<p><strong>ನವದೆಹಲಿ:</strong> ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿರುವ ಹಿಮಪಾತದಲ್ಲಿ ಸಿಲುಕಿರುವ ಐವರು ಯೋಧರನ್ನು ರಕ್ಷಿಸಲು ಸೇನೆ ಮತ್ತು ಅರೆಸೇನಾ ಪಡೆಯ 250ಕ್ಕೂ ಹೆಚ್ಚು ಯೋಧರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬುಧವಾರ ಹಿಮಪಾತದಲ್ಲಿ ಸಿಲುಕಿ ಯೋಧರೊಬ್ಬರು ಮೃತಪಟ್ಟಿದ್ದಾರೆ.</p>.<p>ಬುಧವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಕಿನ್ನೌರ್ನ ನಮಜ್ಯಾ ಪ್ರದೇಶದಲ್ಲಿ ಹಿಮ ಕುಸಿತ ಉಂಟಾಗಿದ್ದು, ಗಸ್ತು ತಿರುಗುತ್ತಿದ್ದ ಯೋಧರು ಸಿಲುಕಿದರು. ಈಗಾಗಲೇ ಹಲವು ಯೋಧರನ್ನು ರಕ್ಷಿಸಲಾಗಿದ್ದು, ಐವರು ಯೋಧರಿಗಾಗಿ ಹುಡುಕಾಟ ಮುಂದುವರಿದಿದೆ. ರಕ್ಷಿಸಿ ಆಸ್ಪತ್ರೆಗೆ ಸಾಗುತ್ತಿದ್ದ ಯೋಧರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ.</p>.<p>ಇಂಡೊ–ಚೀನಾ ಗಡಿಭಾಗದ ಶಿಪ್ಕಿ ಲಾ ವಲಯದಲ್ಲಿ ಸೇನಾ ಯೋಧರನ್ನು ಗಸ್ತು ತಿರುಗಲು ನಿಯೋಜಿಸಲಾಗಿತ್ತು. ಒಟ್ಟು ಹದಿನಾರು ಯೋಧರು ಎರಡು ತಂಡಗಳಲ್ಲಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದರು.</p>.<p>ಯೋಧರ ರಕ್ಷಣಾ ಕಾರ್ಯಾಚರಣೆಯಲ್ಲಿ 250ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದಾರೆ. ಉಷ್ಣಾಂಶ –15 ಡಿಗ್ರಿ ತಲುಪಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಮತ್ತೆ ನಾಲ್ಕು ಇಂಚಿನಷ್ಟು ಹಿಮದ ಹೊದೆಕೆ ಸೃಷ್ಟಿಯಾಗಿದಿರುವುದಾಗಿ ರಕ್ಷಣಾ ಕಾರ್ಯದಲ್ಲಿರುವ ಇಂಡೊ ಟಿಬೆಟನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಪಡೆ ತಿಳಿಸಿದೆ.</p>.<p>ಗಡಿ ಭಾಗದ ರಸ್ತೆಗಳ ನಿರ್ವಹಣೆ ಮಾಡುವ ತಂಡ(ಬಿಆರ್ಒ) ಯಂತ್ರಗಳ ಸಹಾಯದಿಂದ ಹಿಮದಲ್ಲಿ ಸಿಲುಕಿರುವ ಯೋಧರನ್ನು ಪತ್ತೆ ಮಾಡುವ ಪ್ರಯತ್ನ ನಡೆಸಿದೆ. ಸಿಲುಕಿರುವ ಎಲ್ಲ ಯೋಧರು ಪತ್ತೆಯಾಗುವವರೆಗೂ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿರುವ ಹಿಮಪಾತದಲ್ಲಿ ಸಿಲುಕಿರುವ ಐವರು ಯೋಧರನ್ನು ರಕ್ಷಿಸಲು ಸೇನೆ ಮತ್ತು ಅರೆಸೇನಾ ಪಡೆಯ 250ಕ್ಕೂ ಹೆಚ್ಚು ಯೋಧರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬುಧವಾರ ಹಿಮಪಾತದಲ್ಲಿ ಸಿಲುಕಿ ಯೋಧರೊಬ್ಬರು ಮೃತಪಟ್ಟಿದ್ದಾರೆ.</p>.<p>ಬುಧವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಕಿನ್ನೌರ್ನ ನಮಜ್ಯಾ ಪ್ರದೇಶದಲ್ಲಿ ಹಿಮ ಕುಸಿತ ಉಂಟಾಗಿದ್ದು, ಗಸ್ತು ತಿರುಗುತ್ತಿದ್ದ ಯೋಧರು ಸಿಲುಕಿದರು. ಈಗಾಗಲೇ ಹಲವು ಯೋಧರನ್ನು ರಕ್ಷಿಸಲಾಗಿದ್ದು, ಐವರು ಯೋಧರಿಗಾಗಿ ಹುಡುಕಾಟ ಮುಂದುವರಿದಿದೆ. ರಕ್ಷಿಸಿ ಆಸ್ಪತ್ರೆಗೆ ಸಾಗುತ್ತಿದ್ದ ಯೋಧರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ.</p>.<p>ಇಂಡೊ–ಚೀನಾ ಗಡಿಭಾಗದ ಶಿಪ್ಕಿ ಲಾ ವಲಯದಲ್ಲಿ ಸೇನಾ ಯೋಧರನ್ನು ಗಸ್ತು ತಿರುಗಲು ನಿಯೋಜಿಸಲಾಗಿತ್ತು. ಒಟ್ಟು ಹದಿನಾರು ಯೋಧರು ಎರಡು ತಂಡಗಳಲ್ಲಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದರು.</p>.<p>ಯೋಧರ ರಕ್ಷಣಾ ಕಾರ್ಯಾಚರಣೆಯಲ್ಲಿ 250ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದಾರೆ. ಉಷ್ಣಾಂಶ –15 ಡಿಗ್ರಿ ತಲುಪಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಮತ್ತೆ ನಾಲ್ಕು ಇಂಚಿನಷ್ಟು ಹಿಮದ ಹೊದೆಕೆ ಸೃಷ್ಟಿಯಾಗಿದಿರುವುದಾಗಿ ರಕ್ಷಣಾ ಕಾರ್ಯದಲ್ಲಿರುವ ಇಂಡೊ ಟಿಬೆಟನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಪಡೆ ತಿಳಿಸಿದೆ.</p>.<p>ಗಡಿ ಭಾಗದ ರಸ್ತೆಗಳ ನಿರ್ವಹಣೆ ಮಾಡುವ ತಂಡ(ಬಿಆರ್ಒ) ಯಂತ್ರಗಳ ಸಹಾಯದಿಂದ ಹಿಮದಲ್ಲಿ ಸಿಲುಕಿರುವ ಯೋಧರನ್ನು ಪತ್ತೆ ಮಾಡುವ ಪ್ರಯತ್ನ ನಡೆಸಿದೆ. ಸಿಲುಕಿರುವ ಎಲ್ಲ ಯೋಧರು ಪತ್ತೆಯಾಗುವವರೆಗೂ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>