<p><strong>ನವದೆಹಲಿ:</strong> ಭಾರತದ ಪ್ರವಾಸದಲ್ಲಿರುವ ಜಪಾನ್ನ ರಕ್ಷಣಾ ಸಚಿವ ಜನರಲ್ ನಕಾಟಾನಿ ಅವರನ್ನು ಭೇಟಿಯಾಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್, ಭಯೋತ್ಪಾದನೆ, ಇಂಡೋ-ಫೆಸಿಫಿಕ್ನಲ್ಲಿ ಚೀನಾ ಮಿಲಿಟರಿ ನಿಲುವು ಸೇರಿದಂತೆ ದ್ವಿಪಕ್ಷೀಯ ರಕ್ಷಣಾ ಬಾಂಧವ್ಯ ವಿಸ್ತರಿಸುವ ಸಂಬಂಧ ಮಾತುಕತೆ ನಡೆಸಿದ್ದಾರೆ. </p><p>ಈ ಸಂದರ್ಭದಲ್ಲಿ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಜಪಾನ್ನ ರಕ್ಷಣಾ ಸಚಿವರು ಖಂಡಿಸಿದ್ದು, ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. </p><p>ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟನ್ನು ಪ್ರದರ್ಶಿಸಿರುವ ಅವರು, ಭಾರತಕ್ಕೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. </p><p>ಭಾರತಕ್ಕೆ ಜಪಾನ್ ನೀಡಿರುವ ಬೆಂಬಲಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. </p><p>'ಜಪಾನ್ ದೇಶದೊಂದಿಗೆ ಭಾರತವು ವಿಶೇಷ, ಕಾರ್ಯತಂತ್ರದ ಹಾಗೂ ಜಾಗತಿಕ ಪಾಲುದಾರಿಕೆಯನ್ನು ಹೊಂದಿದೆ. ದ್ವಿಪಕ್ಷೀಯ ಮಾತುಕತೆಯಲ್ಲಿ ನಾವು ರಕ್ಷಣಾ ಸಹಕಾರ ಮತ್ತು ಪ್ರಾದೇಶಿಕ ಭದ್ರತೆಯ ಕುರಿತು ಚರ್ಚಿಸಿದ್ದೇವೆ' ಎಂದು ರಾಜನಾಥ ಸಿಂಗ್ ಹೇಳಿದ್ದಾರೆ. </p><p>ಭಯೋತ್ಪಾದನೆಯನ್ನು ಉಭಯ ದೇಶಗಳು ಖಂಡಿಸುತ್ತಿವೆ. ಗಡಿಯಾಚೆಗಿನ ಬೆದರಿಕೆಗಳನ್ನು ಎದುರಿಸಲು ವಿಸ್ತೃತ ಸಹಯೋಗ ಹಾಗೂ ಜಂಟಿ ಪ್ರಯತ್ನದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. </p><p>ರಕ್ಷಣಾ ಕೈಗಾರಿಕಾ ಸಹಕಾರವನ್ನು ಉತ್ತೇಜಿಸುವ ನಿಟ್ಟಿನಲ್ಲೂ ಉಭಯ ದೇಶಗಳ ನಾಯಕರ ಮಧ್ಯೆ ಮಾತುಕತೆ ನಡೆದಿದೆ ಎನ್ನಲಾಗಿದೆ. </p> .ಮೋದಿ ಜೊತೆ ಪುಟಿನ್ ಚರ್ಚೆ; ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ.ಅಣ್ವಸ್ತ್ರದಿಂದ ತಿರುಗೇಟು ಕೊಡುತ್ತೇವೆ: ಭಾರತಕ್ಕೆ ಪಾಕಿಸ್ತಾನ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದ ಪ್ರವಾಸದಲ್ಲಿರುವ ಜಪಾನ್ನ ರಕ್ಷಣಾ ಸಚಿವ ಜನರಲ್ ನಕಾಟಾನಿ ಅವರನ್ನು ಭೇಟಿಯಾಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್, ಭಯೋತ್ಪಾದನೆ, ಇಂಡೋ-ಫೆಸಿಫಿಕ್ನಲ್ಲಿ ಚೀನಾ ಮಿಲಿಟರಿ ನಿಲುವು ಸೇರಿದಂತೆ ದ್ವಿಪಕ್ಷೀಯ ರಕ್ಷಣಾ ಬಾಂಧವ್ಯ ವಿಸ್ತರಿಸುವ ಸಂಬಂಧ ಮಾತುಕತೆ ನಡೆಸಿದ್ದಾರೆ. </p><p>ಈ ಸಂದರ್ಭದಲ್ಲಿ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಜಪಾನ್ನ ರಕ್ಷಣಾ ಸಚಿವರು ಖಂಡಿಸಿದ್ದು, ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. </p><p>ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟನ್ನು ಪ್ರದರ್ಶಿಸಿರುವ ಅವರು, ಭಾರತಕ್ಕೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. </p><p>ಭಾರತಕ್ಕೆ ಜಪಾನ್ ನೀಡಿರುವ ಬೆಂಬಲಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. </p><p>'ಜಪಾನ್ ದೇಶದೊಂದಿಗೆ ಭಾರತವು ವಿಶೇಷ, ಕಾರ್ಯತಂತ್ರದ ಹಾಗೂ ಜಾಗತಿಕ ಪಾಲುದಾರಿಕೆಯನ್ನು ಹೊಂದಿದೆ. ದ್ವಿಪಕ್ಷೀಯ ಮಾತುಕತೆಯಲ್ಲಿ ನಾವು ರಕ್ಷಣಾ ಸಹಕಾರ ಮತ್ತು ಪ್ರಾದೇಶಿಕ ಭದ್ರತೆಯ ಕುರಿತು ಚರ್ಚಿಸಿದ್ದೇವೆ' ಎಂದು ರಾಜನಾಥ ಸಿಂಗ್ ಹೇಳಿದ್ದಾರೆ. </p><p>ಭಯೋತ್ಪಾದನೆಯನ್ನು ಉಭಯ ದೇಶಗಳು ಖಂಡಿಸುತ್ತಿವೆ. ಗಡಿಯಾಚೆಗಿನ ಬೆದರಿಕೆಗಳನ್ನು ಎದುರಿಸಲು ವಿಸ್ತೃತ ಸಹಯೋಗ ಹಾಗೂ ಜಂಟಿ ಪ್ರಯತ್ನದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. </p><p>ರಕ್ಷಣಾ ಕೈಗಾರಿಕಾ ಸಹಕಾರವನ್ನು ಉತ್ತೇಜಿಸುವ ನಿಟ್ಟಿನಲ್ಲೂ ಉಭಯ ದೇಶಗಳ ನಾಯಕರ ಮಧ್ಯೆ ಮಾತುಕತೆ ನಡೆದಿದೆ ಎನ್ನಲಾಗಿದೆ. </p> .ಮೋದಿ ಜೊತೆ ಪುಟಿನ್ ಚರ್ಚೆ; ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ.ಅಣ್ವಸ್ತ್ರದಿಂದ ತಿರುಗೇಟು ಕೊಡುತ್ತೇವೆ: ಭಾರತಕ್ಕೆ ಪಾಕಿಸ್ತಾನ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>