<p><strong>ನವದೆಹಲಿ</strong>: ಸಂಘರ್ಷದಲ್ಲಿ ಪಾಕಿಸ್ತಾನದ 35–40 ಸಿಬ್ಬಂದಿ ಹತರಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ.</p><p>ಕದನ ವಿರಾಮಕ್ಕೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹಲವು ಏಜೆನ್ಸಿಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ ಪಾಕಿಸ್ತಾನ ಸೇನೆಯ 35–40 ಯೋಧರು ಗಡಿ ನಿಯಂತ್ರಣ ರೇಖೆಯ ಬಳಿ ಹತ್ಯೆಯಾಗಿದ್ದಾರೆ. ಇನ್ನಷ್ಟು ಸಾವು ನೋವಿನ ಮಾಹಿತಿ ಕಲೆಹಾಕಲಾಗುತ್ತಿದೆ' ಎಂದು ಹೇಳಿದ್ದಾರೆ.</p><p>ಭಾರತಕ್ಕೆ ಜಯ ಲಭಿಸಿದೆ ಎಂಬು ಭಾವಿಸಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ' ಎಂದು ಪ್ರತಿಪಾದಿಸಿದ್ದಾರೆ.</p><p>ಭಾರತದ ಸಾರ್ವಭೌಮತೆಗೆ ಎದುರಾಗುವ ಯಾವುದೇ ಬೆದರಿಕೆಯನ್ನು ನಿರ್ಣಾಯಕ ಬಲದೊಂದಿಗೆ ಹಿಮ್ಮೆಟ್ಟಿಸಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p>.Indo-Pak Tension: ಭಾರತ– ಪಾಕ್ ಕದನ ವಿರಾಮ.ಕದನ ವಿರಾಮ ಘೋಷಣೆ | ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ: ಜೈಶಂಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಘರ್ಷದಲ್ಲಿ ಪಾಕಿಸ್ತಾನದ 35–40 ಸಿಬ್ಬಂದಿ ಹತರಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ.</p><p>ಕದನ ವಿರಾಮಕ್ಕೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹಲವು ಏಜೆನ್ಸಿಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ ಪಾಕಿಸ್ತಾನ ಸೇನೆಯ 35–40 ಯೋಧರು ಗಡಿ ನಿಯಂತ್ರಣ ರೇಖೆಯ ಬಳಿ ಹತ್ಯೆಯಾಗಿದ್ದಾರೆ. ಇನ್ನಷ್ಟು ಸಾವು ನೋವಿನ ಮಾಹಿತಿ ಕಲೆಹಾಕಲಾಗುತ್ತಿದೆ' ಎಂದು ಹೇಳಿದ್ದಾರೆ.</p><p>ಭಾರತಕ್ಕೆ ಜಯ ಲಭಿಸಿದೆ ಎಂಬು ಭಾವಿಸಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ' ಎಂದು ಪ್ರತಿಪಾದಿಸಿದ್ದಾರೆ.</p><p>ಭಾರತದ ಸಾರ್ವಭೌಮತೆಗೆ ಎದುರಾಗುವ ಯಾವುದೇ ಬೆದರಿಕೆಯನ್ನು ನಿರ್ಣಾಯಕ ಬಲದೊಂದಿಗೆ ಹಿಮ್ಮೆಟ್ಟಿಸಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p>.Indo-Pak Tension: ಭಾರತ– ಪಾಕ್ ಕದನ ವಿರಾಮ.ಕದನ ವಿರಾಮ ಘೋಷಣೆ | ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ: ಜೈಶಂಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>