ಇನ್ನೊಂದೆಡೆ, ‘ಕಳೆದ 15 ವರ್ಷಗಳಲ್ಲಿ ಬಿಹಾರದಲ್ಲಿ ಏನು ಬದಲಾವಣೆಯಾಗಿದೆ’ ಎಂದು ಸಂಸದ ಹಾಗೂ ಎಲ್ಜೆಪಿ ವರಿಷ್ಠ ರಾಮವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಇತ್ತೀಚೆಗೆ ಪ್ರಶ್ನಿಸಿದ್ದರು. ಕೋವಿಡ್–19 ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕು ಎಂದು ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಆಗ್ರಹಿಸಿದ್ದರು. ಈ ಹೇಳಿಕೆಗೆ ಚಿರಾಗ್ ಸಹಮತ ವ್ಯಕ್ತಪಡಿಸಿದ್ದರು. ಇದು ಸಹ ಜೆಡಿಯು ತೀಕ್ಷ್ಣವಾಗಿ ಪ್ರತಿಕ್ರಿಯಿಸಲು ಕಾರಣ ಎನ್ನಲಾಗುತ್ತಿದೆ.