<p><strong>ಹೈದರಾಬಾದ್:</strong> ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರ ಅಣ್ವಸ್ತ್ರ ಬೆದರಿಕೆಯನ್ನು ಖಂಡಿಸಿರುವ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ಧೀನ್ ಓವೈಸಿ, ಈ ಬಗ್ಗೆ ಮೋದಿ ಸರ್ಕಾರವು ತೀಕ್ಷ್ಣ ರಾಜಕೀಯ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. </p>.<p>‘ಮುನೀರ್ ಅವರು ಅಮೆರಿಕದ ನೆಲದಲ್ಲಿ ನಿಂತು ಭಾರತ ಮತ್ತು ಭಾರತೀಯರ ವಿರುದ್ಧ ಮಾತನಾಡಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಇದನ್ನು ಖಂಡಿಸಲು ಕೇವಲ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಮಾತ್ರ ಸಾಕಾಗುವುದಿಲ್ಲ. ಭಾರತವು ಮುನೀರ್ ಹೇಳಿಕೆ ವಿರುದ್ಧ ಶಕ್ತವಾದ ಪ್ರತಿಭಟನೆಯನ್ನು ದಾಖಲಿಸಬೇಕು ಮತ್ತು ಈ ಬಗ್ಗೆ ಅಮೆರಿಕದೊಂದಿಗೆ ಮಾತುಕತೆ ನಡೆಸಬೇಕು’ ಎಂದು ಓವೈಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p class="title">‘ಪಾಕಿಸ್ತಾನದ ಮಿಲಿಟರಿ ವಿನ್ಯಾಸ ಏನೆಂದು ತಿಳಿದುಕೊಂಡು ಭಾರತವು ತನ್ನ ಶಸಸ್ತ್ರ ಪಡೆಯನ್ನು ಆಧುನೀಕರಣಗೊಳಿಸುವ ಅಗತ್ಯವಿದೆ. ಮೋದಿ ಸರ್ಕಾರವು ರಕ್ಷಣಾ ಕ್ಷೇತ್ರಕ್ಕೆ ಬಜೆಟ್ನಲ್ಲಿ ಕಡಿಮೆ ಅನುದಾನ ಮೀಸಲಿಡುವುದನ್ನು ಮುಂದುವರಿಸಬಾರದು. ನಾವು ಇನ್ನಷ್ಟು ಸನ್ನದ್ಧ ಸ್ಥಿತಿಯಲ್ಲಿರಬೇಕು’ ಎಂದು ಓವೈಸಿ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರ ಅಣ್ವಸ್ತ್ರ ಬೆದರಿಕೆಯನ್ನು ಖಂಡಿಸಿರುವ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ಧೀನ್ ಓವೈಸಿ, ಈ ಬಗ್ಗೆ ಮೋದಿ ಸರ್ಕಾರವು ತೀಕ್ಷ್ಣ ರಾಜಕೀಯ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. </p>.<p>‘ಮುನೀರ್ ಅವರು ಅಮೆರಿಕದ ನೆಲದಲ್ಲಿ ನಿಂತು ಭಾರತ ಮತ್ತು ಭಾರತೀಯರ ವಿರುದ್ಧ ಮಾತನಾಡಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಇದನ್ನು ಖಂಡಿಸಲು ಕೇವಲ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಮಾತ್ರ ಸಾಕಾಗುವುದಿಲ್ಲ. ಭಾರತವು ಮುನೀರ್ ಹೇಳಿಕೆ ವಿರುದ್ಧ ಶಕ್ತವಾದ ಪ್ರತಿಭಟನೆಯನ್ನು ದಾಖಲಿಸಬೇಕು ಮತ್ತು ಈ ಬಗ್ಗೆ ಅಮೆರಿಕದೊಂದಿಗೆ ಮಾತುಕತೆ ನಡೆಸಬೇಕು’ ಎಂದು ಓವೈಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p class="title">‘ಪಾಕಿಸ್ತಾನದ ಮಿಲಿಟರಿ ವಿನ್ಯಾಸ ಏನೆಂದು ತಿಳಿದುಕೊಂಡು ಭಾರತವು ತನ್ನ ಶಸಸ್ತ್ರ ಪಡೆಯನ್ನು ಆಧುನೀಕರಣಗೊಳಿಸುವ ಅಗತ್ಯವಿದೆ. ಮೋದಿ ಸರ್ಕಾರವು ರಕ್ಷಣಾ ಕ್ಷೇತ್ರಕ್ಕೆ ಬಜೆಟ್ನಲ್ಲಿ ಕಡಿಮೆ ಅನುದಾನ ಮೀಸಲಿಡುವುದನ್ನು ಮುಂದುವರಿಸಬಾರದು. ನಾವು ಇನ್ನಷ್ಟು ಸನ್ನದ್ಧ ಸ್ಥಿತಿಯಲ್ಲಿರಬೇಕು’ ಎಂದು ಓವೈಸಿ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>