<p><strong>ನವದೆಹಲಿ</strong>: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು (ಶುಕ್ರವಾರ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಾರಿಗಳು ಬಂದ್ ನಡೆಸಿ ಪ್ರತಿಭಟಿಸಿದರು. ಈ ಹಿನ್ನೆಲೆಯಲ್ಲಿ ನಗರದ ಜನಪ್ರಿಯ ಶಾಪಿಂಗ್ ಕೇಂದ್ರಗಳಾದ ಕನ್ನಾಟ್ ಪ್ಲೇಸ್, ಸದರ್ ಬಜಾರ್ ಮತ್ತು ಚಾಂದನಿ ಚೌಕ್ ಸೇರಿದಂತೆ 900ಕ್ಕೂ ಹೆಚ್ಚು ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದವು.</p><p>ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT)ದ ಪ್ರಕಾರ, ದೆಹಲಿಯಲ್ಲಿ 8 ಲಕ್ಷಕ್ಕೂ ಹೆಚ್ಚು ಅಂಗಡಿಗಳು ಮುಚ್ಚಲ್ಪಟ್ಟಿದ್ದು, ಇದರ ಪರಿಣಾಮವಾಗಿ ದಿನಕ್ಕೆ ಸುಮಾರು ₹1,500 ಕೋಟಿ ವ್ಯಾಪಾರ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾಕರ ದಾಳಿಯನ್ನು ಖಂಡಿಸಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (CTI) ಗುರುವಾರ ಬಂದ್ಗೆ ಕರೆ ನೀಡಿತ್ತು. ಕನ್ನಾಟ್ ಪ್ಲೇಸ್ನಲ್ಲಿ ಮೇಣದಬತ್ತಿ ಹಿಡಿದು ಮೆರವಣಿಗೆ ನಡೆಸಲಾಯಿತು. ವಿವಿಧ ವ್ಯಾಪಾರಿ ಸಂಘಗಳು ಸಹ ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದವು.</p><p>‘ಇದು ಕೇವಲ ಪ್ರತಿಭಟನೆಯಲ್ಲ, ಭಯೋತ್ಪಾದನೆಯ ವಿರುದ್ಧದ ಸಾಮೂಹಿಕ ನಿಲುವು. ಈ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಪಹಲ್ಗಾಮ್ನಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಬಂದ್ ಆಚರಿಸುತ್ತಿದ್ದೇವೆ’ ಎಂದು ಸಿಟಿಐ ಅಧ್ಯಕ್ಷ ಬ್ರಿಜೇಶ್ ಗೋಯಲ್ ಹೇಳಿದರು.</p><p>ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದರು.</p>.ಪಾಕ್ ಪ್ರಜೆಗಳನ್ನು ಹೊರಹಾಕಿ: ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ.Pahalgam Terror Attack: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕಪಿಲ್ ಸಿಬಲ್ ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು (ಶುಕ್ರವಾರ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಾರಿಗಳು ಬಂದ್ ನಡೆಸಿ ಪ್ರತಿಭಟಿಸಿದರು. ಈ ಹಿನ್ನೆಲೆಯಲ್ಲಿ ನಗರದ ಜನಪ್ರಿಯ ಶಾಪಿಂಗ್ ಕೇಂದ್ರಗಳಾದ ಕನ್ನಾಟ್ ಪ್ಲೇಸ್, ಸದರ್ ಬಜಾರ್ ಮತ್ತು ಚಾಂದನಿ ಚೌಕ್ ಸೇರಿದಂತೆ 900ಕ್ಕೂ ಹೆಚ್ಚು ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದವು.</p><p>ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT)ದ ಪ್ರಕಾರ, ದೆಹಲಿಯಲ್ಲಿ 8 ಲಕ್ಷಕ್ಕೂ ಹೆಚ್ಚು ಅಂಗಡಿಗಳು ಮುಚ್ಚಲ್ಪಟ್ಟಿದ್ದು, ಇದರ ಪರಿಣಾಮವಾಗಿ ದಿನಕ್ಕೆ ಸುಮಾರು ₹1,500 ಕೋಟಿ ವ್ಯಾಪಾರ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾಕರ ದಾಳಿಯನ್ನು ಖಂಡಿಸಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (CTI) ಗುರುವಾರ ಬಂದ್ಗೆ ಕರೆ ನೀಡಿತ್ತು. ಕನ್ನಾಟ್ ಪ್ಲೇಸ್ನಲ್ಲಿ ಮೇಣದಬತ್ತಿ ಹಿಡಿದು ಮೆರವಣಿಗೆ ನಡೆಸಲಾಯಿತು. ವಿವಿಧ ವ್ಯಾಪಾರಿ ಸಂಘಗಳು ಸಹ ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದವು.</p><p>‘ಇದು ಕೇವಲ ಪ್ರತಿಭಟನೆಯಲ್ಲ, ಭಯೋತ್ಪಾದನೆಯ ವಿರುದ್ಧದ ಸಾಮೂಹಿಕ ನಿಲುವು. ಈ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಪಹಲ್ಗಾಮ್ನಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಬಂದ್ ಆಚರಿಸುತ್ತಿದ್ದೇವೆ’ ಎಂದು ಸಿಟಿಐ ಅಧ್ಯಕ್ಷ ಬ್ರಿಜೇಶ್ ಗೋಯಲ್ ಹೇಳಿದರು.</p><p>ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದರು.</p>.ಪಾಕ್ ಪ್ರಜೆಗಳನ್ನು ಹೊರಹಾಕಿ: ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ.Pahalgam Terror Attack: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕಪಿಲ್ ಸಿಬಲ್ ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>