<p><strong>ಶ್ರೀನಗರ:</strong> ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯ ಹಿಂದೆ, ಇಬ್ಬರು ಸ್ಥಳೀಯರು ಸೇರಿದಂತೆ 5–6 ಮಂದಿ ಉಗ್ರರ ಕೈವಾಡ ಇದೆ. ಇವರು ಅಪಾರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ.</p>.<p>ಉಗ್ರರು ಹತ್ಯೆ ಮಾಡುವುದಕ್ಕೆ ಅನುಸರಿಸಿದ ವಿಧಾನಗಳು ಭೀಕರವಾಗಿದ್ದವು ಎಂಬ ಮಾತನ್ನು ಈ ದಾಳಿಯನ್ನು ಪ್ರತ್ಯಕ್ಷ ಕಂಡ ಕೆಲವರು ಹೇಳುತ್ತಾರೆ. </p>.<p>‘ಉಗ್ರರು ಸೇನೆಯ ಯೋಧರಂತೆ ಸಮವಸ್ತ್ರಗಳನ್ನು ಧರಿಸಿದ್ದರು. ಪ್ರವಾಸಿಗರ ಬಳಿ ತೆರಳಿ, ಅವರ ಗುರುತಿನ ಚೀಟಿ ಕೇಳಿದ್ದಾರೆ. ನಂತರ ಎಕೆ–47 ರೈಫಲ್ಗಳಿಂದ ಗುಂಡು ಹಾರಿಸಿದ್ದಾರೆ’ ಎಂದು ಅವರು ವಿವರಿಸುತ್ತಾರೆ.</p>.<p>‘ಯಾವುದೇ ವಿವೇಚನೆಯಿಲ್ಲದೆಯೇ, ನಾಗರಿಕರನ್ನು ಗುರಿಯಾಗಿಸಿ ಉಗ್ರರು ಗುಂಡು ಹಾರಿಸಿದರು. ಕೆಲವೇ ಕ್ಷಣಗಳಲ್ಲಿ ಘಟನಾ ಸ್ಥಳದಲ್ಲಿ ಆತಂಕ, ಗೊಂದಲ ಮನೆ ಮಾಡಿತ್ತು’ ಎಂದೂ ಕೆಲವರು ಭೀಕರ ಕ್ಷಣಗಳನ್ನು ವಿವರಿಸುತ್ತಾರೆ.</p>.<p>‘ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ಮಾಡುವುದಕ್ಕೂ ಮುನ್ನ ಒಂದು ಗಂಟೆಗೂ ಹೆಚ್ಚು ಸಮಯದಿಂದ ಉಗ್ರರು ಸ್ಥಳದಲ್ಲಿ ಇದ್ದರು. ತಾವು ರೂಪಿಸಿದ್ದ ಯೋಜನೆಯಂತೆಯೇ ದಾಳಿ ಮಾಡಿದರು ಹಾಗೂ ಇದು ಅಧಿಕ ಸಾವು–ನೋವಿಗೆ ಕಾರಣವಾಯಿತು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.</p>.<p>‘ಇದು ಪೂರ್ವ ಯೋಜಿತ ಕೃತ್ಯ. ಗುಂಪೊಂದರಿಂದ ಒಬ್ಬೊಬ್ಬರಂತೆ ಪ್ರವಾಸಿಗನನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿದ್ದಾರೆ. ಅವರ ಗುರುತು ಕೇಳಿದ ನಂತರ, ಗುಂಡಿಕ್ಕಿದ್ದಾರೆ. ಹೆಚ್ಚು ಜನರನ್ನು ಹತ್ಯೆ ಮಾಡಬೇಕು ಎಂಬ ಉದ್ದೇಶದಿಂದಲೇ ಉಗ್ರರು ಬಹಳ ಸೂಕ್ಷ್ಮವಾಗಿ ದಾಳಿ ನಡೆಸಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯ ಹಿಂದೆ, ಇಬ್ಬರು ಸ್ಥಳೀಯರು ಸೇರಿದಂತೆ 5–6 ಮಂದಿ ಉಗ್ರರ ಕೈವಾಡ ಇದೆ. ಇವರು ಅಪಾರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ.</p>.<p>ಉಗ್ರರು ಹತ್ಯೆ ಮಾಡುವುದಕ್ಕೆ ಅನುಸರಿಸಿದ ವಿಧಾನಗಳು ಭೀಕರವಾಗಿದ್ದವು ಎಂಬ ಮಾತನ್ನು ಈ ದಾಳಿಯನ್ನು ಪ್ರತ್ಯಕ್ಷ ಕಂಡ ಕೆಲವರು ಹೇಳುತ್ತಾರೆ. </p>.<p>‘ಉಗ್ರರು ಸೇನೆಯ ಯೋಧರಂತೆ ಸಮವಸ್ತ್ರಗಳನ್ನು ಧರಿಸಿದ್ದರು. ಪ್ರವಾಸಿಗರ ಬಳಿ ತೆರಳಿ, ಅವರ ಗುರುತಿನ ಚೀಟಿ ಕೇಳಿದ್ದಾರೆ. ನಂತರ ಎಕೆ–47 ರೈಫಲ್ಗಳಿಂದ ಗುಂಡು ಹಾರಿಸಿದ್ದಾರೆ’ ಎಂದು ಅವರು ವಿವರಿಸುತ್ತಾರೆ.</p>.<p>‘ಯಾವುದೇ ವಿವೇಚನೆಯಿಲ್ಲದೆಯೇ, ನಾಗರಿಕರನ್ನು ಗುರಿಯಾಗಿಸಿ ಉಗ್ರರು ಗುಂಡು ಹಾರಿಸಿದರು. ಕೆಲವೇ ಕ್ಷಣಗಳಲ್ಲಿ ಘಟನಾ ಸ್ಥಳದಲ್ಲಿ ಆತಂಕ, ಗೊಂದಲ ಮನೆ ಮಾಡಿತ್ತು’ ಎಂದೂ ಕೆಲವರು ಭೀಕರ ಕ್ಷಣಗಳನ್ನು ವಿವರಿಸುತ್ತಾರೆ.</p>.<p>‘ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ಮಾಡುವುದಕ್ಕೂ ಮುನ್ನ ಒಂದು ಗಂಟೆಗೂ ಹೆಚ್ಚು ಸಮಯದಿಂದ ಉಗ್ರರು ಸ್ಥಳದಲ್ಲಿ ಇದ್ದರು. ತಾವು ರೂಪಿಸಿದ್ದ ಯೋಜನೆಯಂತೆಯೇ ದಾಳಿ ಮಾಡಿದರು ಹಾಗೂ ಇದು ಅಧಿಕ ಸಾವು–ನೋವಿಗೆ ಕಾರಣವಾಯಿತು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.</p>.<p>‘ಇದು ಪೂರ್ವ ಯೋಜಿತ ಕೃತ್ಯ. ಗುಂಪೊಂದರಿಂದ ಒಬ್ಬೊಬ್ಬರಂತೆ ಪ್ರವಾಸಿಗನನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿದ್ದಾರೆ. ಅವರ ಗುರುತು ಕೇಳಿದ ನಂತರ, ಗುಂಡಿಕ್ಕಿದ್ದಾರೆ. ಹೆಚ್ಚು ಜನರನ್ನು ಹತ್ಯೆ ಮಾಡಬೇಕು ಎಂಬ ಉದ್ದೇಶದಿಂದಲೇ ಉಗ್ರರು ಬಹಳ ಸೂಕ್ಷ್ಮವಾಗಿ ದಾಳಿ ನಡೆಸಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>