<p><strong>ನವದೆಹಲಿ</strong>: ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿರುವ ಟ್ರೋಲ್ಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು (ಎನ್ಸಿಡಬ್ಲ್ಯೂ) ಕಿಡಿಕಾರಿದೆ.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದಂತೆ 'ಜನರು ಮುಸ್ಲಿಮರು ಮತ್ತು ಕಾಶ್ಮೀರಿಗರನ್ನು ಗುರಿಯಾಗಿಸುವುದನ್ನು ಸಹಿಸುವುದಿಲ್ಲ' ಎಂದು ಹಿಮಾಂಶಿ ನರ್ವಾಲ್ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟ್ರೋಲ್ಗೆ ಗುರಿಯಾಗಿತ್ತು. </p>.ಸತತ 11ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿ.ಚಿಕ್ಕಮಗಳೂರು ಬಂದ್: ತೆರೆಯದ ಅಂಗಡಿ-ಮುಂಗಟ್ಟು. <p>ಈ ಸಂಬಂಧ ಎನ್ಸಿಡಬ್ಲ್ಯೂ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಭಯೋತ್ಪಾದನಾ ದಾಳಿಯಿಂದಾಗಿ ದೇಶ ನೋವಿನಲ್ಲಿದೆ. ಈ ನಡುವೆ ಮಹಿಳೆಯ ಹೇಳಿಕೆ ಕುರಿತು ಟ್ರೋಲ್ ಮಾಡುತ್ತಿರುವುದು ದುರದೃಷ್ಟಕರ ಸಂಗತಿ. 'ಮಹಿಳೆಯರ ವೈಯಕ್ತಿಕ ಜೀವನದ ಆಧಾರದ ಮೇಲೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ. ಪ್ರತಿಯೊಬ್ಬ ಮಹಿಳೆಯ ಘನತೆ ಮತ್ತು ಗೌರವವು ಮೌಲ್ಯಯುತವಾದ್ದದ್ದು' ಎಂದು ಹೇಳಿದೆ.</p><p>ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಂವಿಧಾನಿಕ ಮಿತಿ ಹಾಗೂ ನಾಗರಿಕ ಚರ್ಚೆಯೊಳಗೆ ಇರಬೇಕು ಎಂದು ಆಯೋಗ ಅಭಿಪ್ರಾಯಪಟ್ಟಿದೆ.</p><p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.</p>.ಸಿಕಂದರ್ ಸೋಲಿಗೆ ಸಲ್ಮಾನ್ ಹೊಣೆಯಲ್ಲ: ನಟ ನವಾಜುದ್ದೀನ್.ಅತ್ಯಾಚಾರ ಆರೋಪ | ನಟ ಅಜಾಜ್ ಖಾನ್ ವಿರುದ್ಧ ಎಫ್ಐಆರ್ ದಾಖಲು .IPL 2025 | SRH vs DC: ಗೆಲುವಿನ ಹಳಿಗೆ ಮರಳಲು ಡೆಲ್ಲಿ ತವಕ.ಮಹಿಳಾ ಮತ: ಮಹಿಳೆ ಮೇಲೆ ದೌರ್ಜನ್ಯ ನಡೆಯುವುದು ಕುಟುಂಬದಿಂದಲೇ ಹೆಚ್ಚು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿರುವ ಟ್ರೋಲ್ಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು (ಎನ್ಸಿಡಬ್ಲ್ಯೂ) ಕಿಡಿಕಾರಿದೆ.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದಂತೆ 'ಜನರು ಮುಸ್ಲಿಮರು ಮತ್ತು ಕಾಶ್ಮೀರಿಗರನ್ನು ಗುರಿಯಾಗಿಸುವುದನ್ನು ಸಹಿಸುವುದಿಲ್ಲ' ಎಂದು ಹಿಮಾಂಶಿ ನರ್ವಾಲ್ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟ್ರೋಲ್ಗೆ ಗುರಿಯಾಗಿತ್ತು. </p>.ಸತತ 11ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿ.ಚಿಕ್ಕಮಗಳೂರು ಬಂದ್: ತೆರೆಯದ ಅಂಗಡಿ-ಮುಂಗಟ್ಟು. <p>ಈ ಸಂಬಂಧ ಎನ್ಸಿಡಬ್ಲ್ಯೂ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಭಯೋತ್ಪಾದನಾ ದಾಳಿಯಿಂದಾಗಿ ದೇಶ ನೋವಿನಲ್ಲಿದೆ. ಈ ನಡುವೆ ಮಹಿಳೆಯ ಹೇಳಿಕೆ ಕುರಿತು ಟ್ರೋಲ್ ಮಾಡುತ್ತಿರುವುದು ದುರದೃಷ್ಟಕರ ಸಂಗತಿ. 'ಮಹಿಳೆಯರ ವೈಯಕ್ತಿಕ ಜೀವನದ ಆಧಾರದ ಮೇಲೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ. ಪ್ರತಿಯೊಬ್ಬ ಮಹಿಳೆಯ ಘನತೆ ಮತ್ತು ಗೌರವವು ಮೌಲ್ಯಯುತವಾದ್ದದ್ದು' ಎಂದು ಹೇಳಿದೆ.</p><p>ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಂವಿಧಾನಿಕ ಮಿತಿ ಹಾಗೂ ನಾಗರಿಕ ಚರ್ಚೆಯೊಳಗೆ ಇರಬೇಕು ಎಂದು ಆಯೋಗ ಅಭಿಪ್ರಾಯಪಟ್ಟಿದೆ.</p><p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.</p>.ಸಿಕಂದರ್ ಸೋಲಿಗೆ ಸಲ್ಮಾನ್ ಹೊಣೆಯಲ್ಲ: ನಟ ನವಾಜುದ್ದೀನ್.ಅತ್ಯಾಚಾರ ಆರೋಪ | ನಟ ಅಜಾಜ್ ಖಾನ್ ವಿರುದ್ಧ ಎಫ್ಐಆರ್ ದಾಖಲು .IPL 2025 | SRH vs DC: ಗೆಲುವಿನ ಹಳಿಗೆ ಮರಳಲು ಡೆಲ್ಲಿ ತವಕ.ಮಹಿಳಾ ಮತ: ಮಹಿಳೆ ಮೇಲೆ ದೌರ್ಜನ್ಯ ನಡೆಯುವುದು ಕುಟುಂಬದಿಂದಲೇ ಹೆಚ್ಚು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>