ಜೈಪುರ (ಪಿಟಿಐ): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್), ಹಸುವಿನ ಸಗಣಿ ಖರೀದಿಸುವುದು ಮತ್ತು ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅಥವಾ ಟ್ಯಾಬ್ಲೆಟ್ ವಿತರಣೆ ಸೇರಿದಂತೆ ಐದು ‘ಗ್ಯಾರಂಟಿ’ಗಳನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಶುಕ್ರವಾರ ಘೋಷಿಸಿದ್ದಾರೆ.