೂ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದರು.</p>.<p>ಬಳಿಕ ಪ್ರತಿಪಕ್ಷಗಳ ನಾಯಕರು ಸದನವನ್ನು ಬಹಿಷ್ಕರಿಸಿ ಸದನಲ್ಲಿ ಹೊರನಡೆದರು.</p>.<p>ಅಬ್ದುಲ್ಲಾ ಬಂಧನ ಕುರಿತು ಮಾತನಾಡಿದ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ, ಸರ್ವ ಪಕ್ಷಗಳ ಸಭೆಯಲ್ಲೂ ಈ ವಿಷಯ ಚರ್ಚಿಸಲಾಗಿದೆ ಎಂದರು. ‘ಕೇಂದ್ರ ಸರ್ಕಾರ, ಕನಿಷ್ಠ ಅಬ್ದುಲ್ಲಾ ಅವರ ಆರೋಗ್ಯದ ಸ್ಥಿತಿಯ ಬಗ್ಗೆಯಾದರೂ ಮಾಹಿತಿ ನೀಡಬೇಕು’ ಎಂದು ಅವರು ಮನವಿ ಮಾಡಿದರು.</p>.<p>ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಸಂಸದ ಕೆ. ಸುರೇಶ್, ‘ಅಬ್ದುಲ್ಲಾ ಅವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಖಾತ್ರಿ ಪಡಿಸುವುದು ಸರ್ಕಾರ ಮತ್ತು ಸದನದ ಜವಾಬ್ದಾರಿಯಾಗಿದೆ’ ಎಂದರು.</p>.<p><strong>ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಕಳವಳ: </strong>ಫಾರೂಕ್ ಅಬ್ದುಲ್ಲಾ ಬಂಧನ ಕುರಿತು ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಕಳವಳ ವ್ಯಕ್ತಪಡಿಸಿದವು.ಎನ್ಸಿಪಿ, ಡಿಎಂಕೆ, ಟಿಡಿಪಿ ಮತ್ತು ಆರ್ಜೆಡಿ ಸಂಸದರು ಬಂಧನದ ಹಿಂದಿರುವ ಉದ್ದೇಶವನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದರು.</p>.<p><strong>ಜಮ್ಮು ಮತ್ತು ಕಾಶ್ಮೀರ: ಇಬ್ಬರು ನಾಯಕರ ಬಿಡುಗಡೆ</strong></p>.<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜದ್ ಲೋನ್, ಪಿಡಿಪಿ ನಾಯಕ ವಹೀದ್ ಪರ್ರಾ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಆಪ್ತ ಸಹಾಯಕನನ್ನು ಬುಧವಾರ ಬಂಧನದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋನ್ ಮತ್ತು ಪರ್ರಾ ಅವರನ್ನು ಮುನ್ನೆಚ್ಚರಿಕೆಯ ಕ್ರಮವಾಗಿ 180 ದಿನಗಳ ಹಿಂದೆ ಬಂಧಿಸಲಾಗಿತ್ತು.ಲೋನ್ ಮತ್ತು ಪರ್ರಾ ಬಿಡುಗಡೆಯ ನಂತರ 13 ರಾಜಕೀಯ ನಾಯಕರನ್ನು ಎಂಎಲ್ಎ ಹಾಸ್ಟೆಲ್ನಲ್ಲಿ ಇನ್ನೂ ಬಂಧನದಲ್ಲಿರಿಸಲಾಗಿದೆ. ಹಾಸ್ಟೆಲ್ ಅನ್ನು ತಾತ್ಕಾಲಿಕವಾಗಿ ಜೈಲಾಗಿ ಪರಿವರ್ತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>