<p><strong>ಮುಂಬೈ</strong>: ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಮ್ಮ ಮೀಸಲಾತಿ ಬೇಡಿಕೆಯನ್ನು ಆಲಿಸದಿದ್ದರೆ 5 ಕೋಟಿಗೂ ಹೆಚ್ಚು ಮರಾಠರು ಮುಂಬೈಗೆ ಬರಲಿದ್ದಾರೆ ಎಂದು ಹೋರಾಟಗಾರ ಮನೋಜ್ ಜರಾಂಗೆ ಅವರು ಎಚ್ಚರಿಸಿದ್ದಾರೆ.</p>.<p>ಆಜಾದ್ ಮೈದಾನದಲ್ಲಿ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಜರಾಂಗೆ, ‘ಫಡಣವೀಸ್ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುತ್ತಿದ್ದಾರೆ’ ಎಂದು ಸೋಮವಾರ ಆರೋಪಿಸಿದರು. </p>.<p>‘ಮರಾಠರಿಗೆ ಮೀಸಲಾತಿ ನೀಡುವ ನಿರ್ಧಾರವನ್ನು ಸುಲಭವಾಗಿ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರವು ಮರಾಠವಾಡದಲ್ಲಿರುವ ಮರಾಠರನ್ನು ಕುಣಬಿಗಳು ಎಂದು ಘೋಷಿಸಬೇಕು ಮತ್ತು ಅಂತಹ ಪ್ರಮಾಣಪತ್ರಗಳನ್ನು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ಗಳೇ ವಿತರಿಸಬಹುದು’ ಎಂದು ಹೇಳಿದರು. </p>.<p>ಮರಾಠಾ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂಬುದು ಅವರ ಆಗ್ರಹವಾಗಿದೆ.</p>.<p>ಮುಂಬೈನಲ್ಲಿ ಜನರಿಗೆ ತೊಂದರೆಯಾಗದಂತೆ ನಡೆದುಕೊಳ್ಳುವಂತೆ ಮರಾಠಾ ಹೋರಾಟಗಾರರಿಗೆ ಜರಾಂಗೆ ಸಲಹೆ ನೀಡಿದರು. ಅಲ್ಲದೇ ಆಗಸ್ಟ್ 29ರಿಂದ ಇಲ್ಲಿಯವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರು ಬೆಂಬಲಿಗರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.</p>.<p><strong>‘ಜರಾಂಗೆ ಪ್ರತಿಭಟನೆ ಶಾಂತಿಯುತವಾಗಿಲ್ಲ’</strong></p><p>ಮನೋಜ್ ಜರಾಂಗೆ ನೇತೃತ್ವದ ಮರಾಠ ಮೀಸಲಾತಿ ಆಂದೋಲನದಿಂದಾಗಿ ಇಡೀ ನಗರ ಸ್ತಬ್ಧಗೊಂಡಿದೆ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ. ಅವರ ಪ್ರತಿಭಟನೆಯು ಶಾಂತಿಯುತವಾಗಿಲ್ಲ ಮತ್ತು ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಿದೆ ಎಂದೂ ತಿಳಿಸಿದೆ.</p><p>ಮುಂಬೈನಲ್ಲಿ ಸಹಜ ಸ್ಥಿತಿ ಮರುಸ್ಥಾಪನೆಯಾಗಬೇಕು ಎಂದು ಹೈಕೋರ್ಟ್ ಹೇಳಿದ್ದು, ಮಂಗಳವಾರ ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸುವಂತೆ ಮತ್ತು ಎಲ್ಲಾ ಬೀದಿಗಳನ್ನು ತೆರವುಗೊಳಿಸುವಂತೆ ಜರಾಂಗೆ ಮತ್ತು ಅವರ ಬೆಂಬಲಿಗರಿಗೆ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಮ್ಮ ಮೀಸಲಾತಿ ಬೇಡಿಕೆಯನ್ನು ಆಲಿಸದಿದ್ದರೆ 5 ಕೋಟಿಗೂ ಹೆಚ್ಚು ಮರಾಠರು ಮುಂಬೈಗೆ ಬರಲಿದ್ದಾರೆ ಎಂದು ಹೋರಾಟಗಾರ ಮನೋಜ್ ಜರಾಂಗೆ ಅವರು ಎಚ್ಚರಿಸಿದ್ದಾರೆ.</p>.<p>ಆಜಾದ್ ಮೈದಾನದಲ್ಲಿ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಜರಾಂಗೆ, ‘ಫಡಣವೀಸ್ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುತ್ತಿದ್ದಾರೆ’ ಎಂದು ಸೋಮವಾರ ಆರೋಪಿಸಿದರು. </p>.<p>‘ಮರಾಠರಿಗೆ ಮೀಸಲಾತಿ ನೀಡುವ ನಿರ್ಧಾರವನ್ನು ಸುಲಭವಾಗಿ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರವು ಮರಾಠವಾಡದಲ್ಲಿರುವ ಮರಾಠರನ್ನು ಕುಣಬಿಗಳು ಎಂದು ಘೋಷಿಸಬೇಕು ಮತ್ತು ಅಂತಹ ಪ್ರಮಾಣಪತ್ರಗಳನ್ನು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ಗಳೇ ವಿತರಿಸಬಹುದು’ ಎಂದು ಹೇಳಿದರು. </p>.<p>ಮರಾಠಾ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂಬುದು ಅವರ ಆಗ್ರಹವಾಗಿದೆ.</p>.<p>ಮುಂಬೈನಲ್ಲಿ ಜನರಿಗೆ ತೊಂದರೆಯಾಗದಂತೆ ನಡೆದುಕೊಳ್ಳುವಂತೆ ಮರಾಠಾ ಹೋರಾಟಗಾರರಿಗೆ ಜರಾಂಗೆ ಸಲಹೆ ನೀಡಿದರು. ಅಲ್ಲದೇ ಆಗಸ್ಟ್ 29ರಿಂದ ಇಲ್ಲಿಯವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರು ಬೆಂಬಲಿಗರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.</p>.<p><strong>‘ಜರಾಂಗೆ ಪ್ರತಿಭಟನೆ ಶಾಂತಿಯುತವಾಗಿಲ್ಲ’</strong></p><p>ಮನೋಜ್ ಜರಾಂಗೆ ನೇತೃತ್ವದ ಮರಾಠ ಮೀಸಲಾತಿ ಆಂದೋಲನದಿಂದಾಗಿ ಇಡೀ ನಗರ ಸ್ತಬ್ಧಗೊಂಡಿದೆ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ. ಅವರ ಪ್ರತಿಭಟನೆಯು ಶಾಂತಿಯುತವಾಗಿಲ್ಲ ಮತ್ತು ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಿದೆ ಎಂದೂ ತಿಳಿಸಿದೆ.</p><p>ಮುಂಬೈನಲ್ಲಿ ಸಹಜ ಸ್ಥಿತಿ ಮರುಸ್ಥಾಪನೆಯಾಗಬೇಕು ಎಂದು ಹೈಕೋರ್ಟ್ ಹೇಳಿದ್ದು, ಮಂಗಳವಾರ ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸುವಂತೆ ಮತ್ತು ಎಲ್ಲಾ ಬೀದಿಗಳನ್ನು ತೆರವುಗೊಳಿಸುವಂತೆ ಜರಾಂಗೆ ಮತ್ತು ಅವರ ಬೆಂಬಲಿಗರಿಗೆ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>