<p><strong>ಬಲಿಯಾ</strong>:ಮಿತ್ರಪಕ್ಷ ಬಿಜೆಪಿಗೆ ಎಚ್ಚರಿಕೆ ರವಾನಿಸಿರುವ ಸುಹಲ್ದೇವ್ ಭಾರತೀಯ ಸಮಾಜ ಪಕ್ಷವು (ಎಸ್ಬಿಎಸ್ಪಿ),ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಸ್ಪಿ–ಬಿಎಸ್ಪಿ ಮೈತ್ರಿಕೂಟದ ಜೊತೆ ಹೋಗುವ ಆಯ್ಕೆ ಮುಕ್ತವಾಗಿದೆ ಎಂದಿದೆ.</p>.<p>ಈ ಮೊದಲು ಎನ್ಡಿಎನಿಂದ ಹೊರನಡೆಯುವ ಬೆದರಿಕೆ ಹಾಕಿದ್ದ ಎಸ್ಬಿಎಸ್ಪಿ ಅಧ್ಯಕ್ಷ ಹಾಗೂ ಸಂಪುಟದ ಹಿರಿಯ ಸಚಿವ ಓಂಪ್ರಕಾಶ್ ರಾಜ್ಭರ್ ಅವರು ಬಿಜೆಪಿ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆಗಳ ಸಚಿವರಾಗಿರುವ ರಾಜ್ಭರ್ ಅವರು ಎಸ್ಪಿ ಅಥವಾ ಬಿಎಸ್ಪಿ ಜೊತೆ ಈ ಸಂಬಂಧ ಈತನಕ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<p><strong>ಮಮತಾ ಪರ ನಿಂತ ರಾಜ್ಭರ್:</strong></p>.<p>ಕೋಲ್ಕತ್ತದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಬಿಐ ನಡೆಯನ್ನು ಟೀಕಿಸಿದ್ದಾರೆ. ‘ಬಿಜೆಪಿಗೆ ಸೇರ್ಪಡೆಯಾಗಿರುವ ಶಾರದಾ ಹಗರಣದ ಮುಖ್ಯ ಆರೋಪಿ ಮನೆ ಮೇಲೆ ಸಿಬಿಐ ಏಕೆ ದಾಳಿ ನಡೆಸಿಲ್ಲ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ</strong>:ಮಿತ್ರಪಕ್ಷ ಬಿಜೆಪಿಗೆ ಎಚ್ಚರಿಕೆ ರವಾನಿಸಿರುವ ಸುಹಲ್ದೇವ್ ಭಾರತೀಯ ಸಮಾಜ ಪಕ್ಷವು (ಎಸ್ಬಿಎಸ್ಪಿ),ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಸ್ಪಿ–ಬಿಎಸ್ಪಿ ಮೈತ್ರಿಕೂಟದ ಜೊತೆ ಹೋಗುವ ಆಯ್ಕೆ ಮುಕ್ತವಾಗಿದೆ ಎಂದಿದೆ.</p>.<p>ಈ ಮೊದಲು ಎನ್ಡಿಎನಿಂದ ಹೊರನಡೆಯುವ ಬೆದರಿಕೆ ಹಾಕಿದ್ದ ಎಸ್ಬಿಎಸ್ಪಿ ಅಧ್ಯಕ್ಷ ಹಾಗೂ ಸಂಪುಟದ ಹಿರಿಯ ಸಚಿವ ಓಂಪ್ರಕಾಶ್ ರಾಜ್ಭರ್ ಅವರು ಬಿಜೆಪಿ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆಗಳ ಸಚಿವರಾಗಿರುವ ರಾಜ್ಭರ್ ಅವರು ಎಸ್ಪಿ ಅಥವಾ ಬಿಎಸ್ಪಿ ಜೊತೆ ಈ ಸಂಬಂಧ ಈತನಕ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<p><strong>ಮಮತಾ ಪರ ನಿಂತ ರಾಜ್ಭರ್:</strong></p>.<p>ಕೋಲ್ಕತ್ತದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಬಿಐ ನಡೆಯನ್ನು ಟೀಕಿಸಿದ್ದಾರೆ. ‘ಬಿಜೆಪಿಗೆ ಸೇರ್ಪಡೆಯಾಗಿರುವ ಶಾರದಾ ಹಗರಣದ ಮುಖ್ಯ ಆರೋಪಿ ಮನೆ ಮೇಲೆ ಸಿಬಿಐ ಏಕೆ ದಾಳಿ ನಡೆಸಿಲ್ಲ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>