<p><strong>ಗುವಾಹಟಿ: ಅ</strong>ಸ್ಸಾಂನಲ್ಲಿ ಭಾನುವಾರ ಮಳೆಯ ಆರ್ಭಟ ಮುಂದುವರಿದಿದೆ. ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ತಲೆದೋರಿದೆ.</p>.<p>ಒಟ್ಟು 11 ಜಿಲ್ಲೆಗಳಲ್ಲಿನ 154 ಗ್ರಾಮಗಳು ಪ್ರವಾಹದಿಂದ ಜಲಾವೃತಗೊಂಡಿವೆ. 45 ಸಾವಿರಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕಿದ್ದಾರೆ. </p>.<p>ನಿಮತಿಘಾಟ್, ಧುಬ್ರಿ ಮತ್ತು ತೇಜ್ಪುರ ಪ್ರದೇಶದಲ್ಲಿ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೇ, ಬೆಕಿ, ದಿಶಾಂಗ್ ಮತ್ತು ಡಿಖೌ ನದಿಗಳೂ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಹೀಗೆಯೇ ಮಳೆ ಮುಂದುವರಿದರೆ ಅಸ್ಸಾಂನ ಹಲವು ಪ್ರದೇಶಗಳ ಪರಿಸ್ಥಿತಿ ಹದಗೆಡುವ ನಿರೀಕ್ಷೆಯಿದೆ. ಜೊತೆಗೆ, ನೆರೆಯ ಅರುಣಾಚಲ ಪ್ರದೇಶ ಹಾಗೂ ಮೇಘಾಲಯ ರಾಜ್ಯದ ಸ್ಥಿತಿಯೂ ಬಿಗಡಾಯಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕಳೆದ 24 ಗಂಟೆಯಲ್ಲಿ ಸುರಿದ ಮಳೆಯಿಂದ ಆರು ಜಿಲ್ಲೆಗಳಲ್ಲಿ ಮಳೆ ಅನಾಹುತಗಳು ಹೆಚ್ಚಿವೆ. ಧರ್ಮಜಿ ಜಿಲ್ಲೆಯ 48 ಗ್ರಾಮಗಳಲ್ಲಿನ 19,600 ನಾಗರಿಕರು ತೊಂದರೆಗೆ ಸಿಲುಕಿದ್ದಾರೆ. 1,753 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಫಸಲು ಹಾನಿಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ: ಅ</strong>ಸ್ಸಾಂನಲ್ಲಿ ಭಾನುವಾರ ಮಳೆಯ ಆರ್ಭಟ ಮುಂದುವರಿದಿದೆ. ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ತಲೆದೋರಿದೆ.</p>.<p>ಒಟ್ಟು 11 ಜಿಲ್ಲೆಗಳಲ್ಲಿನ 154 ಗ್ರಾಮಗಳು ಪ್ರವಾಹದಿಂದ ಜಲಾವೃತಗೊಂಡಿವೆ. 45 ಸಾವಿರಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕಿದ್ದಾರೆ. </p>.<p>ನಿಮತಿಘಾಟ್, ಧುಬ್ರಿ ಮತ್ತು ತೇಜ್ಪುರ ಪ್ರದೇಶದಲ್ಲಿ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೇ, ಬೆಕಿ, ದಿಶಾಂಗ್ ಮತ್ತು ಡಿಖೌ ನದಿಗಳೂ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಹೀಗೆಯೇ ಮಳೆ ಮುಂದುವರಿದರೆ ಅಸ್ಸಾಂನ ಹಲವು ಪ್ರದೇಶಗಳ ಪರಿಸ್ಥಿತಿ ಹದಗೆಡುವ ನಿರೀಕ್ಷೆಯಿದೆ. ಜೊತೆಗೆ, ನೆರೆಯ ಅರುಣಾಚಲ ಪ್ರದೇಶ ಹಾಗೂ ಮೇಘಾಲಯ ರಾಜ್ಯದ ಸ್ಥಿತಿಯೂ ಬಿಗಡಾಯಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕಳೆದ 24 ಗಂಟೆಯಲ್ಲಿ ಸುರಿದ ಮಳೆಯಿಂದ ಆರು ಜಿಲ್ಲೆಗಳಲ್ಲಿ ಮಳೆ ಅನಾಹುತಗಳು ಹೆಚ್ಚಿವೆ. ಧರ್ಮಜಿ ಜಿಲ್ಲೆಯ 48 ಗ್ರಾಮಗಳಲ್ಲಿನ 19,600 ನಾಗರಿಕರು ತೊಂದರೆಗೆ ಸಿಲುಕಿದ್ದಾರೆ. 1,753 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಫಸಲು ಹಾನಿಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>