ಮುಂಬೈನಲ್ಲಿ ಯಶ್ರಾಜ್ ಸಂಶೋಧನಾ ಫೌಂಡೇಷನ್ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ‘ಯಶ್ರಾಜ್ ಭಾರತಿ ಸಮ್ಮಾನ್’ (ವೈಬಿಎಸ್) ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಯಥಾಸ್ಥಿತಿಯ ವಿಧಾನಗಳಿಗಿಂತ ಭಿನ್ನವಾಗಿ ಪ್ರಧಾನಿ ಮೋದಿ ಅವರು ನಡೆದುಕೊಂಡಿದ್ದಾರೆ. ಬ್ರಿಟಿಷರ ಕಾಲದಿಂದಲೂ ಉಳಿದುಕೊಂಡು ಬಂದಿದ್ದ ಹಾಗೂ ನಾಗರಿಕರಿಗೆ ಅನನುಕೂಲತೆಯನ್ನುಂಟು ಮಾಡುವ ಕೆಲವು ಕಾನೂನು ಮತ್ತು ನೀತಿಗಳನ್ನು ತೆಗೆದುಹಾಕಲು ಅವರು ಧೈರ್ಯವನ್ನು ಪ್ರದರ್ಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.