<p><strong>ತಿರುವನಂತಪುರ: </strong>ಪಹಲ್ಗಾಮ್ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡದಿದ್ದರೆ, ಇಂತಹ ದಾಳಿಗಳು ಮುಂದುವರಿಯಲಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಎಚ್ಚರಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಕಳೆದವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.</p><p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ತರೂರ್, ಪಹಲ್ಗಾಮ್ ದಾಳಿಗೆ ಭಾರತ ನೀಡುವ ಪ್ರತಿಕ್ರಿಯೆಗಾಗಿ ಎಲ್ಲರೂ ಕಾಯುತ್ತಿದ್ದಾರೆ ಎಂದಿದ್ದಾರೆ.</p><p>'ನನ್ನ ಪ್ರಕಾರ, ಪ್ರತಿಕ್ರಿಯೆ ನೀಡಲೇಬೇಕು. ಅದರಲ್ಲಿ, ಇಂತಹ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯಾಗಬೇಕು. ತಪ್ಪಿಸಿಕೊಳ್ಳುವ ಕಾಲ ಮುಗಿಯಿತು. ಈಗ ತಪ್ಪಿಗೆ ತಕ್ಕ ಬೆಲೆ ತೆರಲೇಬೇಕು. ಮತ್ತೆ ಅಂತಹ ಕೃತ್ಯವೆಸಗಿದರೆ ಪರಿಣಾಮ ಇನ್ನಷ್ಟು ದೊಡ್ಡದಾಗಿರಬೇಕು' ಎಂದು ಹೇಳಿದ್ದಾರೆ.</p><p>ಮುಂದುವರಿದು, 'ಒಂದು ವೇಳೆ, ಅಂತಹ ಪ್ರತಿಕ್ರಿಯೆ ನೀಡದಿದ್ದರೆ, ಇಂತಹ ಕೃತ್ಯಗಳು ಮುಂದುವರಿಯುತ್ತವೆ' ಎಂದು ಎಚ್ಚರಿಸಿದ್ದಾರೆ.</p><p>ಇದಕ್ಕೂ ಮೊದಲು ತರೂರ್ ಅವರು, ಯಾವುದೇ ದೇಶವು ಶೇ 100 ರಷ್ಟು ಗುಪ್ತಚರ ಮಾಹಿತಿ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆ ಹೇಳಿಕೆಗೆ ಕಾಂಗ್ರೆಸ್ನಲ್ಲೇ ಟೀಕೆ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ, ಗುಪ್ತಚರ ವೈಫಲ್ಯದ ಹೊಣೆಯನ್ನು ಹೊರಲೇಬೇಕಿದೆ. ಆದರೆ, ಅದರ ಬಗ್ಗೆ ಚರ್ಚೆ ಮಾಡುತ್ತಾ ಕೂರುವ ಸಮಯ ಇದಲ್ಲ. ಮೊದಲು ತಕ್ಕಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.ಭಾರತದ ದಾಳಿ ಸನ್ನಿಹಿತ; ಅಸ್ತಿತ್ವಕ್ಕೆ ಅಪಾಯ ಬಂದರೆ ಅಣ್ವಸ್ತ್ರ ಬಳಕೆ: ಪಾಕ್ ಸಚಿವ. ಪಹಲ್ಗಾಮ್ ದಾಳಿ: ಭರತ್ ಮನೆಗೆ ಎನ್ಐಎ ಅಧಿಕಾರಿಗಳ ಭೇಟಿ.ರಾಜ್ಯದಲ್ಲಿ ಇದ್ದ ನಾಲ್ವರು ಪಾಕ್ ಪ್ರಜೆಗಳ ಗಡೀಪಾರು.Pahalgam terror attack: ಗಾಯಕಿ ನೇಹಾ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಪಹಲ್ಗಾಮ್ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡದಿದ್ದರೆ, ಇಂತಹ ದಾಳಿಗಳು ಮುಂದುವರಿಯಲಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಎಚ್ಚರಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಕಳೆದವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.</p><p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ತರೂರ್, ಪಹಲ್ಗಾಮ್ ದಾಳಿಗೆ ಭಾರತ ನೀಡುವ ಪ್ರತಿಕ್ರಿಯೆಗಾಗಿ ಎಲ್ಲರೂ ಕಾಯುತ್ತಿದ್ದಾರೆ ಎಂದಿದ್ದಾರೆ.</p><p>'ನನ್ನ ಪ್ರಕಾರ, ಪ್ರತಿಕ್ರಿಯೆ ನೀಡಲೇಬೇಕು. ಅದರಲ್ಲಿ, ಇಂತಹ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯಾಗಬೇಕು. ತಪ್ಪಿಸಿಕೊಳ್ಳುವ ಕಾಲ ಮುಗಿಯಿತು. ಈಗ ತಪ್ಪಿಗೆ ತಕ್ಕ ಬೆಲೆ ತೆರಲೇಬೇಕು. ಮತ್ತೆ ಅಂತಹ ಕೃತ್ಯವೆಸಗಿದರೆ ಪರಿಣಾಮ ಇನ್ನಷ್ಟು ದೊಡ್ಡದಾಗಿರಬೇಕು' ಎಂದು ಹೇಳಿದ್ದಾರೆ.</p><p>ಮುಂದುವರಿದು, 'ಒಂದು ವೇಳೆ, ಅಂತಹ ಪ್ರತಿಕ್ರಿಯೆ ನೀಡದಿದ್ದರೆ, ಇಂತಹ ಕೃತ್ಯಗಳು ಮುಂದುವರಿಯುತ್ತವೆ' ಎಂದು ಎಚ್ಚರಿಸಿದ್ದಾರೆ.</p><p>ಇದಕ್ಕೂ ಮೊದಲು ತರೂರ್ ಅವರು, ಯಾವುದೇ ದೇಶವು ಶೇ 100 ರಷ್ಟು ಗುಪ್ತಚರ ಮಾಹಿತಿ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆ ಹೇಳಿಕೆಗೆ ಕಾಂಗ್ರೆಸ್ನಲ್ಲೇ ಟೀಕೆ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ, ಗುಪ್ತಚರ ವೈಫಲ್ಯದ ಹೊಣೆಯನ್ನು ಹೊರಲೇಬೇಕಿದೆ. ಆದರೆ, ಅದರ ಬಗ್ಗೆ ಚರ್ಚೆ ಮಾಡುತ್ತಾ ಕೂರುವ ಸಮಯ ಇದಲ್ಲ. ಮೊದಲು ತಕ್ಕಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.ಭಾರತದ ದಾಳಿ ಸನ್ನಿಹಿತ; ಅಸ್ತಿತ್ವಕ್ಕೆ ಅಪಾಯ ಬಂದರೆ ಅಣ್ವಸ್ತ್ರ ಬಳಕೆ: ಪಾಕ್ ಸಚಿವ. ಪಹಲ್ಗಾಮ್ ದಾಳಿ: ಭರತ್ ಮನೆಗೆ ಎನ್ಐಎ ಅಧಿಕಾರಿಗಳ ಭೇಟಿ.ರಾಜ್ಯದಲ್ಲಿ ಇದ್ದ ನಾಲ್ವರು ಪಾಕ್ ಪ್ರಜೆಗಳ ಗಡೀಪಾರು.Pahalgam terror attack: ಗಾಯಕಿ ನೇಹಾ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>