<p><strong>ನವದಹೆಲಿ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಿಸಲು ಕೇಂದ್ರ ಸರ್ಕಾರವು ನಾಳೆ (ಗುರುವಾರ) ಸರ್ವಪಕ್ಷ ಸಭೆ ಕರೆದಿದೆ.</p><p>ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಪ್ರಧಾನಿ ಮೋದಿ ನಾಳೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಹಾಜರಾಗುತ್ತಾರೆ ಎಂಬ ನಿರೀಕ್ಷೆಯಿದೆ. ಅವರು ಕಳೆದ ಸರ್ವಪಕ್ಷ ಸಭೆಯಲ್ಲಿ ಹಾಜರಾಗಲಿಲ್ಲ. ಪ್ರಧಾನಿ ಅವರ ಉಪಸ್ಥಿತಿಯನ್ನು ನಾವು ಬಯಸಿದ್ದೆವು. ನಮ್ಮೆಲ್ಲ ಲೋಕಸಭಾ ಹಾಗೂ ರಾಜ್ಯಸಭಾ ಸದ್ಯಸರೂ ನಾಳಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರವು ಸರ್ವ ಪಕ್ಷ ಸಭೆ ಕರೆದಿತ್ತು. ಆದರೆ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರಲಿಲ್ಲ. ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಸ್ವದೇಶಕ್ಕೆ ಮರಳಿದ್ದ ಪ್ರಧಾನಿ ಮೋದಿ ಸಭೆಯಲ್ಲಿ ಭಾಗವಹಿಸದೇ ಬಿಹಾರಕ್ಕೆ ತೆರಳಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು. </p>. <p>ಇಂದು (ಗುರುವಾರ) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿರುವ ಭಾರತೀಯ ಸಶಸ್ತ್ರ ಪಡೆಯ ಸಾಧನೆ ಬಗ್ಗೆ ಕಾಂಗ್ರೆಸ್ ಹೆಮ್ಮೆ ವ್ಯಕ್ತಪಡಿಸಿದೆ. </p><p>'ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹಾಗೂ ಸಶಸ್ತ್ರ ಪಡೆ ಕೈಗೊಳ್ಳುವ ಎಲ್ಲ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿತು. ಭಾರತೀಯ ಸಶಸ್ತ್ರ ಪಡೆಯ ಧೈರ್ಯ, ಅರ್ಪಣೆ ಹಾಗೂ ದೇಶಭಕ್ತಿಗೆ ಸೆಲ್ಯೂಟ್' ಎಂದು ಜೈರಾಮ್ ಹೇಳಿದ್ದಾರೆ. </p><p>'ಈ ಕ್ಷಣದಲ್ಲಿ ಏಕತೆ ಹಾಗೂ ಒಗಟ್ಟು ಅತ್ಯಂತ ಮಹತ್ವದ್ದಾಗಿದೆ. ಸಶಸ್ತ್ರ ಪಡೆಗೆ ಕಾಂಗ್ರೆಸ್ನ ಸಂಪೂರ್ಣ ಬೆಂಬಲವಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ' ಎಂದು ಹೇಳಿದ್ದಾರೆ. </p>.Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor: ಸೇನಾ ದಾಳಿಯಲ್ಲಿ ಮುರಿಡ್ಕೆ ಪ್ರಮುಖ ಗುರಿಯಾಗಿದ್ದು ಏಕೆ.?.Operation Sindoor: ಜೈಶ್ ಉಗ್ರ ಮಸೂದ್ ಕುಟುಂಬದ 10 ಮಂದಿ ಸೇರಿ 14 ಜನರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹೆಲಿ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಿಸಲು ಕೇಂದ್ರ ಸರ್ಕಾರವು ನಾಳೆ (ಗುರುವಾರ) ಸರ್ವಪಕ್ಷ ಸಭೆ ಕರೆದಿದೆ.</p><p>ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಪ್ರಧಾನಿ ಮೋದಿ ನಾಳೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಹಾಜರಾಗುತ್ತಾರೆ ಎಂಬ ನಿರೀಕ್ಷೆಯಿದೆ. ಅವರು ಕಳೆದ ಸರ್ವಪಕ್ಷ ಸಭೆಯಲ್ಲಿ ಹಾಜರಾಗಲಿಲ್ಲ. ಪ್ರಧಾನಿ ಅವರ ಉಪಸ್ಥಿತಿಯನ್ನು ನಾವು ಬಯಸಿದ್ದೆವು. ನಮ್ಮೆಲ್ಲ ಲೋಕಸಭಾ ಹಾಗೂ ರಾಜ್ಯಸಭಾ ಸದ್ಯಸರೂ ನಾಳಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರವು ಸರ್ವ ಪಕ್ಷ ಸಭೆ ಕರೆದಿತ್ತು. ಆದರೆ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರಲಿಲ್ಲ. ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಸ್ವದೇಶಕ್ಕೆ ಮರಳಿದ್ದ ಪ್ರಧಾನಿ ಮೋದಿ ಸಭೆಯಲ್ಲಿ ಭಾಗವಹಿಸದೇ ಬಿಹಾರಕ್ಕೆ ತೆರಳಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು. </p>. <p>ಇಂದು (ಗುರುವಾರ) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿರುವ ಭಾರತೀಯ ಸಶಸ್ತ್ರ ಪಡೆಯ ಸಾಧನೆ ಬಗ್ಗೆ ಕಾಂಗ್ರೆಸ್ ಹೆಮ್ಮೆ ವ್ಯಕ್ತಪಡಿಸಿದೆ. </p><p>'ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹಾಗೂ ಸಶಸ್ತ್ರ ಪಡೆ ಕೈಗೊಳ್ಳುವ ಎಲ್ಲ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿತು. ಭಾರತೀಯ ಸಶಸ್ತ್ರ ಪಡೆಯ ಧೈರ್ಯ, ಅರ್ಪಣೆ ಹಾಗೂ ದೇಶಭಕ್ತಿಗೆ ಸೆಲ್ಯೂಟ್' ಎಂದು ಜೈರಾಮ್ ಹೇಳಿದ್ದಾರೆ. </p><p>'ಈ ಕ್ಷಣದಲ್ಲಿ ಏಕತೆ ಹಾಗೂ ಒಗಟ್ಟು ಅತ್ಯಂತ ಮಹತ್ವದ್ದಾಗಿದೆ. ಸಶಸ್ತ್ರ ಪಡೆಗೆ ಕಾಂಗ್ರೆಸ್ನ ಸಂಪೂರ್ಣ ಬೆಂಬಲವಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ' ಎಂದು ಹೇಳಿದ್ದಾರೆ. </p>.Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor: ಸೇನಾ ದಾಳಿಯಲ್ಲಿ ಮುರಿಡ್ಕೆ ಪ್ರಮುಖ ಗುರಿಯಾಗಿದ್ದು ಏಕೆ.?.Operation Sindoor: ಜೈಶ್ ಉಗ್ರ ಮಸೂದ್ ಕುಟುಂಬದ 10 ಮಂದಿ ಸೇರಿ 14 ಜನರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>