<p><strong>ತಿರುವನಂತಪುರ</strong>: ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರ ಕುಟುಂಬವೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಿಪಿಎಂನ ಕೇರಳ ರಾಜ್ಯ ಘಟಕ ಹೇಳಿದೆ.</p>.<p>ಅಚ್ಯುತಾನಂದನ್ ಅವರನ್ನು ಮರಣೋತ್ತರವಾಗಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದರಿಂದ ಪ್ರಶಸ್ತಿ ಸ್ವೀಕರಿಸುವ ಬಗ್ಗೆ ಅವರ ಕುಟುಂಬ ನಿರ್ಧರಿಸುತ್ತದೆ ಎಂದು ಸಿಪಿಎಂ ರಾಜ್ಯ ಮಂಡಳಿ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಸೋಮವಾರ ಹೇಳಿದ್ದಾರೆ. ಅವರ ಕುಟುಂಬವು ಪ್ರಶಸ್ತಿ ಸ್ವೀಕರಿಸುವುದರಿಂದ ಪಕ್ಷಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.</p>.<p>ಇದೇ ವೇಳೆ, ಅಚ್ಯುತಾನಂದನ್ ಅವರ ಪುತ್ರ ವಿ.ಎ ಅರುಣ್ಕುಮಾರ್ ಅವರು, ‘ಪಕ್ಷದ ನಾಯಕತ್ವದ ಜತೆ ಸಮಾಲೋಚನೆ ನಡೆಸಿದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರವು ಭಾನುವಾರ ಅಚ್ಯುತಾನಂದನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಇಂತಹ ಗೌರವ ಸ್ವೀಕರಿಸುವುದು ಸಿಪಿಎಂನ ನಿಲುವಿಗೆ ವಿರುದ್ಧವಾಗಿರುವುದರಿಂದ ಅವರ ಕುಟುಂಬ ಪ್ರಶಸ್ತಿ ಸ್ವೀಕರಿಸುತ್ತದೆಯೇ ಎಂಬ ಚರ್ಚೆಗಳು ನಡೆದಿವೆ. </p>.<p>ಇ.ಎಂ.ಎಸ್ ನಂಬೂದಿರಿಪಾಡ್ ಸೇರಿದಂತೆ ಸಿಪಿಎಂನ ಹಲವು ನಾಯಕರು ಕೇಂದ್ರ ಸರ್ಕಾರ ನೀಡಿದ್ದ ಗೌರವವನ್ನು ಈ ಹಿಂದೆ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರ ಕುಟುಂಬವೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಿಪಿಎಂನ ಕೇರಳ ರಾಜ್ಯ ಘಟಕ ಹೇಳಿದೆ.</p>.<p>ಅಚ್ಯುತಾನಂದನ್ ಅವರನ್ನು ಮರಣೋತ್ತರವಾಗಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದರಿಂದ ಪ್ರಶಸ್ತಿ ಸ್ವೀಕರಿಸುವ ಬಗ್ಗೆ ಅವರ ಕುಟುಂಬ ನಿರ್ಧರಿಸುತ್ತದೆ ಎಂದು ಸಿಪಿಎಂ ರಾಜ್ಯ ಮಂಡಳಿ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಸೋಮವಾರ ಹೇಳಿದ್ದಾರೆ. ಅವರ ಕುಟುಂಬವು ಪ್ರಶಸ್ತಿ ಸ್ವೀಕರಿಸುವುದರಿಂದ ಪಕ್ಷಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.</p>.<p>ಇದೇ ವೇಳೆ, ಅಚ್ಯುತಾನಂದನ್ ಅವರ ಪುತ್ರ ವಿ.ಎ ಅರುಣ್ಕುಮಾರ್ ಅವರು, ‘ಪಕ್ಷದ ನಾಯಕತ್ವದ ಜತೆ ಸಮಾಲೋಚನೆ ನಡೆಸಿದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರವು ಭಾನುವಾರ ಅಚ್ಯುತಾನಂದನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಇಂತಹ ಗೌರವ ಸ್ವೀಕರಿಸುವುದು ಸಿಪಿಎಂನ ನಿಲುವಿಗೆ ವಿರುದ್ಧವಾಗಿರುವುದರಿಂದ ಅವರ ಕುಟುಂಬ ಪ್ರಶಸ್ತಿ ಸ್ವೀಕರಿಸುತ್ತದೆಯೇ ಎಂಬ ಚರ್ಚೆಗಳು ನಡೆದಿವೆ. </p>.<p>ಇ.ಎಂ.ಎಸ್ ನಂಬೂದಿರಿಪಾಡ್ ಸೇರಿದಂತೆ ಸಿಪಿಎಂನ ಹಲವು ನಾಯಕರು ಕೇಂದ್ರ ಸರ್ಕಾರ ನೀಡಿದ್ದ ಗೌರವವನ್ನು ಈ ಹಿಂದೆ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>