<p><strong>ನವದೆಹಲಿ</strong>: ಮೊದಲ ಬಾರಿಗೆ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಿಯಾಗಿರುವುದು ಪ್ರತಿಪಕ್ಷಗಳ ನಿರಾಶೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.</p>.ನೇಪಾಳದ ‘ಪ್ರಚಂಡ’ ಸರ್ಕಾರ ಪತನ ನಿಶ್ಚಿತ: CPN–UMLನ 8 ಸಚಿವರು ಇಂದು ರಾಜೀನಾಮೆ.ರಾಹುಲ್ ಗಾಂಧಿ ಉತ್ತಮ ಸ್ಟ್ಯಾಂಡ್ಅಪ್ ಕಾಮಿಡಿಯನ್ ಇದ್ದಂತೆ: ನಟಿ ಕಂಗನಾ ಲೇವಡಿ. <p>ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಸದಸ್ಯರೊಂದಿಗೆ ಸದನದಲ್ಲಿ ನಡೆದುಕೊಳ್ಳುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸದಸ್ಯರು ಸಂಸದೀಯ ನಿಯಮಗಳನ್ನು ಅನುಸರಿಸಬೇಕು. ಹಿರಿಯ ಸದಸ್ಯರ ಅನುಭವವನ್ನು ಪಡೆದುಕೊಳ್ಳಬೇಕು ಎಂದು ತಿಳಿರುವುದಾಗಿ ಮೂಲಗಳು ತಿಳಿಸಿವೆ.</p><p>ಮಾಧ್ಯಮಗಳ ಮುಂದೆ ಯಾವುದೇ ವಿಷಯಗಳ ಬಗ್ಗೆ ಹೇಳಿಕೆ ನೀಡುವ ಮೊದಲು ಆ ವಿಷಯಗಳ ಮಾಹಿತಿ ತಿಳಿದುಕೊಳ್ಳಬೇಕು. ತಮ್ಮ ಕ್ಷೇತ್ರಗಳ ಜನರೊಂದಿಗೆ ಸದಾ ಸಂಪರ್ಕದಲ್ಲಿ ಇರುವ ಮೂಲಕ ಮತದಾರರು ನೀಡಿದ ಬೆಂಬಲಕ್ಕೆ ಅವರಿಗೆ ಧನ್ಯವಾದ ಸಲ್ಲಿಸುವಂತೆ ಮೋದಿ ಸಲಹೆ ನೀಡಿದ್ದಾರೆ. </p>.ಹೊಸ ಕ್ರಿಮಿನಲ್ ಕಾನೂನು | ದೆಹಲಿಯ ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಸಭೆ ಆಯೋಜನೆ.ಆರ್ಎಸ್ಎಸ್ ವಿರುದ್ಧ ಖರ್ಗೆ ಟೀಕೆ: ಕಡತದಿಂದ ತೆಗೆಸಿದ ಸಭಾಪತಿ ಧನಕರ್.<p>ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಂಸದರಿಗೆ ಸಂಸತ್ತಿನ ವಿಷಯಗಳ ಕುರಿತು ಅಧ್ಯಯನ ಮಾಡಲು, ನಿಯಮಿತವಾಗಿ ಸಂಸತ್ತಿಗೆ ಹಾಜರಾಗಲು ಮತ್ತು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವಂತೆ ಮೋದಿ ಸೂಚಿಸಿರುವುದಾಗಿ ತಿಳಿಸಿದ್ದಾರೆ.</p><p>ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವುದಕ್ಕೆ ಎನ್ಡಿಎ ಸದಸ್ಯರಿಗೆ ಮೋದಿ ಅಭಿನಂದಿಸಿದ್ದಾರೆ ಎಂದು ರಿಜಿಜು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮೊದಲ ಬಾರಿಗೆ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಿಯಾಗಿರುವುದು ಪ್ರತಿಪಕ್ಷಗಳ ನಿರಾಶೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.</p>.ನೇಪಾಳದ ‘ಪ್ರಚಂಡ’ ಸರ್ಕಾರ ಪತನ ನಿಶ್ಚಿತ: CPN–UMLನ 8 ಸಚಿವರು ಇಂದು ರಾಜೀನಾಮೆ.ರಾಹುಲ್ ಗಾಂಧಿ ಉತ್ತಮ ಸ್ಟ್ಯಾಂಡ್ಅಪ್ ಕಾಮಿಡಿಯನ್ ಇದ್ದಂತೆ: ನಟಿ ಕಂಗನಾ ಲೇವಡಿ. <p>ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಸದಸ್ಯರೊಂದಿಗೆ ಸದನದಲ್ಲಿ ನಡೆದುಕೊಳ್ಳುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸದಸ್ಯರು ಸಂಸದೀಯ ನಿಯಮಗಳನ್ನು ಅನುಸರಿಸಬೇಕು. ಹಿರಿಯ ಸದಸ್ಯರ ಅನುಭವವನ್ನು ಪಡೆದುಕೊಳ್ಳಬೇಕು ಎಂದು ತಿಳಿರುವುದಾಗಿ ಮೂಲಗಳು ತಿಳಿಸಿವೆ.</p><p>ಮಾಧ್ಯಮಗಳ ಮುಂದೆ ಯಾವುದೇ ವಿಷಯಗಳ ಬಗ್ಗೆ ಹೇಳಿಕೆ ನೀಡುವ ಮೊದಲು ಆ ವಿಷಯಗಳ ಮಾಹಿತಿ ತಿಳಿದುಕೊಳ್ಳಬೇಕು. ತಮ್ಮ ಕ್ಷೇತ್ರಗಳ ಜನರೊಂದಿಗೆ ಸದಾ ಸಂಪರ್ಕದಲ್ಲಿ ಇರುವ ಮೂಲಕ ಮತದಾರರು ನೀಡಿದ ಬೆಂಬಲಕ್ಕೆ ಅವರಿಗೆ ಧನ್ಯವಾದ ಸಲ್ಲಿಸುವಂತೆ ಮೋದಿ ಸಲಹೆ ನೀಡಿದ್ದಾರೆ. </p>.ಹೊಸ ಕ್ರಿಮಿನಲ್ ಕಾನೂನು | ದೆಹಲಿಯ ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಸಭೆ ಆಯೋಜನೆ.ಆರ್ಎಸ್ಎಸ್ ವಿರುದ್ಧ ಖರ್ಗೆ ಟೀಕೆ: ಕಡತದಿಂದ ತೆಗೆಸಿದ ಸಭಾಪತಿ ಧನಕರ್.<p>ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಂಸದರಿಗೆ ಸಂಸತ್ತಿನ ವಿಷಯಗಳ ಕುರಿತು ಅಧ್ಯಯನ ಮಾಡಲು, ನಿಯಮಿತವಾಗಿ ಸಂಸತ್ತಿಗೆ ಹಾಜರಾಗಲು ಮತ್ತು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವಂತೆ ಮೋದಿ ಸೂಚಿಸಿರುವುದಾಗಿ ತಿಳಿಸಿದ್ದಾರೆ.</p><p>ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವುದಕ್ಕೆ ಎನ್ಡಿಎ ಸದಸ್ಯರಿಗೆ ಮೋದಿ ಅಭಿನಂದಿಸಿದ್ದಾರೆ ಎಂದು ರಿಜಿಜು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>