<p><strong>ನವದೆಹಲಿ</strong>: ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಸಂದರ್ಭದಲ್ಲೇ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಸಮರಾಭ್ಯಾಸ ನಡೆಸಿದ್ದು, ‘ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ’ ಎಂಬ ಸಂದೇಶ ರವಾನಿಸಿದೆ.</p><p>ನೌಕಾಪಡೆಯ ಪಶ್ಚಿಮ ನೌಕಾ ಕಮಾಂಡ್ನ ಯುದ್ಧ ನೌಕೆಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಅರಬ್ಬಿ ಸಮುದ್ರದಲ್ಲಿ ಜಾಗೃತ ಸ್ಥಿತಿಯಲ್ಲಿ ಇಡಲಾಗಿದೆ.</p><p>‘ಭಾರತೀಯ ನೌಕಾಪಡೆಯು ಯಾವಾಗಲೂ ಜಾಗರೂಕವಾಗಿರುತ್ತದೆ. ಪಹಲ್ಗಾಮ್ ಘಟನೆಯ ನಂತರ ಯುದ್ಧ ಸನ್ನದ್ಧತೆಯ ಮಟ್ಟವನ್ನು ಹೆಚ್ಚಿಸಲಾಗಿದೆ’ ಎಂದು ಪಶ್ಚಿಮ ನೌಕಾ ಕಮಾಂಡ್ನ ಮುಂಬೈನಲ್ಲಿರುವ ಕೇಂದ್ರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಶತ್ರುವಿನ ಯುದ್ಧ ನೌಕೆಯನ್ನು ನಾಶಪಡಿಸುವ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಯುದ್ಧ ನೌಕೆಯಿಂದ ಕ್ಷಿಪಣಿಗಳನ್ನು ಹಾರಿಸುವ ಚಿತ್ರ ಹಾಗೂ ವಿಡಿಯೊಗಳನ್ನು ಭಾರತೀಯ ನೌಕಾಪಡೆಯು ಭಾನುವಾರ ಬಿಡುಗಡೆ ಮಾಡಿದೆ. ಆದರೆ ಸಮರಾಭ್ಯಾಸ ಯಾವಾಗ ನಡೆಸಲಾಗಿದೆ ಎಂಬ ವಿವರಗಳನ್ನು ನೀಡಿಲ್ಲ.</p><p>‘ನೌಕಾ ಕಾರ್ಯಾಚರಣೆಗಳನ್ನು ನಡೆಸಲು ಬಳಸುವ ಯುದ್ಧ ನೌಕೆಗಳು, ವಿಮಾನಗಳು, ಇತರ ವ್ಯವಸ್ಥೆಗಳು ಮತ್ತು ಸಿಬ್ಬಂದಿಯ ಸನ್ನದ್ಧತೆಯನ್ನು ಪರೀಕ್ಷೆಗೆ ಒಳಪಡಿಸಲು ಸಮರಾಭ್ಯಾಸ ನಡೆಸಲಾಗಿದೆ’ ಎಂದು ನೌಕಾಪಡೆಯ ಹೇಳಿಕೆ ತಿಳಿಸಿದೆ.</p><p>‘ದೇಶದ ಕಡಲ ಭದ್ರತೆಯನ್ನು ಕಾಪಾಡಲು ಭಾರತೀಯ ನೌಕಾಪಡೆಯು ಯಾವುದೇ ಸಮಯದಲ್ಲಿ, ಎಲ್ಲಿಯಾದರೂ, ಹೇಗಾದರೂ ಸಿದ್ಧವಾಗಿದೆ’ ಎಂದು ಹೇಳಿದೆ.</p><p>ಯುದ್ಧವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಒಳಗೊಂಡಂತೆ ಪಶ್ಚಿಮ ಕಮಾಂಡ್ನ ನೌಕೆಗಳು ಮತ್ತು ಜಲಾಂತರ್ಗಾಮಿ ನೌಕೆಗಳು ಸಮರಾಭ್ಯಾಸದಲ್ಲಿ ಪಾಲ್ಗೊಂಡವು.</p><p>ನೌಕಾಪಡೆಯು ಕಳೆದ ವಾರ, ನೆಲದಿಂದ ಆಗಸಕ್ಕೆ ಚಿಮ್ಮಬಲ್ಲ ಮಧ್ಯಮ ವ್ಯಾಪ್ತಿಯ ಕ್ಷಿಪಣಿಯ ಪರೀಕ್ಷೆಯನ್ನು ಯುದ್ಧನೌಕೆ ‘ಐಎನ್ಎಸ್ ಸೂರತ್’ನಿಂದ ಯಶಸ್ವಿಯಾಗಿ ನಡೆಸಿತ್ತು.</p>.ಪಹಲ್ಗಾಮ್ ಭಯೋತ್ಪಾದಕ ದಾಳಿ: ನವವಿವಾಹಿತ ನೌಕಾಪಡೆ ಅಧಿಕಾರಿ ಹುತಾತ್ಮ.ಭಾರತ, ಪಾಕ್ ನಡುವೆ ಉದ್ವಿಗ್ನತೆ; ನೌಕಾಪಡೆಯಿಂದ ಕ್ಷಿಪಣಿ ಪರೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಸಂದರ್ಭದಲ್ಲೇ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಸಮರಾಭ್ಯಾಸ ನಡೆಸಿದ್ದು, ‘ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ’ ಎಂಬ ಸಂದೇಶ ರವಾನಿಸಿದೆ.</p><p>ನೌಕಾಪಡೆಯ ಪಶ್ಚಿಮ ನೌಕಾ ಕಮಾಂಡ್ನ ಯುದ್ಧ ನೌಕೆಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಅರಬ್ಬಿ ಸಮುದ್ರದಲ್ಲಿ ಜಾಗೃತ ಸ್ಥಿತಿಯಲ್ಲಿ ಇಡಲಾಗಿದೆ.</p><p>‘ಭಾರತೀಯ ನೌಕಾಪಡೆಯು ಯಾವಾಗಲೂ ಜಾಗರೂಕವಾಗಿರುತ್ತದೆ. ಪಹಲ್ಗಾಮ್ ಘಟನೆಯ ನಂತರ ಯುದ್ಧ ಸನ್ನದ್ಧತೆಯ ಮಟ್ಟವನ್ನು ಹೆಚ್ಚಿಸಲಾಗಿದೆ’ ಎಂದು ಪಶ್ಚಿಮ ನೌಕಾ ಕಮಾಂಡ್ನ ಮುಂಬೈನಲ್ಲಿರುವ ಕೇಂದ್ರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಶತ್ರುವಿನ ಯುದ್ಧ ನೌಕೆಯನ್ನು ನಾಶಪಡಿಸುವ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಯುದ್ಧ ನೌಕೆಯಿಂದ ಕ್ಷಿಪಣಿಗಳನ್ನು ಹಾರಿಸುವ ಚಿತ್ರ ಹಾಗೂ ವಿಡಿಯೊಗಳನ್ನು ಭಾರತೀಯ ನೌಕಾಪಡೆಯು ಭಾನುವಾರ ಬಿಡುಗಡೆ ಮಾಡಿದೆ. ಆದರೆ ಸಮರಾಭ್ಯಾಸ ಯಾವಾಗ ನಡೆಸಲಾಗಿದೆ ಎಂಬ ವಿವರಗಳನ್ನು ನೀಡಿಲ್ಲ.</p><p>‘ನೌಕಾ ಕಾರ್ಯಾಚರಣೆಗಳನ್ನು ನಡೆಸಲು ಬಳಸುವ ಯುದ್ಧ ನೌಕೆಗಳು, ವಿಮಾನಗಳು, ಇತರ ವ್ಯವಸ್ಥೆಗಳು ಮತ್ತು ಸಿಬ್ಬಂದಿಯ ಸನ್ನದ್ಧತೆಯನ್ನು ಪರೀಕ್ಷೆಗೆ ಒಳಪಡಿಸಲು ಸಮರಾಭ್ಯಾಸ ನಡೆಸಲಾಗಿದೆ’ ಎಂದು ನೌಕಾಪಡೆಯ ಹೇಳಿಕೆ ತಿಳಿಸಿದೆ.</p><p>‘ದೇಶದ ಕಡಲ ಭದ್ರತೆಯನ್ನು ಕಾಪಾಡಲು ಭಾರತೀಯ ನೌಕಾಪಡೆಯು ಯಾವುದೇ ಸಮಯದಲ್ಲಿ, ಎಲ್ಲಿಯಾದರೂ, ಹೇಗಾದರೂ ಸಿದ್ಧವಾಗಿದೆ’ ಎಂದು ಹೇಳಿದೆ.</p><p>ಯುದ್ಧವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಒಳಗೊಂಡಂತೆ ಪಶ್ಚಿಮ ಕಮಾಂಡ್ನ ನೌಕೆಗಳು ಮತ್ತು ಜಲಾಂತರ್ಗಾಮಿ ನೌಕೆಗಳು ಸಮರಾಭ್ಯಾಸದಲ್ಲಿ ಪಾಲ್ಗೊಂಡವು.</p><p>ನೌಕಾಪಡೆಯು ಕಳೆದ ವಾರ, ನೆಲದಿಂದ ಆಗಸಕ್ಕೆ ಚಿಮ್ಮಬಲ್ಲ ಮಧ್ಯಮ ವ್ಯಾಪ್ತಿಯ ಕ್ಷಿಪಣಿಯ ಪರೀಕ್ಷೆಯನ್ನು ಯುದ್ಧನೌಕೆ ‘ಐಎನ್ಎಸ್ ಸೂರತ್’ನಿಂದ ಯಶಸ್ವಿಯಾಗಿ ನಡೆಸಿತ್ತು.</p>.ಪಹಲ್ಗಾಮ್ ಭಯೋತ್ಪಾದಕ ದಾಳಿ: ನವವಿವಾಹಿತ ನೌಕಾಪಡೆ ಅಧಿಕಾರಿ ಹುತಾತ್ಮ.ಭಾರತ, ಪಾಕ್ ನಡುವೆ ಉದ್ವಿಗ್ನತೆ; ನೌಕಾಪಡೆಯಿಂದ ಕ್ಷಿಪಣಿ ಪರೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>