ಹರಿಯಾಣದಲ್ಲಿ ಪಂಚಾಯಿತಿ ಚುನಾವಣೆ ಹಾಗೂ ಅದಮ್ಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಂದಿನ ತಿಂಗಳು ನಡೆಯುತ್ತಿದ್ದು, ಚುನಾವಣೆಗೆ ಮುನ್ನವೇ ಗುರ್ಮಿತ್ ಸಿಂಗ್ ಬಿಡುಗಡೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆಯೂ ಪಂಜಾಬ್ ವಿಧಾನಭಾ ಚುನಾವಣೆಗೂ ಎರಡು ವಾರಗಳ ಮುನ್ನವೇ ಗುರ್ಮಿತ್ ಸಿಂಗ್ ‘ಫರ್ಲೊ’ (ದೀರ್ಘಾವಧಿ ಶಿಕ್ಷೆಗೆ ಒಳಗಾದವರನ್ನು ಕೆಲ ದಿನಗಳ ಮಟ್ಟಿಗೆ ಬಿಡುಗಡೆ ಮಾಡುವುದು) ಮೇರೆಗೆ ಮೂರುವಾರ ಕಾಲದ ಮಟ್ಟಿಗೆ ಬಿಡುಗಡೆಯಾಗಿದ್ದರು. ಹರಿಯಾಣ, ಪಂಜಾಬ್, ಉತ್ತರಪ್ರದೇಶ ಮತ್ತು ರಾಜಸ್ಥಾನದಲ್ಲಿ ಡೇರಾ ಸಚ್ಚಾ ಸೌದಾದ ಸಿರ್ಸಾ ಆಶ್ರಮದ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.