<p><strong>ನವದೆಹಲಿ:</strong> ಭಯೋತ್ಪಾದನೆ ಕುರಿತು ಭಾರತದ ನಿಲುವು ದೃಢಪಡಿಸಲು ವಿವಿಧ ದೇಶಗಳಿಗೆ ತೆರಳಿದ್ದ ಸರ್ವಪಕ್ಷ ನಿಯೋಗಗಳ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದರು. </p><p>ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಇನ್ನದಾರೂ ಭದ್ರತೆ ಹಾಗೂ ವಿದೇಶಾಂಗ ನೀತಿಗಳ ಸವಾಲುಗಳ ಕುರಿತು ಮುಂಬರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಪ್ರಧಾನಿ ಮೋದಿ ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದೆ. </p><p>ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದು, ಈಗ ಪ್ರಧಾನಿ 32 ದೇಶಗಳಿಗೆ ಕಳುಹಿಸಲಾದ ಏಳು ಸಂಸದೀಯ ನಿಯೋಗಗಳ ಸದಸ್ಯರನ್ನು ಭೇಟಿ ಮಾಡಿದ್ದಾರೆ. ಕನಿಷ್ಠ ಈಗಾಲಾದರೂ ಈ ವಿಷಯಗಳ ಕುರಿತು ಮುಕ್ತ ಚರ್ಚೆಗೆ ಸಿದ್ಧರಾಗುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. </p><p>ಚೀನಾ ಹಾಗೂ ಪಾಕಿಸ್ತಾನ ವಿಷಯದಲ್ಲಿ ಸಿಡಿಎಸ್ ಬಹಿರಂಗಪಸುವಿಕೆ ಹಾಗೂ ಭಾರತದ ಭವಿಷ್ಯದ ಕಾರ್ಯತಂತ್ರದಲ್ಲಿ ಎಲ್ಲ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸುತ್ತಾರೆಯೇ ಎಂದು ಕೇಳಿದ್ದಾರೆ. </p><p>ಪಹಲ್ಗಾಮ್ ಮೇಲಿನ ದಾಳಿಯ ನಂತರ ಭವಿಷ್ಯದಲ್ಲಿ ದೇಶದ ಭದ್ರತೆ ಹಾಗೂ ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆ ಒಪ್ಪುತ್ತೀರಾ? ದುರದೃಷ್ಟವಶಾತ್ ವಿಶೇಷ ಅಧಿವೇಶನಕ್ಕಾಗಿ ವಿಪಕ್ಷಗಳ ಒತ್ತಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿದ್ದಾರೆ. </p><p>ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ಲೇಷಣೆ ನಡೆಸಲು 1999ರ ಕಾರ್ಗಿಲ್ ಪರಿಶೀಲನಾ ಸಮಿತಿಯಂತೆ ತಜ್ಞರ ತಂಡವನ್ನು ರಚಿಸಲಾಗುತ್ತದೆಯೇ ಎಂದು ಅವರು ಪಶ್ನಿಸಿದ್ದಾರೆ. </p> .ದೇಶದ ಧ್ವನಿ ಎತ್ತಿದ್ದ ಸರ್ವಪಕ್ಷ ನಿಯೋಗಗಳ ಕುರಿತು ಪ್ರಧಾನಿ ಮೋದಿ ಹೆಮ್ಮೆ.ಸರ್ವಪಕ್ಷ ನಿಯೋಗದಲ್ಲಿನ ಸಂಸದರನ್ನು ಉಗ್ರರಿಗೆ ಹೋಲಿಸಿದ ಕಾಂಗ್ರೆಸ್: ಬಿಜೆಪಿ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದನೆ ಕುರಿತು ಭಾರತದ ನಿಲುವು ದೃಢಪಡಿಸಲು ವಿವಿಧ ದೇಶಗಳಿಗೆ ತೆರಳಿದ್ದ ಸರ್ವಪಕ್ಷ ನಿಯೋಗಗಳ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದರು. </p><p>ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಇನ್ನದಾರೂ ಭದ್ರತೆ ಹಾಗೂ ವಿದೇಶಾಂಗ ನೀತಿಗಳ ಸವಾಲುಗಳ ಕುರಿತು ಮುಂಬರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಪ್ರಧಾನಿ ಮೋದಿ ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದೆ. </p><p>ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದು, ಈಗ ಪ್ರಧಾನಿ 32 ದೇಶಗಳಿಗೆ ಕಳುಹಿಸಲಾದ ಏಳು ಸಂಸದೀಯ ನಿಯೋಗಗಳ ಸದಸ್ಯರನ್ನು ಭೇಟಿ ಮಾಡಿದ್ದಾರೆ. ಕನಿಷ್ಠ ಈಗಾಲಾದರೂ ಈ ವಿಷಯಗಳ ಕುರಿತು ಮುಕ್ತ ಚರ್ಚೆಗೆ ಸಿದ್ಧರಾಗುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. </p><p>ಚೀನಾ ಹಾಗೂ ಪಾಕಿಸ್ತಾನ ವಿಷಯದಲ್ಲಿ ಸಿಡಿಎಸ್ ಬಹಿರಂಗಪಸುವಿಕೆ ಹಾಗೂ ಭಾರತದ ಭವಿಷ್ಯದ ಕಾರ್ಯತಂತ್ರದಲ್ಲಿ ಎಲ್ಲ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸುತ್ತಾರೆಯೇ ಎಂದು ಕೇಳಿದ್ದಾರೆ. </p><p>ಪಹಲ್ಗಾಮ್ ಮೇಲಿನ ದಾಳಿಯ ನಂತರ ಭವಿಷ್ಯದಲ್ಲಿ ದೇಶದ ಭದ್ರತೆ ಹಾಗೂ ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆ ಒಪ್ಪುತ್ತೀರಾ? ದುರದೃಷ್ಟವಶಾತ್ ವಿಶೇಷ ಅಧಿವೇಶನಕ್ಕಾಗಿ ವಿಪಕ್ಷಗಳ ಒತ್ತಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿದ್ದಾರೆ. </p><p>ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ಲೇಷಣೆ ನಡೆಸಲು 1999ರ ಕಾರ್ಗಿಲ್ ಪರಿಶೀಲನಾ ಸಮಿತಿಯಂತೆ ತಜ್ಞರ ತಂಡವನ್ನು ರಚಿಸಲಾಗುತ್ತದೆಯೇ ಎಂದು ಅವರು ಪಶ್ನಿಸಿದ್ದಾರೆ. </p> .ದೇಶದ ಧ್ವನಿ ಎತ್ತಿದ್ದ ಸರ್ವಪಕ್ಷ ನಿಯೋಗಗಳ ಕುರಿತು ಪ್ರಧಾನಿ ಮೋದಿ ಹೆಮ್ಮೆ.ಸರ್ವಪಕ್ಷ ನಿಯೋಗದಲ್ಲಿನ ಸಂಸದರನ್ನು ಉಗ್ರರಿಗೆ ಹೋಲಿಸಿದ ಕಾಂಗ್ರೆಸ್: ಬಿಜೆಪಿ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>