ಬುಧವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಕಿನ್ನೌರ್ನ ನಮಜ್ಯಾ ಪ್ರದೇಶದಲ್ಲಿ ಹಿಮ ಕುಸಿತ ಉಂಟಾಗಿದ್ದು, ಗಸ್ತು ತಿರುಗುತ್ತಿದ್ದ ಯೋಧರು ಸಿಲುಕಿದರು. ಈಗಾಗಲೇ ಹಲವು ಯೋಧರನ್ನು ರಕ್ಷಿಸಲಾಗಿದ್ದು, ಐವರು ಯೋಧರಿಗಾಗಿ ಹುಡುಕಾಟ ಮುಂದುವರಿದಿದೆ. ರಕ್ಷಿಸಿ ಆಸ್ಪತ್ರೆಗೆ ಸಾಗುತ್ತಿದ್ದ ಯೋಧರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ.