<p><strong>ನವದೆಹಲಿ:</strong> ಭಯೋತ್ಪಾದಕರ ವಿರುದ್ಧದ ನಮ್ಮ ಹೋರಾಟವು ಅಚಲವಾಗಿದ್ದು ಭಾರತದ ವಿರುದ್ಧದ ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ ಎಂದು ಭಾರತದ ಸೇನೆ ತಿಳಿಸಿದೆ.</p><p>ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ(ಬುಧವಾರ) ಒಂದು ವರ್ಷ ಕಳೆದಿದೆ. ಈ ಕರಾಳ ದಿನವನ್ನು ನೆನಪಿಸಿಕೊಂಡಿರುವ ಭಾರತದ ಸೇನೆಯು, ಭಯೋತ್ಪಾದಕರ ವಿರುದ್ಧದ ನಮ್ಮ ಹೋರಾಟವು ಅಚಲ. ಭಾರತದ ವಿರುದ್ಧದ ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ’ ಎಂದು ‘ಎಕ್ಸ್’ನಲ್ಲಿ ಬುಧವಾರ ಪೋಸ್ಟ್ ಹಂಚಿಕೊಂಡಿದೆ.</p>.<p>ಭಾರತದ ವಿರುದ್ಧದ ಕ್ರಿಯೆಗೆ ನಮ್ಮ ಪ್ರತಿಕ್ರಿಯೆ ಶತಸಿದ್ಧವಾಗಿದೆ. ನ್ಯಾಯ ದೊರಕಿಸಿಕೊಡಲಾಗುವುದು ಎಂದು ಬರೆದುಕೊಂಡಿದೆ. ಈ ಪೋಸ್ಟ್ನೊಂದಿಗೆ #SindoorAnniversary #JusticeEndures #NationFirst ಎನ್ನುವ ಹ್ಯಾಶ್ಟ್ಯಾಗ್ಗಳನ್ನೂ ಬಳಸಲಾಗಿದೆ.</p><p>ಮಂಗಳವಾರ ಕೂಡ ಪೋಸ್ಟ್ ಹಂಚಿಕೊಂಡಿದ್ದ ಸೇನೆ, ‘ಯಾವಾಗ ಮಾನವೀಯತೆಯ ಗಡಿ ದಾಟಲಾಗುತ್ತದೆಯೊ ಆಗ ಪ್ರತಿಕ್ರಿಯೆ ನೀಡಲಾಗುತ್ತದೆ’ ಎಂದಿತ್ತು. ದಾಳಿ ನಡೆಸಿದ ಉಗ್ರರನ್ನು ಪತ್ತೆ ಮಾಡಲು ಭಾರತದ ಸೇನೆಯು ಆರಂಭಿಸಿದ್ದ ‘ಆಪರೇಷನ್ ಮಹಾದೇವ್’ ಕಾರ್ಯಾಚರಣೆಯನ್ನೂ ಪೋಸ್ಟ್ನಲ್ಲಿ ಸೇನೆ ನೆನಪಿಸಿಕೊಂಡಿದೆ.</p>.<p>2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯಾನಕ ಭಯೋತ್ಪಾದಕ ದಾಳಿ ನಡೆದಿತ್ತು. ಮುಗ್ಧ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. </p><p>ಭಯೋತ್ಪಾದಕರ ಈ ದಾಳಿಗೆ ಪ್ರತಿಯಾಗಿ ಭಾರತವು ಮೇ 7ಕ್ಕೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದ್ದ ಹಲವಾರು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಲಾಗಿತ್ತು.</p>.ಪಹಲ್ಗಾಮ್ ದಾಳಿ: ಮೃತ ಆದಿಲ್ ಕುಟುಂಬಕ್ಕೆ ಮನೆ ಕಟ್ಟಿಸಿಕೊಟ್ಟ ಮಹಾರಾಷ್ಟ್ರ DCM .ಪಹಲ್ಗಾಮ್ ದಾಳಿ ಬೆಂಬಲಿಸಿದವರ ವಿರುದ್ಧ ಏನು ಕ್ರಮ:ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದಕರ ವಿರುದ್ಧದ ನಮ್ಮ ಹೋರಾಟವು ಅಚಲವಾಗಿದ್ದು ಭಾರತದ ವಿರುದ್ಧದ ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ ಎಂದು ಭಾರತದ ಸೇನೆ ತಿಳಿಸಿದೆ.</p><p>ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ(ಬುಧವಾರ) ಒಂದು ವರ್ಷ ಕಳೆದಿದೆ. ಈ ಕರಾಳ ದಿನವನ್ನು ನೆನಪಿಸಿಕೊಂಡಿರುವ ಭಾರತದ ಸೇನೆಯು, ಭಯೋತ್ಪಾದಕರ ವಿರುದ್ಧದ ನಮ್ಮ ಹೋರಾಟವು ಅಚಲ. ಭಾರತದ ವಿರುದ್ಧದ ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ’ ಎಂದು ‘ಎಕ್ಸ್’ನಲ್ಲಿ ಬುಧವಾರ ಪೋಸ್ಟ್ ಹಂಚಿಕೊಂಡಿದೆ.</p>.<p>ಭಾರತದ ವಿರುದ್ಧದ ಕ್ರಿಯೆಗೆ ನಮ್ಮ ಪ್ರತಿಕ್ರಿಯೆ ಶತಸಿದ್ಧವಾಗಿದೆ. ನ್ಯಾಯ ದೊರಕಿಸಿಕೊಡಲಾಗುವುದು ಎಂದು ಬರೆದುಕೊಂಡಿದೆ. ಈ ಪೋಸ್ಟ್ನೊಂದಿಗೆ #SindoorAnniversary #JusticeEndures #NationFirst ಎನ್ನುವ ಹ್ಯಾಶ್ಟ್ಯಾಗ್ಗಳನ್ನೂ ಬಳಸಲಾಗಿದೆ.</p><p>ಮಂಗಳವಾರ ಕೂಡ ಪೋಸ್ಟ್ ಹಂಚಿಕೊಂಡಿದ್ದ ಸೇನೆ, ‘ಯಾವಾಗ ಮಾನವೀಯತೆಯ ಗಡಿ ದಾಟಲಾಗುತ್ತದೆಯೊ ಆಗ ಪ್ರತಿಕ್ರಿಯೆ ನೀಡಲಾಗುತ್ತದೆ’ ಎಂದಿತ್ತು. ದಾಳಿ ನಡೆಸಿದ ಉಗ್ರರನ್ನು ಪತ್ತೆ ಮಾಡಲು ಭಾರತದ ಸೇನೆಯು ಆರಂಭಿಸಿದ್ದ ‘ಆಪರೇಷನ್ ಮಹಾದೇವ್’ ಕಾರ್ಯಾಚರಣೆಯನ್ನೂ ಪೋಸ್ಟ್ನಲ್ಲಿ ಸೇನೆ ನೆನಪಿಸಿಕೊಂಡಿದೆ.</p>.<p>2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯಾನಕ ಭಯೋತ್ಪಾದಕ ದಾಳಿ ನಡೆದಿತ್ತು. ಮುಗ್ಧ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. </p><p>ಭಯೋತ್ಪಾದಕರ ಈ ದಾಳಿಗೆ ಪ್ರತಿಯಾಗಿ ಭಾರತವು ಮೇ 7ಕ್ಕೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದ್ದ ಹಲವಾರು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಲಾಗಿತ್ತು.</p>.ಪಹಲ್ಗಾಮ್ ದಾಳಿ: ಮೃತ ಆದಿಲ್ ಕುಟುಂಬಕ್ಕೆ ಮನೆ ಕಟ್ಟಿಸಿಕೊಟ್ಟ ಮಹಾರಾಷ್ಟ್ರ DCM .ಪಹಲ್ಗಾಮ್ ದಾಳಿ ಬೆಂಬಲಿಸಿದವರ ವಿರುದ್ಧ ಏನು ಕ್ರಮ:ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>