<p><strong>ಶ್ರೀನಗರ</strong>: ಪಹಲ್ಗಾಮ್ ದಾಳಿಯ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಬಂಧಿಸಿದೆ.</p>.<p>ಬಟ್ಕೋಟೆಯ ಪರ್ವೇಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ ಪಾರ್ಕ್ನ ಬಶೀರ್ ಅಹ್ಮದ್ ಜೋಥರ್ ಬಂಧಿತರು. ಇವರು ದಾಳಿಯಲ್ಲಿ ಭಾಗಿಯಾಗಿರುವ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್ಐಎ ಹೇಳಿದೆ.</p>.<p>ದಾಳಿಕೋರರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್–ಎ–ತಯಬಾಗೆ (ಎಲ್ಇಟಿ)ಸೇರಿದ ಪಾಕಿಸ್ತಾನ ಪ್ರಜೆಗಳು ಎಂದು ಅವರು ದೃಢಪಡಿಸಿದ್ದಾಗಿ ಸಂಸ್ಥೆ ಹೇಳಿದೆ.</p>.ಪಹಲ್ಗಾಮ್ | ವಿಚಾರಣೆಗೆ ಕರೆದೊಯ್ದಿದ್ದ ಆರೋಪಿ ನದಿಗೆ ಹಾರಿ ಸಾವು; ತನಿಖೆಗೆ ಆಗ್ರಹ.<p>ಪರ್ವೇಜ್ ಮತ್ತು ಬಶೀರ್ ದಾಳಿಗೆ ಮುನ್ನ ಹಿಲ್ ಪಾರ್ಕ್ನಲ್ಲಿರುವ ಗುಡಿಸಲಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು. ಅವರಿಗೆ ಆಹಾರ, ಆಶ್ರಯ ಸೇರಿದಂತೆ ಎಲ್ಲಾ ರೀತಿಯ ಬೆಂಬಲ ನೀಡಿದ್ದರು. </p>.<p>1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಎಎನ್ಐ ಹೇಳಿದೆ.</p>.<p> ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.</p> .ಪಹಲ್ಗಾಮ್ ದಾಳಿ | ಮೃತರಿಗೆ ಶ್ರದ್ಧಾಂಜಲಿ, ನ್ಯಾಯಕ್ಕಾಗಿ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪಹಲ್ಗಾಮ್ ದಾಳಿಯ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಬಂಧಿಸಿದೆ.</p>.<p>ಬಟ್ಕೋಟೆಯ ಪರ್ವೇಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ ಪಾರ್ಕ್ನ ಬಶೀರ್ ಅಹ್ಮದ್ ಜೋಥರ್ ಬಂಧಿತರು. ಇವರು ದಾಳಿಯಲ್ಲಿ ಭಾಗಿಯಾಗಿರುವ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್ಐಎ ಹೇಳಿದೆ.</p>.<p>ದಾಳಿಕೋರರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್–ಎ–ತಯಬಾಗೆ (ಎಲ್ಇಟಿ)ಸೇರಿದ ಪಾಕಿಸ್ತಾನ ಪ್ರಜೆಗಳು ಎಂದು ಅವರು ದೃಢಪಡಿಸಿದ್ದಾಗಿ ಸಂಸ್ಥೆ ಹೇಳಿದೆ.</p>.ಪಹಲ್ಗಾಮ್ | ವಿಚಾರಣೆಗೆ ಕರೆದೊಯ್ದಿದ್ದ ಆರೋಪಿ ನದಿಗೆ ಹಾರಿ ಸಾವು; ತನಿಖೆಗೆ ಆಗ್ರಹ.<p>ಪರ್ವೇಜ್ ಮತ್ತು ಬಶೀರ್ ದಾಳಿಗೆ ಮುನ್ನ ಹಿಲ್ ಪಾರ್ಕ್ನಲ್ಲಿರುವ ಗುಡಿಸಲಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು. ಅವರಿಗೆ ಆಹಾರ, ಆಶ್ರಯ ಸೇರಿದಂತೆ ಎಲ್ಲಾ ರೀತಿಯ ಬೆಂಬಲ ನೀಡಿದ್ದರು. </p>.<p>1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಎಎನ್ಐ ಹೇಳಿದೆ.</p>.<p> ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.</p> .ಪಹಲ್ಗಾಮ್ ದಾಳಿ | ಮೃತರಿಗೆ ಶ್ರದ್ಧಾಂಜಲಿ, ನ್ಯಾಯಕ್ಕಾಗಿ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>