<p class="title"><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಉದ್ಘಾಟಿಸಿದ ನವೀಕೃತ ಕಾಶಿ ವಿಶ್ವನಾಥ ಧಾಮಕ್ಕೆ ವರ್ಷದ ಮೊದಲ ದಿನವಾದ ಶನಿವಾರ ಸುಮಾರು 5 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.</p>.<p class="title">ವಾರಾಣಸಿಯಲ್ಲಿನ ಶಿವನ ದೇವಸ್ಥಾನಕ್ಕೆ ಮಹಾಶಿವರಾತ್ರಿ ದಿನ ಭೇಟಿ ನೀಡುವುದು ಒಳ್ಳೆಯದು ಎಂದು ಭಕ್ತರು ಭಾವಿಸಿದ್ದಾರೆ. ಆದರೆ, ಇದುವರೆಗೂ ಆ ದಿನ ಭಕ್ತರ ಸಂಖ್ಯೆ 2.5 ಲಕ್ಷ ದಾಟಿಲ್ಲ ಎಂದೂ ತಿಳಿಸಿವೆ.</p>.<p class="title">‘ಜನವರಿ 1 ರಂದು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 5 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿರುವುದು ಸ್ಥಳೀಯ ಆಡಳಿತಕ್ಕೆ ಅಚ್ಚರಿ ಮೂಡಿಸಿದೆ. ಭಕ್ತರ ಸಂಖ್ಯೆ 1 ಲಕ್ಷ ದಾಟಲಾರದು ಎಂದು ಭಾವಿಸಿದ್ದ ಆಡಳಿತಾಧಿಕಾರಿಗಳಿಗೆ ಸಾಗರೋಪಾದಿಯಲ್ಲಿ ಭಕ್ತರು ಬಂದಿದ್ದು ಅಚ್ಚರಿ ಮೂಡಿಸಿದೆ’ ಎಂದು ಮೂಲವೊಂದು ಹೇಳಿದೆ.</p>.<p class="title">ಐದು ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಕಾಶಿ ವಿಶ್ವನಾಥ ಧಾಮ ಸಂಕೀರ್ಣದ ಮೊದಲ ಹಂತವನ್ನು ಪ್ರಧಾನಿ ಮೋದಿ ಕಳೆದ ತಿಂಗಳು ಉದ್ಘಾಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಉದ್ಘಾಟಿಸಿದ ನವೀಕೃತ ಕಾಶಿ ವಿಶ್ವನಾಥ ಧಾಮಕ್ಕೆ ವರ್ಷದ ಮೊದಲ ದಿನವಾದ ಶನಿವಾರ ಸುಮಾರು 5 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.</p>.<p class="title">ವಾರಾಣಸಿಯಲ್ಲಿನ ಶಿವನ ದೇವಸ್ಥಾನಕ್ಕೆ ಮಹಾಶಿವರಾತ್ರಿ ದಿನ ಭೇಟಿ ನೀಡುವುದು ಒಳ್ಳೆಯದು ಎಂದು ಭಕ್ತರು ಭಾವಿಸಿದ್ದಾರೆ. ಆದರೆ, ಇದುವರೆಗೂ ಆ ದಿನ ಭಕ್ತರ ಸಂಖ್ಯೆ 2.5 ಲಕ್ಷ ದಾಟಿಲ್ಲ ಎಂದೂ ತಿಳಿಸಿವೆ.</p>.<p class="title">‘ಜನವರಿ 1 ರಂದು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 5 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿರುವುದು ಸ್ಥಳೀಯ ಆಡಳಿತಕ್ಕೆ ಅಚ್ಚರಿ ಮೂಡಿಸಿದೆ. ಭಕ್ತರ ಸಂಖ್ಯೆ 1 ಲಕ್ಷ ದಾಟಲಾರದು ಎಂದು ಭಾವಿಸಿದ್ದ ಆಡಳಿತಾಧಿಕಾರಿಗಳಿಗೆ ಸಾಗರೋಪಾದಿಯಲ್ಲಿ ಭಕ್ತರು ಬಂದಿದ್ದು ಅಚ್ಚರಿ ಮೂಡಿಸಿದೆ’ ಎಂದು ಮೂಲವೊಂದು ಹೇಳಿದೆ.</p>.<p class="title">ಐದು ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಕಾಶಿ ವಿಶ್ವನಾಥ ಧಾಮ ಸಂಕೀರ್ಣದ ಮೊದಲ ಹಂತವನ್ನು ಪ್ರಧಾನಿ ಮೋದಿ ಕಳೆದ ತಿಂಗಳು ಉದ್ಘಾಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>