<p><strong>ಕಾನ್ಪುರ:</strong> ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವಿಗೀಡಾದ ಶುಭಂ ದ್ವಿವೇದಿ ಅವರ ಹೆಸರನ್ನು ಶ್ಯಾಮ್ನಗರದ ಒಂದು ಉದ್ಯಾನ ಹಾಗೂ ಚೌಕಕ್ಕೆ ಇಡಲಾಗುವುದು ಎಂದು ಕಾನ್ಪುರ ನಗರ ಮೇಯರ್ ಪ್ರಮೀಳಾ ಪಾಂಡೆ ಶನಿವಾರ ತಿಳಿಸಿದ್ದಾರೆ.</p><p>ಇದೇ ವರ್ಷ ಫೆಬ್ರುವರಿ 12ರಂದು ವಿವಾಹವಾಗಿದ್ದ 31ರ ಹರೆಯದ ದ್ವಿವೇದಿಯವರನ್ನು, ಪಹಲ್ಗಾಮ್ನಲ್ಲಿ ಹೆಂಡತಿ ಅಶ್ನಯ ಅವರ ಮುಂದೆಯೇ ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದರು.</p>.ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಖಂಡನೆ: ರಸ್ತೆ ಮೇಲೆ ಪಾಕ್ ಧ್ವಜ ಅಂಟಿಸಿ ಆಕ್ರೋಶ.<p>‘ಪಹಲ್ಗಾಮ್ನಲ್ಲಿ ಉಗ್ರರ ಗುಂಡಿನ ದಾಳಿಯಿಂದ ಸಾವಿಗೀಡಾದ ಶುಭಂ ದ್ವಿವೇದಿ ಅವರ ಹೆಸರನ್ನು ಶ್ಯಾಮ್ನಗರದ ಉದ್ಯಾನ ಹಾಗೂ ಚೌಕವೊಂದಕ್ಕೆ ಇಡಲು ಕಾನ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ನಿರ್ಧರಿಸಿದೆ’ ಎಂದು ಪಾಂಡೆ ತಿಳಿಸಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಶನ್ಯಾ ಬಯಸಿದರೆ ಅವರಿಗೆ ಕಾನ್ಪುರ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಹೊರಗುತ್ತಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.</p>.ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿದ ಕರ್ನಾಟಕ ಮುಸ್ಲಿಂ ಮುತ್ತಹದ್ ಮಹಜ್ .<p>ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕೆಎಂಸಿ ಪ್ರಧಾನ ಕಚೇರಿಯಿಂದ ಮೋತಿಜೀಲ್ವರೆಗೆ ಮೇಯರ್, ಬಿಜೆಪಿ ಕೌನ್ಸಿಲರ್ಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು.</p><p>ಪ್ರತಿಭಟನಾಕಾರರು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.</p>.VIDEO | ಲಂಡನ್: ಭಾರತೀಯರನ್ನು ಉದ್ದೇಶಿಸಿ ಕತ್ತು ಸೀಳುತ್ತೇವೆ ಎಂದ ಪಾಕ್ ಅಧಿಕಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ:</strong> ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವಿಗೀಡಾದ ಶುಭಂ ದ್ವಿವೇದಿ ಅವರ ಹೆಸರನ್ನು ಶ್ಯಾಮ್ನಗರದ ಒಂದು ಉದ್ಯಾನ ಹಾಗೂ ಚೌಕಕ್ಕೆ ಇಡಲಾಗುವುದು ಎಂದು ಕಾನ್ಪುರ ನಗರ ಮೇಯರ್ ಪ್ರಮೀಳಾ ಪಾಂಡೆ ಶನಿವಾರ ತಿಳಿಸಿದ್ದಾರೆ.</p><p>ಇದೇ ವರ್ಷ ಫೆಬ್ರುವರಿ 12ರಂದು ವಿವಾಹವಾಗಿದ್ದ 31ರ ಹರೆಯದ ದ್ವಿವೇದಿಯವರನ್ನು, ಪಹಲ್ಗಾಮ್ನಲ್ಲಿ ಹೆಂಡತಿ ಅಶ್ನಯ ಅವರ ಮುಂದೆಯೇ ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದರು.</p>.ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಖಂಡನೆ: ರಸ್ತೆ ಮೇಲೆ ಪಾಕ್ ಧ್ವಜ ಅಂಟಿಸಿ ಆಕ್ರೋಶ.<p>‘ಪಹಲ್ಗಾಮ್ನಲ್ಲಿ ಉಗ್ರರ ಗುಂಡಿನ ದಾಳಿಯಿಂದ ಸಾವಿಗೀಡಾದ ಶುಭಂ ದ್ವಿವೇದಿ ಅವರ ಹೆಸರನ್ನು ಶ್ಯಾಮ್ನಗರದ ಉದ್ಯಾನ ಹಾಗೂ ಚೌಕವೊಂದಕ್ಕೆ ಇಡಲು ಕಾನ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ನಿರ್ಧರಿಸಿದೆ’ ಎಂದು ಪಾಂಡೆ ತಿಳಿಸಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಶನ್ಯಾ ಬಯಸಿದರೆ ಅವರಿಗೆ ಕಾನ್ಪುರ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಹೊರಗುತ್ತಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.</p>.ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿದ ಕರ್ನಾಟಕ ಮುಸ್ಲಿಂ ಮುತ್ತಹದ್ ಮಹಜ್ .<p>ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕೆಎಂಸಿ ಪ್ರಧಾನ ಕಚೇರಿಯಿಂದ ಮೋತಿಜೀಲ್ವರೆಗೆ ಮೇಯರ್, ಬಿಜೆಪಿ ಕೌನ್ಸಿಲರ್ಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು.</p><p>ಪ್ರತಿಭಟನಾಕಾರರು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.</p>.VIDEO | ಲಂಡನ್: ಭಾರತೀಯರನ್ನು ಉದ್ದೇಶಿಸಿ ಕತ್ತು ಸೀಳುತ್ತೇವೆ ಎಂದ ಪಾಕ್ ಅಧಿಕಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>