<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಕಣಿವೆ ರಾಜ್ಯದಲ್ಲಿ 48 ಪ್ರವಾಸಿ ತಾಣಗಳನ್ನು ಮಚ್ಚಲಾಗಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ. </p><p>ಭದ್ರತಾ ಭೀತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಹಿತದೃಷ್ಟಿಯಿಂದ ಕಾಶ್ಮೀರದಲ್ಲಿರುವ 87 ಸಾರ್ವಜನಿಕ ಉದ್ಯಾನವನಗಳ ಪೈಕಿ 48 ಅನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಕಳೆದ 10 ವರ್ಷಗಳಲ್ಲಿ ಹೊಸದಾಗಿ ತೆರೆಯಲಾದ ತಾಣಗಳು ಇದರಲ್ಲಿ ಸೇರಿವೆ ಎಂದು ಅವರು ತಿಳಿಸಿದ್ದಾರೆ. </p><p>ಭದ್ರತಾ ಪರಿಶೀಲಿನೆ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಈ ಪಟ್ಟಿಗೆ ಮತ್ತಷ್ಟು ಪ್ರದೇಶಗಳು ಒಳಪಡುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.</p><p>ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾದ ಪ್ರದೇಶಗಳಲ್ಲಿ ಧೂದ್ಪಥರಿ, ಕೊಕರ್ನಾಗ್, ದಕ್ಸುಮ್, ಸಿಂಥನ್ ಟಾಪ್, ಅಛಬಲ್, ಬಂಗಸ್ ವ್ಯಾಲಿ, ಮಾರ್ಗನ್ ಟಾಪ್ ಮತ್ತು ತೋಸಾಮೈದಾನ್ ಸೇರಿವೆ. ಈ ಕುರಿತು ಅಧಿಕೃತ ಆದೇಶ ಹೊರಡಿಸದಿದ್ದರೂ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. </p><p>ದಕ್ಷಿಣ ಕಾಶ್ಮೀರದಲ್ಲಿರುವ ಹಲವಾರು ಮೊಘಲ್ ಉದ್ಯಾನಗಳ ಬಾಗಿಲುಗಳನ್ನು ಮುಚ್ಚಲಾಗಿದೆ. </p>.ಗಡಿಯಲ್ಲಿ ಸತತ 5ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.ವಿಶ್ವಸಂಸ್ಥೆ: ಭಯೋತ್ಪಾದನೆಗೆ ಹಾಲೆರೆಯುವ ಪುಂಡ ದೇಶ: ಪಾಕ್ ವಿರುದ್ಧ ಭಾರತ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಕಣಿವೆ ರಾಜ್ಯದಲ್ಲಿ 48 ಪ್ರವಾಸಿ ತಾಣಗಳನ್ನು ಮಚ್ಚಲಾಗಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ. </p><p>ಭದ್ರತಾ ಭೀತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಹಿತದೃಷ್ಟಿಯಿಂದ ಕಾಶ್ಮೀರದಲ್ಲಿರುವ 87 ಸಾರ್ವಜನಿಕ ಉದ್ಯಾನವನಗಳ ಪೈಕಿ 48 ಅನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಕಳೆದ 10 ವರ್ಷಗಳಲ್ಲಿ ಹೊಸದಾಗಿ ತೆರೆಯಲಾದ ತಾಣಗಳು ಇದರಲ್ಲಿ ಸೇರಿವೆ ಎಂದು ಅವರು ತಿಳಿಸಿದ್ದಾರೆ. </p><p>ಭದ್ರತಾ ಪರಿಶೀಲಿನೆ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಈ ಪಟ್ಟಿಗೆ ಮತ್ತಷ್ಟು ಪ್ರದೇಶಗಳು ಒಳಪಡುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.</p><p>ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾದ ಪ್ರದೇಶಗಳಲ್ಲಿ ಧೂದ್ಪಥರಿ, ಕೊಕರ್ನಾಗ್, ದಕ್ಸುಮ್, ಸಿಂಥನ್ ಟಾಪ್, ಅಛಬಲ್, ಬಂಗಸ್ ವ್ಯಾಲಿ, ಮಾರ್ಗನ್ ಟಾಪ್ ಮತ್ತು ತೋಸಾಮೈದಾನ್ ಸೇರಿವೆ. ಈ ಕುರಿತು ಅಧಿಕೃತ ಆದೇಶ ಹೊರಡಿಸದಿದ್ದರೂ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. </p><p>ದಕ್ಷಿಣ ಕಾಶ್ಮೀರದಲ್ಲಿರುವ ಹಲವಾರು ಮೊಘಲ್ ಉದ್ಯಾನಗಳ ಬಾಗಿಲುಗಳನ್ನು ಮುಚ್ಚಲಾಗಿದೆ. </p>.ಗಡಿಯಲ್ಲಿ ಸತತ 5ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.ವಿಶ್ವಸಂಸ್ಥೆ: ಭಯೋತ್ಪಾದನೆಗೆ ಹಾಲೆರೆಯುವ ಪುಂಡ ದೇಶ: ಪಾಕ್ ವಿರುದ್ಧ ಭಾರತ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>