<p><strong>ಇಂಫಾಲ್</strong>: ಮಣಿಪುರದಲ್ಲಿ ಜನಾಂಗೀಯ ಸಂಘರ್ಷದಿಂದ ಪಾರಾಗಲು ನೆರೆಯ ಮ್ಯಾನ್ಮಾರ್ ಗಡಿ ಪ್ರವೇಶಿಸಿದ್ದ ಮೈತೇಯಿ ಸಮುದಾಯದ 212 ಜನರು, ಮೂರು ತಿಂಗಳ ಬಳಿಕ ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಶುಕ್ರವಾರ ಹೇಳಿದ್ದಾರೆ.</p>.<p>ಇವರನ್ನು ಕರೆತರುವಲ್ಲಿ ಭಾರತೀಯ ಸೇನೆ ಮಹತ್ವದ ಪಾತ್ರ ನಿರ್ವಹಿಸಿದೆ ಎಂದು ಅವರು ‘ಎಕ್ಸ್’ನಲ್ಲಿ ಬರೆದಿದ್ದಾರೆ.</p>.<p>ಮಣಿಪುರದ ಮೊರೆಹ್ ಪಟ್ಟಣದಲ್ಲಿ ಮೇ 3ರಂದು ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಮೈತೇಯಿಯ 212 ಜನರು ಸುರಕ್ಷತೆ ಬಯಸಿ ಮ್ಯಾನ್ಮಾರ್ ಗಡಿ ಪ್ರವೇಶಿಸಿದ್ದರು. ಇದೀಗ ಅವರು ಭಾರತದ ನೆಲಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಮಣಿಪುರದಲ್ಲಿ ಮೇ 3ರಿಂದ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯದವರ ನಡುವಿನ ಘರ್ಷಣೆಯಲ್ಲಿ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಮಣಿಪುರದಲ್ಲಿ ಜನಾಂಗೀಯ ಸಂಘರ್ಷದಿಂದ ಪಾರಾಗಲು ನೆರೆಯ ಮ್ಯಾನ್ಮಾರ್ ಗಡಿ ಪ್ರವೇಶಿಸಿದ್ದ ಮೈತೇಯಿ ಸಮುದಾಯದ 212 ಜನರು, ಮೂರು ತಿಂಗಳ ಬಳಿಕ ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಶುಕ್ರವಾರ ಹೇಳಿದ್ದಾರೆ.</p>.<p>ಇವರನ್ನು ಕರೆತರುವಲ್ಲಿ ಭಾರತೀಯ ಸೇನೆ ಮಹತ್ವದ ಪಾತ್ರ ನಿರ್ವಹಿಸಿದೆ ಎಂದು ಅವರು ‘ಎಕ್ಸ್’ನಲ್ಲಿ ಬರೆದಿದ್ದಾರೆ.</p>.<p>ಮಣಿಪುರದ ಮೊರೆಹ್ ಪಟ್ಟಣದಲ್ಲಿ ಮೇ 3ರಂದು ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಮೈತೇಯಿಯ 212 ಜನರು ಸುರಕ್ಷತೆ ಬಯಸಿ ಮ್ಯಾನ್ಮಾರ್ ಗಡಿ ಪ್ರವೇಶಿಸಿದ್ದರು. ಇದೀಗ ಅವರು ಭಾರತದ ನೆಲಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಮಣಿಪುರದಲ್ಲಿ ಮೇ 3ರಿಂದ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯದವರ ನಡುವಿನ ಘರ್ಷಣೆಯಲ್ಲಿ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>