<p><strong>ಕೂಚ್ ಬೆಹಾರ್:</strong> ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಚಾರದಲ್ಲಿ ಸುಳ್ಳು ಹಬ್ಬಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತ ಮಾತೆಯ ಮೇಲೆ ನಂಬಿಕೆ ಇರಿಸಿದವರಿಗೆ ಪೌರತ್ವ ನೀಡುವುದು ಮೋದಿ ಕಿ ಗ್ಯಾರಂಟಿ’ ಎಂದು ಒತ್ತಿ ಹೇಳಿದರು.</p>.<p>ಪಶ್ಚಿಮ ಬಂಗಾಳದ ಕೂಚ್ ಬಿಹಾರ್ನಲ್ಲಿ ಗುರುವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ದೌರ್ಜನ್ಯಕ್ಕೆ ಒಳಗಾದ ಸಮುದಾಯಗಳನ್ನು ಅವರು (ಇಂಡಿಯಾ ಒಕ್ಕೂಟ) ಕಡೆಗಣಿಸಿದ್ದಾರೆ. ನಾವು ತಂದಿರುವ ಸಿಎಎ ವಿರುದ್ಧ ಅವರು ಸುಳ್ಳು ಹರಡುತ್ತಿದ್ದಾರೆ’ ಎಂದು ದೂರಿದರು.</p><p>ಸಂದೇಶ್ಖಾಲಿ ಘಟನೆಯನ್ನು ಉಲ್ಲೇಖಿಸಿದ ಪ್ರಧಾನಿ, ‘ಸಂದೇಶ್ಖಾಲಿ ಪ್ರಕರಣದ ತಪ್ಪಿತಸ್ಥರು ತಮ್ಮ ಜೀವನದ ಇನ್ನುಳಿದ ಅವಧಿಯನ್ನು ಜೈಲಿನಲ್ಲಿ ಕಳೆಯಲಿದ್ದಾರೆ’ ಎಂದರು.</p><p>‘ಬಂಗಾಳದಲ್ಲಿ ಮಹಿಳೆಯರು ಎದುರಿಸುತ್ತಿರುವ ದೌರ್ಜನ್ಯವನ್ನು ಕೊನೆಗಾಣಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಸಂದೇಶ್ಖಾಲಿ ಘಟನೆಯ ಹಿಂದಿರುವವರನ್ನು ರಕ್ಷಿಸಲು ಟಿಎಂಸಿ ಹೇಗೆ ಪ್ರಯತ್ನಿಸಿದೆ ಎಂಬುದನ್ನು ಇಡೀ ದೇಶವೇ ನೋಡಿದೆ. ಸಂದೇಶ್ಖಾಲಿ ಮಹಿಳೆಯರಿಗೆ ಇಂತಹ ಸ್ಥಿತಿ ಎದುರಾಗಲು ಟಿಎಂಸಿಯ ದುರಾಡಳಿತವೇ ಕಾರಣ’ ಎಂದು ಟೀಕಿಸಿದರು.</p><p>‘ಭ್ರಷ್ಟರಿಗೆ ಶಿಕ್ಷೆಯಾಗುವುದನ್ನು ನಾನು ಖಾತರಿಪಡಿಸುತ್ತೇನೆ. ಬಡವರಿಗೆ ನ್ಯಾಯ ಸಿಗಬೇಕು. ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟರ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಚ್ ಬೆಹಾರ್:</strong> ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಚಾರದಲ್ಲಿ ಸುಳ್ಳು ಹಬ್ಬಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತ ಮಾತೆಯ ಮೇಲೆ ನಂಬಿಕೆ ಇರಿಸಿದವರಿಗೆ ಪೌರತ್ವ ನೀಡುವುದು ಮೋದಿ ಕಿ ಗ್ಯಾರಂಟಿ’ ಎಂದು ಒತ್ತಿ ಹೇಳಿದರು.</p>.<p>ಪಶ್ಚಿಮ ಬಂಗಾಳದ ಕೂಚ್ ಬಿಹಾರ್ನಲ್ಲಿ ಗುರುವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ದೌರ್ಜನ್ಯಕ್ಕೆ ಒಳಗಾದ ಸಮುದಾಯಗಳನ್ನು ಅವರು (ಇಂಡಿಯಾ ಒಕ್ಕೂಟ) ಕಡೆಗಣಿಸಿದ್ದಾರೆ. ನಾವು ತಂದಿರುವ ಸಿಎಎ ವಿರುದ್ಧ ಅವರು ಸುಳ್ಳು ಹರಡುತ್ತಿದ್ದಾರೆ’ ಎಂದು ದೂರಿದರು.</p><p>ಸಂದೇಶ್ಖಾಲಿ ಘಟನೆಯನ್ನು ಉಲ್ಲೇಖಿಸಿದ ಪ್ರಧಾನಿ, ‘ಸಂದೇಶ್ಖಾಲಿ ಪ್ರಕರಣದ ತಪ್ಪಿತಸ್ಥರು ತಮ್ಮ ಜೀವನದ ಇನ್ನುಳಿದ ಅವಧಿಯನ್ನು ಜೈಲಿನಲ್ಲಿ ಕಳೆಯಲಿದ್ದಾರೆ’ ಎಂದರು.</p><p>‘ಬಂಗಾಳದಲ್ಲಿ ಮಹಿಳೆಯರು ಎದುರಿಸುತ್ತಿರುವ ದೌರ್ಜನ್ಯವನ್ನು ಕೊನೆಗಾಣಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಸಂದೇಶ್ಖಾಲಿ ಘಟನೆಯ ಹಿಂದಿರುವವರನ್ನು ರಕ್ಷಿಸಲು ಟಿಎಂಸಿ ಹೇಗೆ ಪ್ರಯತ್ನಿಸಿದೆ ಎಂಬುದನ್ನು ಇಡೀ ದೇಶವೇ ನೋಡಿದೆ. ಸಂದೇಶ್ಖಾಲಿ ಮಹಿಳೆಯರಿಗೆ ಇಂತಹ ಸ್ಥಿತಿ ಎದುರಾಗಲು ಟಿಎಂಸಿಯ ದುರಾಡಳಿತವೇ ಕಾರಣ’ ಎಂದು ಟೀಕಿಸಿದರು.</p><p>‘ಭ್ರಷ್ಟರಿಗೆ ಶಿಕ್ಷೆಯಾಗುವುದನ್ನು ನಾನು ಖಾತರಿಪಡಿಸುತ್ತೇನೆ. ಬಡವರಿಗೆ ನ್ಯಾಯ ಸಿಗಬೇಕು. ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟರ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>