<p><strong>ಪುರಿ :</strong> ಐತಿಹಾಸಿಕ ಪುರಿ ಜಗನ್ನಾಥ ದೇಗುಲದ ರಥಯಾತ್ರೆ ವೇಳೆ ಶುಕ್ರವಾರ ಅತಿಯಾದ ಸೆಕೆ ಮತ್ತು ಕಿಕ್ಕಿರಿದ ಜನದಟ್ಟಣೆಯಿಂದಾಗಿ ಸುಮಾರು 625 ಮಂದಿ ಕುಸಿದು ಬಿದ್ದಿದ್ದು, ಅಸ್ವಸ್ಥಗೊಂಡರು ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಜಿಲ್ಲಾಸ್ಪತ್ರೆಯಲ್ಲಿ ಸುಮಾರು 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಒಂಬತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p class="title">‘ಜನದಟ್ಟಣೆಯಿಂದಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಲವರಿಗೆ ವಾಂತಿಯಾದರೆ ಮತ್ತೆ ಕೆಲವರು ನಿಶ್ಯಕ್ತಿಯಿಂದ ಬಳಲಿದ್ದರು. ಹಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ’ ಎಂದು ಪುರಿ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಡಾ.ಕಿಶೋರ್ ಸತ್ಪತಿ ತಿಳಿಸಿದರು.</p>.<p>‘ಲಕ್ಷಾಂತರ ಜನರು ಗಂಟೆಗಟ್ಟಲೆ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿದ್ದರು. ದಟ್ಟಣೆಯಿಂದ ಹೊರಬರಲು ಕೆಲವರು ಯತ್ನಿಸಿದ್ದರಿಂದ ಅಹಿತಕರ ಪರಿಸ್ಥಿತಿಗೆ ಕಾರಣವಾಯಿತು’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದರು.</p>.<p>ದಟ್ಟಣೆಯ ಪರಿಣಾಮ ಬಾಲಭದ್ರ ಸ್ವಾಮಿಯ ರಥ ಮತ್ತು ತಳಧ್ವಜ ಗಂಟೆಗಳ ಕಾಲ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿತ್ತು. ಈ ಪ್ರದೇಶದಲ್ಲಿಯೇ ಹಲವರು ಗಾಯಗೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಆಡಳಿತದ ಸಿಬ್ಬಂದಿ ಮತ್ತು ಖಾಸಗಿ ಸಂಘ ಸಂಸ್ಥೆಗಳ ಸ್ವಯಂಸೇವಕರು ಇದಕ್ಕೆ ನೆರವಾದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರಿ :</strong> ಐತಿಹಾಸಿಕ ಪುರಿ ಜಗನ್ನಾಥ ದೇಗುಲದ ರಥಯಾತ್ರೆ ವೇಳೆ ಶುಕ್ರವಾರ ಅತಿಯಾದ ಸೆಕೆ ಮತ್ತು ಕಿಕ್ಕಿರಿದ ಜನದಟ್ಟಣೆಯಿಂದಾಗಿ ಸುಮಾರು 625 ಮಂದಿ ಕುಸಿದು ಬಿದ್ದಿದ್ದು, ಅಸ್ವಸ್ಥಗೊಂಡರು ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಜಿಲ್ಲಾಸ್ಪತ್ರೆಯಲ್ಲಿ ಸುಮಾರು 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಒಂಬತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p class="title">‘ಜನದಟ್ಟಣೆಯಿಂದಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಲವರಿಗೆ ವಾಂತಿಯಾದರೆ ಮತ್ತೆ ಕೆಲವರು ನಿಶ್ಯಕ್ತಿಯಿಂದ ಬಳಲಿದ್ದರು. ಹಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ’ ಎಂದು ಪುರಿ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಡಾ.ಕಿಶೋರ್ ಸತ್ಪತಿ ತಿಳಿಸಿದರು.</p>.<p>‘ಲಕ್ಷಾಂತರ ಜನರು ಗಂಟೆಗಟ್ಟಲೆ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿದ್ದರು. ದಟ್ಟಣೆಯಿಂದ ಹೊರಬರಲು ಕೆಲವರು ಯತ್ನಿಸಿದ್ದರಿಂದ ಅಹಿತಕರ ಪರಿಸ್ಥಿತಿಗೆ ಕಾರಣವಾಯಿತು’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದರು.</p>.<p>ದಟ್ಟಣೆಯ ಪರಿಣಾಮ ಬಾಲಭದ್ರ ಸ್ವಾಮಿಯ ರಥ ಮತ್ತು ತಳಧ್ವಜ ಗಂಟೆಗಳ ಕಾಲ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿತ್ತು. ಈ ಪ್ರದೇಶದಲ್ಲಿಯೇ ಹಲವರು ಗಾಯಗೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಆಡಳಿತದ ಸಿಬ್ಬಂದಿ ಮತ್ತು ಖಾಸಗಿ ಸಂಘ ಸಂಸ್ಥೆಗಳ ಸ್ವಯಂಸೇವಕರು ಇದಕ್ಕೆ ನೆರವಾದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>