<p><strong>ನವದೆಹಲಿ:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ನಡೆಸಿದ ಕ್ಷಿಪಣಿ ದಾಳಿಯನ್ನು ಇಸ್ರೇಲ್ ಬೆಂಬಲಿಸಿದೆ.</p><p>ಈ ಕುರಿತು ಎಕ್ಸ್/ ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೇನ್ ಅಜರ್, ‘ಮುಗ್ದರ ಮೇಲೆ ಹೀನ ಕೃತ್ಯ ಎಸಗಿದವರಿಗೆ ಅಡಗಿಕೊಳ್ಳಲು ಎಲ್ಲಿಯೂ ಜಾಗವಿಲ್ಲ ಎಂಬುದನ್ನು ಭಯೋತ್ಪಾದಕರು ಗಮದಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದ್ದಾರೆ.</p><p>‘ಭಯೋತ್ಪಾದಕರ ನಿಗ್ರಹಕ್ಕೆ ಭಾರತ ಕೈಗೊಂಡಿರುವ ಆತ್ಮರಕ್ಷಣೆಯ ಕ್ರಮವನ್ನು ಇಸ್ರೇಲ್ ಬೆಂಬಲಿಸುತ್ತದೆ’ ಎಂದು ಹೇಳಿದ್ದಾರೆ.</p>.<p>ʼಆಪರೇಷನ್ ಸಿಂಧೂರ’ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ, ‘ಇದನ್ನು ಬೇಗ ಮುಗಿಸುತ್ತೀರೆಂಬ ಭಾವನೆ ಇದೆ’ ಎಂಬ ಹೇಳಿಕೆಯನ್ನು ಸುದ್ದಿಸಂಸ್ಥೆ ಪಿಟಿಐ ಪೋಸ್ಟ್ ಹಂಚಿಕೊಂಡಿದೆ.</p><p>ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಲಷ್ಕರ್-ಎ-ತಯಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗಳಿಗೆ ಸೇರಿದ 9 ನೆಲೆಗಳ ಮೇಲೆ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆ ನಡೆಸಿದೆ. ಈ ದಾಳಿಯ ಮಾಹಿತಿಯನ್ನು ಐದು ದೇಶಗಳೊಂದಿಗೆ ಭಾರತ ಹಂಚಿಕೊಂಡಿದೆ.</p><p>ಅಮೆರಿಕ, ಬ್ರಿಟನ್, ಸೌದಿ ಅರೇಬಿಯಾ, ಸಂಯುಕ್ತ ಅರಬ್ ಸಂಸ್ಥಾನ ಮತ್ತು ರಷ್ಯಾದೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಭಾರತದ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಆದಾಗ್ಯೂ ಚೀನಾದೊಂದಿಗೆ ದಾಳಿಯ ಮಾಹಿತಿ ಹಂಚಿಕೊಂಡಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. </p><p>ಈ ಕಾರ್ಯಾಚರಣೆಯನ್ನು ಬುಧವಾರ ಬೆಳಗಿನ ಜಾವ 1.05ರಿಂದ 1.30ರವರೆಗೆ ನಡೆಸಲಾಯಿತು. ಪಹಲ್ಗಾಮ್ನಲ್ಲಿ ಮೃತಪಟ್ಟ ಪ್ರವಾಸಿಗರಿಗಾಗಿ ಕಾರ್ಯಾಚರಣೆ ನಡೆಸಲಾಯಿತು.</p><p>ನಾವು ಯಾವುದೇ ನಾಗರಿಕರ ಮೇಲಾಗಲಿ ಅಥವಾ ಪಾಕ್ ಮಿಲಿಟರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ. ಕೇವಲ ಉಗ್ರರ ನೆಲೆಗಳನ್ನು ಮಾತ್ರ ಧ್ವಂಸಗೊಳಿಸಿದ್ದೇವೆ. ನಾಗರಿಕರಿಗೆ ಹಾನಿ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಆರ್ಥಿಕ ನಷ್ಟ ಮಾಡುವುದು ನಮ್ಮ ಉದ್ದೇಶವಲ್ಲ. ಉಗ್ರರ ನೆಲೆಗಳನ್ನು ಧ್ವಂಸ ಮಾಡುವುದೇ ಈ ಕಾರ್ಯಾಚರಣೆಯ ಉದ್ದೇಶ ಎಂದು ಮಾಹಿತಿ ಹಂಚಿಕೊಂಡಿರುವ ದೇಶಗಳಿಗೆ ವಿವರಿಸಲಾಗಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p><p>ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೆಇಎಂ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಎಲ್ಇಟಿ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿರುವುದನ್ನು ಭದ್ರತಾ ಪಡೆಗಳು ಖಚಿತಪಡಿಸಿವೆ.</p>.PHOTOS| Operation Sindoor: ಭಾರತೀಯ ಸಶಸ್ತ್ರ ಪಡೆ ದಾಳಿ; ಉಗ್ರರ 9 ನೆಲೆ ಧ್ವಂಸ.Operation Sindoor: ಜೈಶ್ ಉಗ್ರ ಮಸೂದ್ ಕುಟುಂಬದ 10 ಮಂದಿ ಸೇರಿ 14 ಜನರ ಸಾವು.Operation Sindoor: ಸೇನಾ ದಾಳಿಯಲ್ಲಿ ಮುರಿಡ್ಕೆ ಪ್ರಮುಖ ಗುರಿಯಾಗಿದ್ದು ಏಕೆ.?.Pahalgam Attack | ಮಾಸ್ಟರ್ಮೈಂಡ್ ಸಜಾದ್ ಗುಲ್; ಬೆಂಗಳೂರಿಗೇಕೆ ಬಂದಿದ್ದ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ನಡೆಸಿದ ಕ್ಷಿಪಣಿ ದಾಳಿಯನ್ನು ಇಸ್ರೇಲ್ ಬೆಂಬಲಿಸಿದೆ.</p><p>ಈ ಕುರಿತು ಎಕ್ಸ್/ ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೇನ್ ಅಜರ್, ‘ಮುಗ್ದರ ಮೇಲೆ ಹೀನ ಕೃತ್ಯ ಎಸಗಿದವರಿಗೆ ಅಡಗಿಕೊಳ್ಳಲು ಎಲ್ಲಿಯೂ ಜಾಗವಿಲ್ಲ ಎಂಬುದನ್ನು ಭಯೋತ್ಪಾದಕರು ಗಮದಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದ್ದಾರೆ.</p><p>‘ಭಯೋತ್ಪಾದಕರ ನಿಗ್ರಹಕ್ಕೆ ಭಾರತ ಕೈಗೊಂಡಿರುವ ಆತ್ಮರಕ್ಷಣೆಯ ಕ್ರಮವನ್ನು ಇಸ್ರೇಲ್ ಬೆಂಬಲಿಸುತ್ತದೆ’ ಎಂದು ಹೇಳಿದ್ದಾರೆ.</p>.<p>ʼಆಪರೇಷನ್ ಸಿಂಧೂರ’ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ, ‘ಇದನ್ನು ಬೇಗ ಮುಗಿಸುತ್ತೀರೆಂಬ ಭಾವನೆ ಇದೆ’ ಎಂಬ ಹೇಳಿಕೆಯನ್ನು ಸುದ್ದಿಸಂಸ್ಥೆ ಪಿಟಿಐ ಪೋಸ್ಟ್ ಹಂಚಿಕೊಂಡಿದೆ.</p><p>ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಲಷ್ಕರ್-ಎ-ತಯಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗಳಿಗೆ ಸೇರಿದ 9 ನೆಲೆಗಳ ಮೇಲೆ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆ ನಡೆಸಿದೆ. ಈ ದಾಳಿಯ ಮಾಹಿತಿಯನ್ನು ಐದು ದೇಶಗಳೊಂದಿಗೆ ಭಾರತ ಹಂಚಿಕೊಂಡಿದೆ.</p><p>ಅಮೆರಿಕ, ಬ್ರಿಟನ್, ಸೌದಿ ಅರೇಬಿಯಾ, ಸಂಯುಕ್ತ ಅರಬ್ ಸಂಸ್ಥಾನ ಮತ್ತು ರಷ್ಯಾದೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಭಾರತದ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಆದಾಗ್ಯೂ ಚೀನಾದೊಂದಿಗೆ ದಾಳಿಯ ಮಾಹಿತಿ ಹಂಚಿಕೊಂಡಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. </p><p>ಈ ಕಾರ್ಯಾಚರಣೆಯನ್ನು ಬುಧವಾರ ಬೆಳಗಿನ ಜಾವ 1.05ರಿಂದ 1.30ರವರೆಗೆ ನಡೆಸಲಾಯಿತು. ಪಹಲ್ಗಾಮ್ನಲ್ಲಿ ಮೃತಪಟ್ಟ ಪ್ರವಾಸಿಗರಿಗಾಗಿ ಕಾರ್ಯಾಚರಣೆ ನಡೆಸಲಾಯಿತು.</p><p>ನಾವು ಯಾವುದೇ ನಾಗರಿಕರ ಮೇಲಾಗಲಿ ಅಥವಾ ಪಾಕ್ ಮಿಲಿಟರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ. ಕೇವಲ ಉಗ್ರರ ನೆಲೆಗಳನ್ನು ಮಾತ್ರ ಧ್ವಂಸಗೊಳಿಸಿದ್ದೇವೆ. ನಾಗರಿಕರಿಗೆ ಹಾನಿ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಆರ್ಥಿಕ ನಷ್ಟ ಮಾಡುವುದು ನಮ್ಮ ಉದ್ದೇಶವಲ್ಲ. ಉಗ್ರರ ನೆಲೆಗಳನ್ನು ಧ್ವಂಸ ಮಾಡುವುದೇ ಈ ಕಾರ್ಯಾಚರಣೆಯ ಉದ್ದೇಶ ಎಂದು ಮಾಹಿತಿ ಹಂಚಿಕೊಂಡಿರುವ ದೇಶಗಳಿಗೆ ವಿವರಿಸಲಾಗಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p><p>ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೆಇಎಂ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಎಲ್ಇಟಿ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿರುವುದನ್ನು ಭದ್ರತಾ ಪಡೆಗಳು ಖಚಿತಪಡಿಸಿವೆ.</p>.PHOTOS| Operation Sindoor: ಭಾರತೀಯ ಸಶಸ್ತ್ರ ಪಡೆ ದಾಳಿ; ಉಗ್ರರ 9 ನೆಲೆ ಧ್ವಂಸ.Operation Sindoor: ಜೈಶ್ ಉಗ್ರ ಮಸೂದ್ ಕುಟುಂಬದ 10 ಮಂದಿ ಸೇರಿ 14 ಜನರ ಸಾವು.Operation Sindoor: ಸೇನಾ ದಾಳಿಯಲ್ಲಿ ಮುರಿಡ್ಕೆ ಪ್ರಮುಖ ಗುರಿಯಾಗಿದ್ದು ಏಕೆ.?.Pahalgam Attack | ಮಾಸ್ಟರ್ಮೈಂಡ್ ಸಜಾದ್ ಗುಲ್; ಬೆಂಗಳೂರಿಗೇಕೆ ಬಂದಿದ್ದ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>