ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರತಿಭಟನಾ ನಿರತ ರೈತರ ಬೇಡಿಕೆಯನ್ನು ಬೆಂಬಲಿಸಿ ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣವನ್ನು 20ಕ್ಕೂ ಹೆಚ್ಚು ವಿರೋಧ ಪಕ್ಷಗಳು ಬಹಿಷ್ಕರಿಸಿದವು. ರಾಷ್ಟ್ರಪತಿ ಮಾಡಿದ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್, ಎನ್ಸಿಪಿ, ಶಿವಸೇನಾ, ಟಿಎಂಸಿ, ಬಿಎಸ್ಪಿ ಸೇರಿ 16 ವಿರೋಧ ಪಕ್ಷಗಳು ನಿರ್ಧರಿಸಿದ್ದವು. ಭಾಷಣವನ್ನು ಬಹಿಷ್ಕರಿಸುವುದಾಗಿ ಆಮ್ ಅದ್ಮಿ ಪಕ್ಷವು ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿತ್ತು.