<p><strong>ನವದೆಹಲಿ:</strong> ಚಂಡೀಗಢದ ಪರ್ಲ್ಸ್ ಆಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸಿಎಲ್) ಸಂಸ್ಥೆ ವಿರುದ್ಧದ ₹48,000 ಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣದಡಿ ₹1,986 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. </p>.<p>ಇದರೊಂದಿಗೆ ಪ್ರಕರಣದಲ್ಲಿ ಈವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಯ ಮೌಲ್ಯವು ₹7,589 ಕೋಟಿಗೆ ಏರಿಕೆಯಾಗಿದೆ ಎಂದು ಇ.ಡಿ ಸೋಮವಾರ ತಿಳಿಸಿದೆ. </p>.<p>ಪಿಎಸಿಎಲ್ ಸಾಮೂಹಿಕ ಹೂಡಿಕೆ ಯೋಜನೆಗಳ ಮೂಲಕ ವಂಚನೆ ಎಸಗಿದೆ. ಕಂಪನಿ ಮತ್ತು ಅದರ ಸಹವರ್ತಿಗಳು, ಕೃಷಿ ಜಮೀನು ಮಾರಾಟ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ದೇಶದಾದ್ಯಂತ ಹೂಡಿಕೆದಾರರಿಂದ ಸುಮಾರು ₹60,000ಕೋಟಿ ಸಂಗ್ರಹಿಸಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. </p>.<p>ಬಹುತೇಕ ಜನರಿಗೆ ಹೂಡಿಕೆಗೆ ಪ್ರತಿಯಾಗಿ ಜಮೀನು ನೀಡದೇ ವಂಚಿಸಲಾಗಿದೆ. ಹೂಡಿಕೆದಾರರಿಗೆ ನೀಡಬೇಕಿದ್ದ ₹48,000 ಕೋಟಿಯನ್ನು ಪಾವತಿಸದೇ ವಂಚಿಸಲಾಗಿದೆ. </p>.<p class="title">ಪಂಜಾಬ್ನ ಲೂಧಿಯಾನ ಹಾಗೂ ರಾಜಸ್ಥಾನದ ಜೈಪುರದಲ್ಲಿರುವ 37 ಸ್ತಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹1,986.48 ಕೋಟಿ. ವಂಚನೆಯಿಂದ ಬಂದ ಹಣದ ಒಂದು ಭಾಗವನ್ನು ಈ ಆಸ್ತಿಗಳನ್ನು ಗಳಿಸಲು ಬಳಸಲಾಗಿದೆ ಎಂದು ಇ.ಡಿ ಹೇಳಿದೆ. </p>.<p class="title">ಪಿಎಸಿಎಲ್ನ ಪ್ರವರ್ತಕ ದಿವಂಗತ ನಿರ್ಮಲ್ ಸಿಂಗ್ ಭಂಗೂ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಇ.ಡಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಭಂಗೂ ಕಳೆದ ವರ್ಷ ಆಗಸ್ಟ್ನಲ್ಲಿ ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚಂಡೀಗಢದ ಪರ್ಲ್ಸ್ ಆಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸಿಎಲ್) ಸಂಸ್ಥೆ ವಿರುದ್ಧದ ₹48,000 ಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣದಡಿ ₹1,986 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. </p>.<p>ಇದರೊಂದಿಗೆ ಪ್ರಕರಣದಲ್ಲಿ ಈವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಯ ಮೌಲ್ಯವು ₹7,589 ಕೋಟಿಗೆ ಏರಿಕೆಯಾಗಿದೆ ಎಂದು ಇ.ಡಿ ಸೋಮವಾರ ತಿಳಿಸಿದೆ. </p>.<p>ಪಿಎಸಿಎಲ್ ಸಾಮೂಹಿಕ ಹೂಡಿಕೆ ಯೋಜನೆಗಳ ಮೂಲಕ ವಂಚನೆ ಎಸಗಿದೆ. ಕಂಪನಿ ಮತ್ತು ಅದರ ಸಹವರ್ತಿಗಳು, ಕೃಷಿ ಜಮೀನು ಮಾರಾಟ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ದೇಶದಾದ್ಯಂತ ಹೂಡಿಕೆದಾರರಿಂದ ಸುಮಾರು ₹60,000ಕೋಟಿ ಸಂಗ್ರಹಿಸಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. </p>.<p>ಬಹುತೇಕ ಜನರಿಗೆ ಹೂಡಿಕೆಗೆ ಪ್ರತಿಯಾಗಿ ಜಮೀನು ನೀಡದೇ ವಂಚಿಸಲಾಗಿದೆ. ಹೂಡಿಕೆದಾರರಿಗೆ ನೀಡಬೇಕಿದ್ದ ₹48,000 ಕೋಟಿಯನ್ನು ಪಾವತಿಸದೇ ವಂಚಿಸಲಾಗಿದೆ. </p>.<p class="title">ಪಂಜಾಬ್ನ ಲೂಧಿಯಾನ ಹಾಗೂ ರಾಜಸ್ಥಾನದ ಜೈಪುರದಲ್ಲಿರುವ 37 ಸ್ತಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹1,986.48 ಕೋಟಿ. ವಂಚನೆಯಿಂದ ಬಂದ ಹಣದ ಒಂದು ಭಾಗವನ್ನು ಈ ಆಸ್ತಿಗಳನ್ನು ಗಳಿಸಲು ಬಳಸಲಾಗಿದೆ ಎಂದು ಇ.ಡಿ ಹೇಳಿದೆ. </p>.<p class="title">ಪಿಎಸಿಎಲ್ನ ಪ್ರವರ್ತಕ ದಿವಂಗತ ನಿರ್ಮಲ್ ಸಿಂಗ್ ಭಂಗೂ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಇ.ಡಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಭಂಗೂ ಕಳೆದ ವರ್ಷ ಆಗಸ್ಟ್ನಲ್ಲಿ ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>