<p><strong>ಜಮ್ಮು, ಶ್ರೀನಗರ:</strong> ಜಮ್ಮು ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಸ್ಫೋಟದ ಶಬ್ದ ಕೇಳಿಸಿದ್ದು, ತಕ್ಷಣ ಸೈರನ್ ಮೊಳಗಿತು. ವಿದ್ಯುತ್ ಸಂಪರ್ಕವನ್ನು ತಕ್ಷಣ ಕಡಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶ್ರೀನಗರದಲ್ಲಿ ಜನರಿಗೆ ಎಚ್ಚರಿಕೆಯ ಸಂದೇಶ ನೀಡಲು ಮಸೀದಿಯ ಮೈಕ್ಗಳನ್ನು ಬಳಸಿ ಮನೆಯ ವಿದ್ಯುತ್ ದೀಪಗಳನ್ನು ಆರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದರು.</p><p>ಏ. 22ರಂದು ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ‘ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.</p><p>‘ದೊಡ್ಡ ಪ್ರಮಾಣದ ಕ್ಷಿಪಣಿ ಬಳಸಿರುವ ಸಾಧ್ಯತೆ ಇದೆ. ನಾನಿರುವ ಸ್ಥಳದ ಬಳಿಯೇ ಶಬ್ದ ಹೊರಹೊಮ್ಮಿದ್ದನ್ನು ಕೇಳಬಹುದು’ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಎಕ್ಸ್ನಲ್ಲಿ ವಿಷಯ ಹಂಚಿಕೊಂಡಿದ್ದಾರೆ. ಜತೆಗೆ ಇಡೀ ನಗರ ಕತ್ತಲಾಗಿರುವ ಚಿತ್ರವನ್ನೂ ಹಂಚಿಕೊಂಡಿದ್ದಾರೆ. </p><p>‘ಜಮ್ಮು ನಗರದ ಜನರು ಯಾರೂ ಹೊರಹೋಗಬಾರದು. ಮುಂದಿನ ಕೆಲ ಗಂಟೆಗಳವರೆಗೆ ಮನೆಯಲ್ಲೇ ಇರಿ ಅಥವಾ ನಿಮ್ಮ ಹತ್ತಿರದ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ. ವದಂತಿಗಳಿಗೆ ಕಿವಿಗೊಡಬೇಡಿ ಮತ್ತು ಹರಡಬೇಡಿ. ಎಲ್ಲರೂ ಒಗ್ಗಟ್ಟಿನಿಂದ ಇರೋಣ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು, ಶ್ರೀನಗರ:</strong> ಜಮ್ಮು ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಸ್ಫೋಟದ ಶಬ್ದ ಕೇಳಿಸಿದ್ದು, ತಕ್ಷಣ ಸೈರನ್ ಮೊಳಗಿತು. ವಿದ್ಯುತ್ ಸಂಪರ್ಕವನ್ನು ತಕ್ಷಣ ಕಡಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶ್ರೀನಗರದಲ್ಲಿ ಜನರಿಗೆ ಎಚ್ಚರಿಕೆಯ ಸಂದೇಶ ನೀಡಲು ಮಸೀದಿಯ ಮೈಕ್ಗಳನ್ನು ಬಳಸಿ ಮನೆಯ ವಿದ್ಯುತ್ ದೀಪಗಳನ್ನು ಆರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದರು.</p><p>ಏ. 22ರಂದು ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ‘ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.</p><p>‘ದೊಡ್ಡ ಪ್ರಮಾಣದ ಕ್ಷಿಪಣಿ ಬಳಸಿರುವ ಸಾಧ್ಯತೆ ಇದೆ. ನಾನಿರುವ ಸ್ಥಳದ ಬಳಿಯೇ ಶಬ್ದ ಹೊರಹೊಮ್ಮಿದ್ದನ್ನು ಕೇಳಬಹುದು’ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಎಕ್ಸ್ನಲ್ಲಿ ವಿಷಯ ಹಂಚಿಕೊಂಡಿದ್ದಾರೆ. ಜತೆಗೆ ಇಡೀ ನಗರ ಕತ್ತಲಾಗಿರುವ ಚಿತ್ರವನ್ನೂ ಹಂಚಿಕೊಂಡಿದ್ದಾರೆ. </p><p>‘ಜಮ್ಮು ನಗರದ ಜನರು ಯಾರೂ ಹೊರಹೋಗಬಾರದು. ಮುಂದಿನ ಕೆಲ ಗಂಟೆಗಳವರೆಗೆ ಮನೆಯಲ್ಲೇ ಇರಿ ಅಥವಾ ನಿಮ್ಮ ಹತ್ತಿರದ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ. ವದಂತಿಗಳಿಗೆ ಕಿವಿಗೊಡಬೇಡಿ ಮತ್ತು ಹರಡಬೇಡಿ. ಎಲ್ಲರೂ ಒಗ್ಗಟ್ಟಿನಿಂದ ಇರೋಣ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>