<p><strong>ಬೆಂಗಳೂರು</strong>: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. </p><p>ಈ ನಡುವೆ ನಿವೃತ್ತ ಸೇನಾಧಿಕಾರಿ ಕೆಜೆಎಸ್ ಧಿಲ್ಲೋನ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಜನರಿಗೆ ಜಾಗೃತಿ ಸಂದೇಶ ರವಾನಿಸಿದ್ದಾರೆ.</p><p>'ನಿಮ್ಮ ಪಟ್ಟಣ ಅಥವಾ ನಗರದಲ್ಲಿ ಸೇನೆ, ವಾಯುಪಡೆ ಅಥವಾ ನೌಕಾಪಡೆ ಸೇರಿದಂತೆ ಭದ್ರತಾ ಪಡೆಗಳ ಚಲನೆ ಅಥವಾ ಸೇನಾ ವಾಹನಗಳ ಸಂಚಾರ ಕಂಡು ಬಂದರೆ ದಯವಿಟ್ಟು ಯಾವುದೇ ವಿಡಿಯೊ ಅಥವಾ ರೀಲ್ಗಳನ್ನು ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ.</p>.Operation Sindoor | ಪಾಕ್ ಶಸ್ತ್ರಾಸ್ತ್ರವನ್ನು ತ್ಯಜಿಸಲಿ; ಒಮರ್ ಅಬ್ದುಲ್ಲಾ .ಭಾರತ–ಪಾಕಿಸ್ತಾನ ಬಿಕ್ಕಟ್ಟು: 1947ರ ನಂತರ ನಡೆದ ಸಂಘರ್ಷಗಳ ವಿವರ ಇಲ್ಲಿದೆ.... <p>'ಭದ್ರತಾ ವಿಷಯಕ್ಕೆ ಸಂಬಂಧಿಸಿದ ಯಾವುದೇ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಡಿ. ಈ ರೀತಿ ನೀವು(ಜನರು) ಮಾಡಿದರೆ ಉದ್ದೇಶಪೂರ್ವಕವಾಗಿಯೇ ಶತ್ರುಗಳಿಗೆ ಸಹಾಯ ಮಾಡಿದಂತಾಗುತ್ತದೆ' ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಎರಡು ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇಂದು ದೇಶದ ವಿವಿಧೆಡೆ ಮಾಕ್ ಡ್ರಿಲ್ (ಸಾಮಾನ್ಯವಾಗಿ ಯುದ್ದ ಸನ್ನದ್ದತೆಯ ಭಾಗವಾಗಿ ನಾಗರಿಕ ಸ್ವರಕ್ಷಣೆ ತಾಲೀಮು<strong>) </strong>ನಡೆಸುವಂತೆ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ತಿಳಿಸಿದೆ.</p><p>ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆಯನ್ನು ನಡೆಸಿದೆ.</p>.Video | ಬಯಲು ಸೀಮೆ ತುಮಕೂರಿನಲ್ಲಿ ಏಲಕ್ಕಿ ಬೆಳೆಯ ಘಮ!.Operation Sindoor | ಪಾಕ್ ಮೇಲಿನ ದಾಳಿಗೆ ‘ಜೈ ಹಿಂದ್’ ಎಂದ ಭಾರತೀಯರು.ಆಪರೇಷನ್ ಸಿಂಧೂರ: ಕಾರ್ಯಾಚರಣೆಗೆ ಪ್ರಧಾನಿ ಮೋದಿ ನೀಡಿದ ಈ ಹೆಸರಿನ ಅರ್ಥವೇನು?.ನ್ಯಾಯ ದೊರಕಿತು: ಪಹಲ್ಗಾಮ್ನಲ್ಲಿ ಮೃತಪಟ್ಟವರ ಕುಟುಂಬದವರ ಪ್ರತಿಕ್ರಿಯೆ....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. </p><p>ಈ ನಡುವೆ ನಿವೃತ್ತ ಸೇನಾಧಿಕಾರಿ ಕೆಜೆಎಸ್ ಧಿಲ್ಲೋನ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಜನರಿಗೆ ಜಾಗೃತಿ ಸಂದೇಶ ರವಾನಿಸಿದ್ದಾರೆ.</p><p>'ನಿಮ್ಮ ಪಟ್ಟಣ ಅಥವಾ ನಗರದಲ್ಲಿ ಸೇನೆ, ವಾಯುಪಡೆ ಅಥವಾ ನೌಕಾಪಡೆ ಸೇರಿದಂತೆ ಭದ್ರತಾ ಪಡೆಗಳ ಚಲನೆ ಅಥವಾ ಸೇನಾ ವಾಹನಗಳ ಸಂಚಾರ ಕಂಡು ಬಂದರೆ ದಯವಿಟ್ಟು ಯಾವುದೇ ವಿಡಿಯೊ ಅಥವಾ ರೀಲ್ಗಳನ್ನು ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ.</p>.Operation Sindoor | ಪಾಕ್ ಶಸ್ತ್ರಾಸ್ತ್ರವನ್ನು ತ್ಯಜಿಸಲಿ; ಒಮರ್ ಅಬ್ದುಲ್ಲಾ .ಭಾರತ–ಪಾಕಿಸ್ತಾನ ಬಿಕ್ಕಟ್ಟು: 1947ರ ನಂತರ ನಡೆದ ಸಂಘರ್ಷಗಳ ವಿವರ ಇಲ್ಲಿದೆ.... <p>'ಭದ್ರತಾ ವಿಷಯಕ್ಕೆ ಸಂಬಂಧಿಸಿದ ಯಾವುದೇ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಡಿ. ಈ ರೀತಿ ನೀವು(ಜನರು) ಮಾಡಿದರೆ ಉದ್ದೇಶಪೂರ್ವಕವಾಗಿಯೇ ಶತ್ರುಗಳಿಗೆ ಸಹಾಯ ಮಾಡಿದಂತಾಗುತ್ತದೆ' ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಎರಡು ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇಂದು ದೇಶದ ವಿವಿಧೆಡೆ ಮಾಕ್ ಡ್ರಿಲ್ (ಸಾಮಾನ್ಯವಾಗಿ ಯುದ್ದ ಸನ್ನದ್ದತೆಯ ಭಾಗವಾಗಿ ನಾಗರಿಕ ಸ್ವರಕ್ಷಣೆ ತಾಲೀಮು<strong>) </strong>ನಡೆಸುವಂತೆ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ತಿಳಿಸಿದೆ.</p><p>ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆಯನ್ನು ನಡೆಸಿದೆ.</p>.Video | ಬಯಲು ಸೀಮೆ ತುಮಕೂರಿನಲ್ಲಿ ಏಲಕ್ಕಿ ಬೆಳೆಯ ಘಮ!.Operation Sindoor | ಪಾಕ್ ಮೇಲಿನ ದಾಳಿಗೆ ‘ಜೈ ಹಿಂದ್’ ಎಂದ ಭಾರತೀಯರು.ಆಪರೇಷನ್ ಸಿಂಧೂರ: ಕಾರ್ಯಾಚರಣೆಗೆ ಪ್ರಧಾನಿ ಮೋದಿ ನೀಡಿದ ಈ ಹೆಸರಿನ ಅರ್ಥವೇನು?.ನ್ಯಾಯ ದೊರಕಿತು: ಪಹಲ್ಗಾಮ್ನಲ್ಲಿ ಮೃತಪಟ್ಟವರ ಕುಟುಂಬದವರ ಪ್ರತಿಕ್ರಿಯೆ....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>