<p><strong>ನವದೆಹಲಿ</strong>: ದೇಶದಲ್ಲಿ 2013–14ರಿಂದ 2022–23ರ ನಡುವಿನ ಅವಧಿಯಲ್ಲಿ 24.8 ಕೋಟಿ ಜನರು ಬಹು ಆಯಾಮಗಳ ಬಡತನದಿಂದ ಹೊರಬಂದಿದ್ದಾರೆ ಎಂದು ನೀತಿ ಆಯೋಗದ ವರದಿ ಹೇಳಿದೆ.</p>.<p>ರಾಷ್ಟ್ರೀಯ ಬಹುಆಯಾಮಗಳ ಬಡತನ ಸೂಚ್ಯಂಕ (ಎಂಪಿಐ) ಆಧಾರಿತ ವರದಿ ಪ್ರಕಾರ ದೇಶದಲ್ಲಿ 2013–14ರಲ್ಲಿ ಶೇ 29.17ರಷ್ಟಿದ್ದ ಬಡತನ ಪ್ರಮಾಣವು 2022–23ರಲ್ಲಿ ಶೇ 11.28ರಷ್ಟಕ್ಕೆ ಇಳಿಕೆಯಾಗಿದೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಬಡವರ ಸಂಖ್ಯೆಯು ತೀವ್ರಗತಿಯಲ್ಲಿ ಕಡಿಮೆಯಾಗಿದೆ ಎಂದು ವಿವರಿಸಿದೆ.</p>.<p>‘ಇದು ನಮ್ಮ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯ ಭವಿಷ್ಯವನ್ನು ಉತ್ತಮಪಡಿಸಲು ಕೇಂದ್ರ ಸರ್ಕಾರದಿಂದ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.</p>.<p>ಉತ್ತರಪ್ರದೇಶದಲ್ಲಿ ಅತಿಹೆಚ್ಚು ಅಂದರೆ 5.94 ಕೋಟಿ, ಬಿಹಾರದಲ್ಲಿ 3.77 ಕೋಟಿ ಮತ್ತು ಮಧ್ಯಪ್ರದೇಶದಲ್ಲಿ 2.30 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ತಿಳಿಸಿದೆ. </p>.<p>‘ಬಹು ಆಯಾಮಗಳ ಬಡತನದ ಪ್ರಮಾಣವನ್ನು ಶೇ 1ಕ್ಕೆ ಇಳಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ’ ಎಂದು ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಹೇಳಿದ್ದಾರೆ.</p>.<p>‘ದೇಶದಲ್ಲಿ ಈ ಅವಧಿಯಲ್ಲಿ ಕೃಷಿ ಕ್ಷೇತ್ರದ ಉತ್ತಮ ಪ್ರಗತಿ ಕಂಡಿದೆ’ ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ 2013–14ರಿಂದ 2022–23ರ ನಡುವಿನ ಅವಧಿಯಲ್ಲಿ 24.8 ಕೋಟಿ ಜನರು ಬಹು ಆಯಾಮಗಳ ಬಡತನದಿಂದ ಹೊರಬಂದಿದ್ದಾರೆ ಎಂದು ನೀತಿ ಆಯೋಗದ ವರದಿ ಹೇಳಿದೆ.</p>.<p>ರಾಷ್ಟ್ರೀಯ ಬಹುಆಯಾಮಗಳ ಬಡತನ ಸೂಚ್ಯಂಕ (ಎಂಪಿಐ) ಆಧಾರಿತ ವರದಿ ಪ್ರಕಾರ ದೇಶದಲ್ಲಿ 2013–14ರಲ್ಲಿ ಶೇ 29.17ರಷ್ಟಿದ್ದ ಬಡತನ ಪ್ರಮಾಣವು 2022–23ರಲ್ಲಿ ಶೇ 11.28ರಷ್ಟಕ್ಕೆ ಇಳಿಕೆಯಾಗಿದೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಬಡವರ ಸಂಖ್ಯೆಯು ತೀವ್ರಗತಿಯಲ್ಲಿ ಕಡಿಮೆಯಾಗಿದೆ ಎಂದು ವಿವರಿಸಿದೆ.</p>.<p>‘ಇದು ನಮ್ಮ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯ ಭವಿಷ್ಯವನ್ನು ಉತ್ತಮಪಡಿಸಲು ಕೇಂದ್ರ ಸರ್ಕಾರದಿಂದ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.</p>.<p>ಉತ್ತರಪ್ರದೇಶದಲ್ಲಿ ಅತಿಹೆಚ್ಚು ಅಂದರೆ 5.94 ಕೋಟಿ, ಬಿಹಾರದಲ್ಲಿ 3.77 ಕೋಟಿ ಮತ್ತು ಮಧ್ಯಪ್ರದೇಶದಲ್ಲಿ 2.30 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ತಿಳಿಸಿದೆ. </p>.<p>‘ಬಹು ಆಯಾಮಗಳ ಬಡತನದ ಪ್ರಮಾಣವನ್ನು ಶೇ 1ಕ್ಕೆ ಇಳಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ’ ಎಂದು ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಹೇಳಿದ್ದಾರೆ.</p>.<p>‘ದೇಶದಲ್ಲಿ ಈ ಅವಧಿಯಲ್ಲಿ ಕೃಷಿ ಕ್ಷೇತ್ರದ ಉತ್ತಮ ಪ್ರಗತಿ ಕಂಡಿದೆ’ ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>