<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರ ವಿಧಾನ ಸಭೆಯಲ್ಲಿ ಭಾವುಕ ಭಾಷಣ ಮಾಡಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ‘ಪಹಲ್ಗಾಮ್ ದಾಳಿಗೆ ಸಾರ್ವಜನಿಕರು ತೋರಿರುವ ಪ್ರತಿಕ್ರಿಯೆಯು ಭಯೋತ್ಪಾದನೆ ವಿರುದ್ಧ ಈ ಪ್ರದೇಶದಲ್ಲಿ ನಡೆಯುತ್ತಿರುವ ಸುದೀರ್ಘ ಹೋರಾಟದ ಐತಿಹಾಸಿಕ ತಿರುವು’ ಎಂದು ಬಣ್ಣಿಸಿದ್ದಾರೆ.</p><p>ಉಗ್ರರ ದಾಳಿಯನ್ನು ಖಂಡಿಸಿ ನಿರ್ಣಯ ಕೈಗೊಳ್ಳಲು ಕರೆದಿದ್ದ ವಿಶೇಷ ಅಧಿವೇಶನ ದಲ್ಲಿ ಮಾತನಾಡಿದ ಅವರು, ‘ಕಾಶ್ಮೀರದಾದ್ಯಂತ ಜನರು ದುಃಖವನ್ನು ಸ್ವಯಂಪ್ರೇರಿತರಾಗಿ ವ್ಯಕ್ತಪಡಿಸಿರುವುದು ಭಯೋತ್ಪಾದನೆಯ ಅಂತ್ಯದ ಆರಂಭವನ್ನು ಸೂಚಿಸುತ್ತದೆ’ ಎಂದಿದ್ದಾರೆ.</p><p>‘ಎರಡು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಕಾಶ್ಮೀರದ ಸಾಮಾನ್ಯ ಜನರು ರಾಜಕೀಯ ಪಕ್ಷಗಳ ಮನವಿ ಅಥವಾ ಸರ್ಕಾರದ ಸೂಚನೆಯಿಲ್ಲದೆಯೇ, ಹಿಂಸೆಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಮೊಂಬತ್ತಿ ಬೆಳಗಿಸಿ, ಮೌನ ಮೆರವಣಿಗೆ ನಡೆಸುವ ಮೂಲಕ ಉಗ್ರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ’ ಎಂದು ಹೇಳಿದರು.</p><p>ಜಮ್ಮು ಮತ್ತು ಕಾಶ್ಮೀರದಾದ್ಯಂತ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿದ ಅವರು, ಉಗ್ರರ ದಾಳಿಗೆ ಬಲಿಯಾದವರಿಗಾಗಿ ಇದೇ ಮೊದಲ ಬಾರಿಗೆ ಶ್ರೀನಗರದ ಜಾಮಿಯಾ ಮಸೀದಿ ಮತ್ತು ಇತರ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಗೆ ಮೊದಲು ಎರಡು ನಿಮಿಷಗಳ ಮೌನ ಆಚರಿಸಲಾಯಿತು ಎಂದರು.</p><p>ದಾಳಿಯ ಬಳಿಕ ತಾವು ಪೊಲೀಸ್ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ್ದನ್ನು ನೆನಪಿಸಿದ ಅಬ್ದುಲ್ಲಾ, ‘ಶಾಂತಿ, ಸಂತಸವನ್ನು ಹುಡುಕಿಕೊಂಡು ಬಂದವರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳಬೇಕಾಯಿತು’ ಎಂದು ಭಾವುಕರಾಗಿ ತಿಳಿಸಿದರು.</p><p>ಉಗ್ರರ ದಾಳಿಯಿಂದ ಹಲವು ಪ್ರವಾಸಿ ಗರನ್ನು ರಕ್ಷಿಸಿದ ಯುವಕರು, ಪ್ರವಾಸಿ ತಾಣದಲ್ಲಿ ದಿಕ್ಕು ತೋಚದೆ ನಿಂತಿದ್ದವರಿಗೆ ಹಣ್ಣುಗಳನ್ನು ನೀಡಿದ ಅಂಬಿಗರು ಮತ್ತು ಯಾವುದೇ ಹಣ ಪಡೆಯದೆ ತಮ್ಮ ಮನೆಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿಕೊಟ್ಟ ಕಾಶ್ಮೀರಿಗಳ ಬಗ್ಗೆಯೂ ಅವರು ಮಾತನಾಡಿದರು.</p><p>‘ಕಾಶ್ಮೀರದ ನಿಜವಾದ ಚೈತನ್ಯ ಇದೇ ಆಗಿದೆ. ಇಲ್ಲಿನ ಜನರ ಅತಿಥಿ ಸತ್ಕಾರ, ಧೈರ್ಯ ಮತ್ತು ಪರೋಪಕಾರವನ್ನು ಹಿಂಸೆಯಿಂದ ನಾಶಪಡಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.</p><p>ಉಗ್ರರ ದಾಳಿಯನ್ನು ಖಂಡಿಸುವ ಮತ್ತು ಸಂತ್ರಸ್ತರು ಹಾಗೂ ಅವರ ಕುಟುಂಬಗಳ ಪರ ಒಗ್ಗಟ್ಟು ತೋರುವ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<div><blockquote>ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳ ಕ್ಷಮೆಯಾಚಿಸು ವುದು ಹೇಗೆ ಎಂಬುದೇ ತಿಳಿಯುತ್ತಿಲ್ಲ. ಕ್ಷಮೆ ಕೇಳಲು ನನ್ನಲ್ಲಿ ಪದಗಳಿಲ್ಲ.</blockquote><span class="attribution">ಒಮರ್ ಅಬ್ದುಲ್ಲಾ, ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರ ವಿಧಾನ ಸಭೆಯಲ್ಲಿ ಭಾವುಕ ಭಾಷಣ ಮಾಡಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ‘ಪಹಲ್ಗಾಮ್ ದಾಳಿಗೆ ಸಾರ್ವಜನಿಕರು ತೋರಿರುವ ಪ್ರತಿಕ್ರಿಯೆಯು ಭಯೋತ್ಪಾದನೆ ವಿರುದ್ಧ ಈ ಪ್ರದೇಶದಲ್ಲಿ ನಡೆಯುತ್ತಿರುವ ಸುದೀರ್ಘ ಹೋರಾಟದ ಐತಿಹಾಸಿಕ ತಿರುವು’ ಎಂದು ಬಣ್ಣಿಸಿದ್ದಾರೆ.</p><p>ಉಗ್ರರ ದಾಳಿಯನ್ನು ಖಂಡಿಸಿ ನಿರ್ಣಯ ಕೈಗೊಳ್ಳಲು ಕರೆದಿದ್ದ ವಿಶೇಷ ಅಧಿವೇಶನ ದಲ್ಲಿ ಮಾತನಾಡಿದ ಅವರು, ‘ಕಾಶ್ಮೀರದಾದ್ಯಂತ ಜನರು ದುಃಖವನ್ನು ಸ್ವಯಂಪ್ರೇರಿತರಾಗಿ ವ್ಯಕ್ತಪಡಿಸಿರುವುದು ಭಯೋತ್ಪಾದನೆಯ ಅಂತ್ಯದ ಆರಂಭವನ್ನು ಸೂಚಿಸುತ್ತದೆ’ ಎಂದಿದ್ದಾರೆ.</p><p>‘ಎರಡು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಕಾಶ್ಮೀರದ ಸಾಮಾನ್ಯ ಜನರು ರಾಜಕೀಯ ಪಕ್ಷಗಳ ಮನವಿ ಅಥವಾ ಸರ್ಕಾರದ ಸೂಚನೆಯಿಲ್ಲದೆಯೇ, ಹಿಂಸೆಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಮೊಂಬತ್ತಿ ಬೆಳಗಿಸಿ, ಮೌನ ಮೆರವಣಿಗೆ ನಡೆಸುವ ಮೂಲಕ ಉಗ್ರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ’ ಎಂದು ಹೇಳಿದರು.</p><p>ಜಮ್ಮು ಮತ್ತು ಕಾಶ್ಮೀರದಾದ್ಯಂತ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿದ ಅವರು, ಉಗ್ರರ ದಾಳಿಗೆ ಬಲಿಯಾದವರಿಗಾಗಿ ಇದೇ ಮೊದಲ ಬಾರಿಗೆ ಶ್ರೀನಗರದ ಜಾಮಿಯಾ ಮಸೀದಿ ಮತ್ತು ಇತರ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಗೆ ಮೊದಲು ಎರಡು ನಿಮಿಷಗಳ ಮೌನ ಆಚರಿಸಲಾಯಿತು ಎಂದರು.</p><p>ದಾಳಿಯ ಬಳಿಕ ತಾವು ಪೊಲೀಸ್ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ್ದನ್ನು ನೆನಪಿಸಿದ ಅಬ್ದುಲ್ಲಾ, ‘ಶಾಂತಿ, ಸಂತಸವನ್ನು ಹುಡುಕಿಕೊಂಡು ಬಂದವರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳಬೇಕಾಯಿತು’ ಎಂದು ಭಾವುಕರಾಗಿ ತಿಳಿಸಿದರು.</p><p>ಉಗ್ರರ ದಾಳಿಯಿಂದ ಹಲವು ಪ್ರವಾಸಿ ಗರನ್ನು ರಕ್ಷಿಸಿದ ಯುವಕರು, ಪ್ರವಾಸಿ ತಾಣದಲ್ಲಿ ದಿಕ್ಕು ತೋಚದೆ ನಿಂತಿದ್ದವರಿಗೆ ಹಣ್ಣುಗಳನ್ನು ನೀಡಿದ ಅಂಬಿಗರು ಮತ್ತು ಯಾವುದೇ ಹಣ ಪಡೆಯದೆ ತಮ್ಮ ಮನೆಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿಕೊಟ್ಟ ಕಾಶ್ಮೀರಿಗಳ ಬಗ್ಗೆಯೂ ಅವರು ಮಾತನಾಡಿದರು.</p><p>‘ಕಾಶ್ಮೀರದ ನಿಜವಾದ ಚೈತನ್ಯ ಇದೇ ಆಗಿದೆ. ಇಲ್ಲಿನ ಜನರ ಅತಿಥಿ ಸತ್ಕಾರ, ಧೈರ್ಯ ಮತ್ತು ಪರೋಪಕಾರವನ್ನು ಹಿಂಸೆಯಿಂದ ನಾಶಪಡಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.</p><p>ಉಗ್ರರ ದಾಳಿಯನ್ನು ಖಂಡಿಸುವ ಮತ್ತು ಸಂತ್ರಸ್ತರು ಹಾಗೂ ಅವರ ಕುಟುಂಬಗಳ ಪರ ಒಗ್ಗಟ್ಟು ತೋರುವ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<div><blockquote>ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳ ಕ್ಷಮೆಯಾಚಿಸು ವುದು ಹೇಗೆ ಎಂಬುದೇ ತಿಳಿಯುತ್ತಿಲ್ಲ. ಕ್ಷಮೆ ಕೇಳಲು ನನ್ನಲ್ಲಿ ಪದಗಳಿಲ್ಲ.</blockquote><span class="attribution">ಒಮರ್ ಅಬ್ದುಲ್ಲಾ, ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>