<p><strong>ನವದೆಹಲಿ</strong>: ಮತದಾರರ ಪಟ್ಟಿಯಲ್ಲಿ ದೋಷಗಳ ಬಗ್ಗೆ ದೂರು ಸೇರಿದಂತೆ ಚುನಾವಣಾ ಪ್ರಕ್ರಿಯೆ ಕುರಿತು ವ್ಯಾಪಕ ಆರೋಪಗಳು ಕೇಳಿಬರುತ್ತಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸುವುದಾಗಿ ಚುನಾವಣಾ ಆಯೋಗ ಮಂಗಳವಾರ ಹೇಳಿದೆ.</p>.<p>ಈ ಸಂಬಂಧ ಎಲ್ಲ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ಆಯೋಗವು, ‘ಸ್ಥಾಪಿತ ಕಾನೂನುಗಳ ಪ್ರಕಾರ, ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಬೇಕಿದೆ. ಎರಡೂ ಕಡೆಯವರಿಗೆ ಒಪ್ಪಿತವಾಗುವ ದಿನಾಂಕದಂದು ಈ ಸಭೆ ನಡೆಸುವುದಾಗಿ’ ತಿಳಿಸಿದೆ.</p>.<p>ಪಕ್ಷಗಳ ಅಧ್ಯಕ್ಷರು ಹಾಗೂ ಹಿರಿಯ ಸದಸ್ಯರೊಂದಿಗೆ ಚರ್ಚಿಸುವುದಾಗಿಯೂ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಅಲ್ಲದೇ, ಮತದಾರರ ನೋಂದಣಿ ಅಧಿಕಾರಿಗಳು(ಇಆರ್ಒ), ಜಿಲ್ಲಾ ಚುನಾವಣಾ ಅಧಿಕಾರಿಗಳು(ಡಿಇಒ) ಹಾಗೂ ಮುಖ್ಯ ಚುನಾವಣಾ ಅಧಿಕಾರಿಗಳ (ಸಿಇಒ) ಮಟ್ಟದಲ್ಲಿ ‘ಬಗೆಹರಿಯದ ಯಾವುದೇ ಸಮಸ್ಯೆ’ ಕುರಿತು ಏಪ್ರಿಲ್ 30ರ ಒಳಗಾಗಿ ಸಲಹೆಗಳನ್ನು ನೀಡುವಂತೆ ಎಲ್ಲ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳನ್ನು ಆಯೋಗ ಕೋರಿದೆ.</p>.<p>‘ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು, ಅಲ್ಲಿ ವ್ಯಕ್ತವಾಗು ಸಲಹೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ಈ ಕುರಿತು ಮಾರ್ಚ್ 31ರ ಒಳಗಾಗಿ ವರದಿ ಸಲ್ಲಿಸಬೇಕು’ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಅವರು ಕಳೆದ ವಾರ ನಡೆದಿದ್ದ ಆಯೋಗದ ಸಮಾವೇಶದಲ್ಲಿ ಎಲ್ಲ ಸಿಇಒ, ಡಿಇಒ ಹಾಗೂ ಇಆರ್ಒಗಳಿಗೆ ಸೂಚಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮತದಾರರ ಪಟ್ಟಿಯಲ್ಲಿ ದೋಷಗಳ ಬಗ್ಗೆ ದೂರು ಸೇರಿದಂತೆ ಚುನಾವಣಾ ಪ್ರಕ್ರಿಯೆ ಕುರಿತು ವ್ಯಾಪಕ ಆರೋಪಗಳು ಕೇಳಿಬರುತ್ತಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸುವುದಾಗಿ ಚುನಾವಣಾ ಆಯೋಗ ಮಂಗಳವಾರ ಹೇಳಿದೆ.</p>.<p>ಈ ಸಂಬಂಧ ಎಲ್ಲ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ಆಯೋಗವು, ‘ಸ್ಥಾಪಿತ ಕಾನೂನುಗಳ ಪ್ರಕಾರ, ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಬೇಕಿದೆ. ಎರಡೂ ಕಡೆಯವರಿಗೆ ಒಪ್ಪಿತವಾಗುವ ದಿನಾಂಕದಂದು ಈ ಸಭೆ ನಡೆಸುವುದಾಗಿ’ ತಿಳಿಸಿದೆ.</p>.<p>ಪಕ್ಷಗಳ ಅಧ್ಯಕ್ಷರು ಹಾಗೂ ಹಿರಿಯ ಸದಸ್ಯರೊಂದಿಗೆ ಚರ್ಚಿಸುವುದಾಗಿಯೂ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಅಲ್ಲದೇ, ಮತದಾರರ ನೋಂದಣಿ ಅಧಿಕಾರಿಗಳು(ಇಆರ್ಒ), ಜಿಲ್ಲಾ ಚುನಾವಣಾ ಅಧಿಕಾರಿಗಳು(ಡಿಇಒ) ಹಾಗೂ ಮುಖ್ಯ ಚುನಾವಣಾ ಅಧಿಕಾರಿಗಳ (ಸಿಇಒ) ಮಟ್ಟದಲ್ಲಿ ‘ಬಗೆಹರಿಯದ ಯಾವುದೇ ಸಮಸ್ಯೆ’ ಕುರಿತು ಏಪ್ರಿಲ್ 30ರ ಒಳಗಾಗಿ ಸಲಹೆಗಳನ್ನು ನೀಡುವಂತೆ ಎಲ್ಲ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳನ್ನು ಆಯೋಗ ಕೋರಿದೆ.</p>.<p>‘ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು, ಅಲ್ಲಿ ವ್ಯಕ್ತವಾಗು ಸಲಹೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ಈ ಕುರಿತು ಮಾರ್ಚ್ 31ರ ಒಳಗಾಗಿ ವರದಿ ಸಲ್ಲಿಸಬೇಕು’ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಅವರು ಕಳೆದ ವಾರ ನಡೆದಿದ್ದ ಆಯೋಗದ ಸಮಾವೇಶದಲ್ಲಿ ಎಲ್ಲ ಸಿಇಒ, ಡಿಇಒ ಹಾಗೂ ಇಆರ್ಒಗಳಿಗೆ ಸೂಚಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>