<p><strong>ಪತ್ತನಂತಿಟ್ಟ:</strong> ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಯಾತ್ರೆಯನ್ನು ಸುರಕ್ಷಿತ ಮತ್ತು ಸುಸಜ್ಜಿತಗೊಳಿಸುವುದಕ್ಕಾಗಿ ಶಬರಿಮಲೆಯಲ್ಲಿ ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ಜಾಗತಿಕ ಅಯ್ಯಪ್ಪ ಸಂಗಮ’ದಲ್ಲಿ ಶನಿವಾರ ಘೋಷಿಸಿದರು. </p>.<p>ಜಾಗತಿಕ ಅಯ್ಯಪ್ಪ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸನ್ನಿಧಾನಂ, ಪಂಪಾ ಮತ್ತು ಯಾತ್ರೆಯ ಮಾರ್ಗದ ಅಭಿವೃದ್ಧಿಯ ವಿವಿಧ ಹಂತಗಳಿಗೆ ಒಟ್ಟು ₹1033.62 ಕೋಟಿ ಖರ್ಚು ಮಾಡಲಾಗುವುದು. ಈ ಅಭಿವೃದ್ಧಿ ಕಾರ್ಯಗಳು 2039ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದು ತಿಳಿಸಿದರು. </p>.<p class="title">ಭಕ್ತರಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 2025ರಿಂದ 2030ರ ವೇಳೆಗೆ ₹300 ಕೋಟಿಗೂ ಹೆಚ್ಚು ಖರ್ಚು ಮಾಡಲಾಗುವುದು. </p>.<p class="title">ಸಮಾವೇಶಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರ ಕುರಿತು ಮಾತನಾಡಿದ ಅವರು ‘ಭಕ್ತರ ವೇಷದಲ್ಲಿರುವ ಕೆಲ ವ್ಯಕ್ತಿಗಳು ಸುಪ್ರೀಂ ಕೋರ್ಟ್ವರೆಗೂ ಹೋಗಿ ಸಮಾವೇಶಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಆದರೆ ಅಂಥ ಯತ್ನಗಳನ್ನು ಸುಪ್ರೀಂ ಕೋರ್ಟ್ ತಡೆಯಿತು’ ಎಂದು ಹೇಳಿದರು.</p>.<p>ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ‘ತಿರುವಾಂಕೂರು ದೇವಸ್ವಂ ಮಂಡಳಿ’ಯು (ಟಿಡಿಬಿ) ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಪಂಪಾದಲ್ಲಿ ‘ಜಾಗತಿಕ ಅಯ್ಯಪ್ಪ ಸಂಗಮ’ವನ್ನು ಆಯೋಜಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ:</strong> ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಯಾತ್ರೆಯನ್ನು ಸುರಕ್ಷಿತ ಮತ್ತು ಸುಸಜ್ಜಿತಗೊಳಿಸುವುದಕ್ಕಾಗಿ ಶಬರಿಮಲೆಯಲ್ಲಿ ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ಜಾಗತಿಕ ಅಯ್ಯಪ್ಪ ಸಂಗಮ’ದಲ್ಲಿ ಶನಿವಾರ ಘೋಷಿಸಿದರು. </p>.<p>ಜಾಗತಿಕ ಅಯ್ಯಪ್ಪ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸನ್ನಿಧಾನಂ, ಪಂಪಾ ಮತ್ತು ಯಾತ್ರೆಯ ಮಾರ್ಗದ ಅಭಿವೃದ್ಧಿಯ ವಿವಿಧ ಹಂತಗಳಿಗೆ ಒಟ್ಟು ₹1033.62 ಕೋಟಿ ಖರ್ಚು ಮಾಡಲಾಗುವುದು. ಈ ಅಭಿವೃದ್ಧಿ ಕಾರ್ಯಗಳು 2039ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದು ತಿಳಿಸಿದರು. </p>.<p class="title">ಭಕ್ತರಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 2025ರಿಂದ 2030ರ ವೇಳೆಗೆ ₹300 ಕೋಟಿಗೂ ಹೆಚ್ಚು ಖರ್ಚು ಮಾಡಲಾಗುವುದು. </p>.<p class="title">ಸಮಾವೇಶಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರ ಕುರಿತು ಮಾತನಾಡಿದ ಅವರು ‘ಭಕ್ತರ ವೇಷದಲ್ಲಿರುವ ಕೆಲ ವ್ಯಕ್ತಿಗಳು ಸುಪ್ರೀಂ ಕೋರ್ಟ್ವರೆಗೂ ಹೋಗಿ ಸಮಾವೇಶಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಆದರೆ ಅಂಥ ಯತ್ನಗಳನ್ನು ಸುಪ್ರೀಂ ಕೋರ್ಟ್ ತಡೆಯಿತು’ ಎಂದು ಹೇಳಿದರು.</p>.<p>ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ‘ತಿರುವಾಂಕೂರು ದೇವಸ್ವಂ ಮಂಡಳಿ’ಯು (ಟಿಡಿಬಿ) ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಪಂಪಾದಲ್ಲಿ ‘ಜಾಗತಿಕ ಅಯ್ಯಪ್ಪ ಸಂಗಮ’ವನ್ನು ಆಯೋಜಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>