<p><strong>ಗ್ಯಾಂಗ್ಟಕ್</strong>: ಸಿಕ್ಕಿಂ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉತ್ತರ ಸಿಕ್ಕಿಂನಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ 1,200 ಪ್ರವಾಸಿಗರು ದಾರಿ ಮಧ್ಯೆ ಸಿಲುಕಿಕೊಂಡಿದ್ದಾರೆ. ಇದರಲ್ಲಿ 15 ಮಂದಿ ವಿದೇಶಿ ಪ್ರವಾಸಿಗರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಉನ್ನತ ಮಟ್ಟದ ಸಭೆ ನಡೆಸಿದರು. </p><p>ಪ್ರವಾಸಿಗರನ್ನು ಏರ್ಲಿಫ್ಟ್ ಮಾಡಲು ಮುಖ್ಯ ಕಾರ್ಯದರ್ಶಿಗಳ ಕಚೇರಿ ಕೇಂದ್ರದ ಜೊತೆ ಈಗಾಗಲೇ ಚರ್ಚೆ ನಡೆಸಿದೆ. ಹವಾಮಾನದ ಸ್ಥಿತಿ ನೋಡಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಸಿಕ್ಕಿಂ ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಿ.ಎಸ್. ರಾವ್ ಹೇಳಿದ್ದಾರೆ.</p><p>ಮಳೆಯಿಂದ ರಾಜ್ಯದ ಹಲವೆಡೆ ಭೂಕುಸಿತ ಸಂಭವಿಸಿದ್ದು, ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಹಲವು ರಸ್ತೆಗಳ ಸಂಚಾರ ಬಂದ್ ಆಗಿದೆ. ಹಲವೆಡೆ ವಿದ್ಯುತ್, ಆಹಾರ ಸರಬರಾಜು ಸ್ಥಗಿತಗೊಂಡಿದೆ. ಮೊಬೈಲ್ ನೆಟ್ವರ್ಕ್ ಸಹ ವ್ಯತ್ಯಯಗೊಂಡಿವೆ.</p> <p>‘ಸ್ಥಳೀಯ ವರದಿ ಪ್ರಕಾರ, 15 ಮಂದಿ ವಿದೇಶಿಗರು(ಥೈಲ್ಯಾಂಡ್ನ ಇಬ್ಬರು, ನೇಪಾಳದ ಮೂವರು ಮತ್ತು ಬಾಂಗ್ಲಾದೇಶದ 10 ಮಂದಿ) ಸೇರಿದಂತೆ 1,200 ಮಂದಿ ಲಾಚುಂಗ್ ಮತ್ತು ಮಂಗಾನ್ ಜಿಲ್ಲೆಗಳಲ್ಲಿ ಭೂಕುಸಿತದಿಂದ ಮಾರ್ಗ ಮಧ್ಯೆ ಸಿಲುಕಿದ್ದಾರೆ’ ಎಂದೂ ರಾವ್ ಹೇಳಿದ್ದಾರೆ. </p><p>ಎಲ್ಲ ಪ್ರವಾಸಿಗರು ಸುರಕ್ಷಿತವಾಗಿದ್ದು, ಯಾವುದೇ ಕಾರಣಕ್ಕೂ ರಿಸ್ಕ್ ತೆಗೆದುಕೊಳ್ಳದಂತೆ ಪ್ರವಾಸಿಗರಿಗೆ ಸ್ಥಳೀಯ ಆಡಳಿತ ಸೂಚಿಸಿದೆ. ಪ್ರವಾಸಿಗರಿಗೆ ಬೇಕಾದಷ್ಟು ಆಹಾರ ಸರಬರಾಜು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಕ್</strong>: ಸಿಕ್ಕಿಂ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉತ್ತರ ಸಿಕ್ಕಿಂನಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ 1,200 ಪ್ರವಾಸಿಗರು ದಾರಿ ಮಧ್ಯೆ ಸಿಲುಕಿಕೊಂಡಿದ್ದಾರೆ. ಇದರಲ್ಲಿ 15 ಮಂದಿ ವಿದೇಶಿ ಪ್ರವಾಸಿಗರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಉನ್ನತ ಮಟ್ಟದ ಸಭೆ ನಡೆಸಿದರು. </p><p>ಪ್ರವಾಸಿಗರನ್ನು ಏರ್ಲಿಫ್ಟ್ ಮಾಡಲು ಮುಖ್ಯ ಕಾರ್ಯದರ್ಶಿಗಳ ಕಚೇರಿ ಕೇಂದ್ರದ ಜೊತೆ ಈಗಾಗಲೇ ಚರ್ಚೆ ನಡೆಸಿದೆ. ಹವಾಮಾನದ ಸ್ಥಿತಿ ನೋಡಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಸಿಕ್ಕಿಂ ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಿ.ಎಸ್. ರಾವ್ ಹೇಳಿದ್ದಾರೆ.</p><p>ಮಳೆಯಿಂದ ರಾಜ್ಯದ ಹಲವೆಡೆ ಭೂಕುಸಿತ ಸಂಭವಿಸಿದ್ದು, ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಹಲವು ರಸ್ತೆಗಳ ಸಂಚಾರ ಬಂದ್ ಆಗಿದೆ. ಹಲವೆಡೆ ವಿದ್ಯುತ್, ಆಹಾರ ಸರಬರಾಜು ಸ್ಥಗಿತಗೊಂಡಿದೆ. ಮೊಬೈಲ್ ನೆಟ್ವರ್ಕ್ ಸಹ ವ್ಯತ್ಯಯಗೊಂಡಿವೆ.</p> <p>‘ಸ್ಥಳೀಯ ವರದಿ ಪ್ರಕಾರ, 15 ಮಂದಿ ವಿದೇಶಿಗರು(ಥೈಲ್ಯಾಂಡ್ನ ಇಬ್ಬರು, ನೇಪಾಳದ ಮೂವರು ಮತ್ತು ಬಾಂಗ್ಲಾದೇಶದ 10 ಮಂದಿ) ಸೇರಿದಂತೆ 1,200 ಮಂದಿ ಲಾಚುಂಗ್ ಮತ್ತು ಮಂಗಾನ್ ಜಿಲ್ಲೆಗಳಲ್ಲಿ ಭೂಕುಸಿತದಿಂದ ಮಾರ್ಗ ಮಧ್ಯೆ ಸಿಲುಕಿದ್ದಾರೆ’ ಎಂದೂ ರಾವ್ ಹೇಳಿದ್ದಾರೆ. </p><p>ಎಲ್ಲ ಪ್ರವಾಸಿಗರು ಸುರಕ್ಷಿತವಾಗಿದ್ದು, ಯಾವುದೇ ಕಾರಣಕ್ಕೂ ರಿಸ್ಕ್ ತೆಗೆದುಕೊಳ್ಳದಂತೆ ಪ್ರವಾಸಿಗರಿಗೆ ಸ್ಥಳೀಯ ಆಡಳಿತ ಸೂಚಿಸಿದೆ. ಪ್ರವಾಸಿಗರಿಗೆ ಬೇಕಾದಷ್ಟು ಆಹಾರ ಸರಬರಾಜು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>