<p><strong>ಪುಲ್ವಾಮಾ:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಮೂವರು ಶಂಕಿತ ಉಗ್ರರ ಪತ್ತೆಗೆ ಅವರ ಫೋಟೊಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಮಾಹಿತಿ ಕೊಟ್ಟವರಿಗೆ ₹20 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. </p><p>ಏ.22ರಂದು ಪಹಲ್ಗಾಮ್ನಲ್ಲಿ 26 ಜನ ಅಮಾಯಕರನ್ನು ಭೀಕರವಾಗಿ ಹತ್ಯೆ ಮಾಡಿದ್ದರು. </p><p>ಅಲ್ಲಲ್ಲಿ ಪೋಸ್ಟರ್ ಅಂಟಿಸಿರುವ ಪೊಲೀಸರು ‘ಭಯೋತ್ಪಾದಕ ಮುಕ್ತ ಜಮ್ಮುಕಾಶ್ಮೀರ’ ಎಂದು ಬರೆದಿದ್ದಾರೆ ಎಂದು ಇಂಡಿಯಾ ಟುಡೆ ವರದಿ ತಿಳಿಸಿದೆ. ಅಲ್ಲದೆ ಶಂಕಿತರ ಬಗ್ಗೆ ಮಾಹಿತಿ ನೀಡಿದವರ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು ಎಂದೂ ಪೊಲೀಸರು ಹೇಳಿದ್ದಾರೆ.</p><p>ಪಹಲ್ಗಾಮ್ನಿಂದ ಆರು ಕಿ.ಮೀ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿದ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದರು. ಕುಟುಂಬದವರ ಎದುರೇ 26 ಜನರನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದರು.</p><p>ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ 9 ಉಗ್ರರ ನೆಲೆಗಳನ್ನು ನಾಶಗೊಳಿಸಿದೆ.</p>.ಪಹಲ್ಗಾಮ್ ದಾಳಿ | ಉಗ್ರರು ಏನಾದ್ರು?: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ.ಪಹಲ್ಗಾಮ್ ದಾಳಿ: ಚಿತ್ರ, ವಿಡಿಯೊ ಹಂಚಿಕೊಳ್ಳಿ–ಎನ್ಐಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಲ್ವಾಮಾ:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಮೂವರು ಶಂಕಿತ ಉಗ್ರರ ಪತ್ತೆಗೆ ಅವರ ಫೋಟೊಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಮಾಹಿತಿ ಕೊಟ್ಟವರಿಗೆ ₹20 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. </p><p>ಏ.22ರಂದು ಪಹಲ್ಗಾಮ್ನಲ್ಲಿ 26 ಜನ ಅಮಾಯಕರನ್ನು ಭೀಕರವಾಗಿ ಹತ್ಯೆ ಮಾಡಿದ್ದರು. </p><p>ಅಲ್ಲಲ್ಲಿ ಪೋಸ್ಟರ್ ಅಂಟಿಸಿರುವ ಪೊಲೀಸರು ‘ಭಯೋತ್ಪಾದಕ ಮುಕ್ತ ಜಮ್ಮುಕಾಶ್ಮೀರ’ ಎಂದು ಬರೆದಿದ್ದಾರೆ ಎಂದು ಇಂಡಿಯಾ ಟುಡೆ ವರದಿ ತಿಳಿಸಿದೆ. ಅಲ್ಲದೆ ಶಂಕಿತರ ಬಗ್ಗೆ ಮಾಹಿತಿ ನೀಡಿದವರ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು ಎಂದೂ ಪೊಲೀಸರು ಹೇಳಿದ್ದಾರೆ.</p><p>ಪಹಲ್ಗಾಮ್ನಿಂದ ಆರು ಕಿ.ಮೀ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿದ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದರು. ಕುಟುಂಬದವರ ಎದುರೇ 26 ಜನರನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದರು.</p><p>ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ 9 ಉಗ್ರರ ನೆಲೆಗಳನ್ನು ನಾಶಗೊಳಿಸಿದೆ.</p>.ಪಹಲ್ಗಾಮ್ ದಾಳಿ | ಉಗ್ರರು ಏನಾದ್ರು?: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ.ಪಹಲ್ಗಾಮ್ ದಾಳಿ: ಚಿತ್ರ, ವಿಡಿಯೊ ಹಂಚಿಕೊಳ್ಳಿ–ಎನ್ಐಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>