ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗವು (ಎನ್ಸಿಪಿಸಿಆರ್) 1,551 ಮಕ್ಕಳನ್ನು ರಕ್ಷಣೆ ಮಾಡಿದೆ. ಬಳಿಕ, ಎನ್ಸಿಪಿಸಿಆರ್ ಆಯಾ ಪ್ರದೇಶದ ಮಕ್ಕಳ ಕಲ್ಯಾಣಾಭಿವೃದ್ಧಿ ಸಮಿತಿಗೆ ಮಕ್ಕಳನ್ನು ಹಸ್ತಾಂತರಿಸಿದ್ದು, ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.