<p><strong>ಜಮ್ಮು</strong>: ಪಹಲ್ಗಾಮ್ ಉಗ್ರರ ದಾಳಿ ಸಂಬಂಧ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದಡಿ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಐದು ದಿನಗಳ ಕಸ್ಟಡಿಗೆ ನೀಡಿ ಸ್ಥಳೀಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.</p>.<p>ಪಹಲ್ಗಾಮ್ನ ಬಟ್ಕೋಟೆಯಿಂದ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ಪಾರ್ಕ್ ಬಳಿಯ ಬಶೀರ್ ಅಹ್ಮದ್ ಜೋಥರ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಬಂಧಿಸಿತ್ತು. </p>.<p>ಜಮ್ಮುವಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಿತೇಶ್ ಕುಮಾರ್ ದುಬೆ ಎದುರು ಇಬ್ಬರು ಆರೋಪಿಗಳನ್ನು ಹಾಜರುಪಡಿಸಿದ್ದು, ಜೂನ್ 27ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.</p>.<p>ಬಂಧಿತ ಆರೋಪಿಗಳು ದಾಳಿ ನಡೆಸಿದ ಭಯೋತ್ಪಾದಕರ ಗುರುತುಗಳನ್ನು ಬಹಿರಂಗಪಡಿಸಿದ್ದು, ಅವರು ಪಾಕ್ ಮೂಲದ ನಿಷೇಧಿತ ಲಷ್ಕರ್–ಎ–ತಯಬಾಗೆ (ಎಲ್ಇಟಿ) ಸೇರಿದವರು ಎಂಬುದನ್ನು ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರಿಗೆ ಈ ಆರೋಪಿಗಳು ಆಶ್ರಯ, ಆಹಾರ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಿದ್ದರು. </p>.<p>ಏಪ್ರಿಲ್ 22ರಂದು ನಡೆದಿದ್ದ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಪಹಲ್ಗಾಮ್ ಉಗ್ರರ ದಾಳಿ ಸಂಬಂಧ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದಡಿ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಐದು ದಿನಗಳ ಕಸ್ಟಡಿಗೆ ನೀಡಿ ಸ್ಥಳೀಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.</p>.<p>ಪಹಲ್ಗಾಮ್ನ ಬಟ್ಕೋಟೆಯಿಂದ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ಪಾರ್ಕ್ ಬಳಿಯ ಬಶೀರ್ ಅಹ್ಮದ್ ಜೋಥರ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಬಂಧಿಸಿತ್ತು. </p>.<p>ಜಮ್ಮುವಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಿತೇಶ್ ಕುಮಾರ್ ದುಬೆ ಎದುರು ಇಬ್ಬರು ಆರೋಪಿಗಳನ್ನು ಹಾಜರುಪಡಿಸಿದ್ದು, ಜೂನ್ 27ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.</p>.<p>ಬಂಧಿತ ಆರೋಪಿಗಳು ದಾಳಿ ನಡೆಸಿದ ಭಯೋತ್ಪಾದಕರ ಗುರುತುಗಳನ್ನು ಬಹಿರಂಗಪಡಿಸಿದ್ದು, ಅವರು ಪಾಕ್ ಮೂಲದ ನಿಷೇಧಿತ ಲಷ್ಕರ್–ಎ–ತಯಬಾಗೆ (ಎಲ್ಇಟಿ) ಸೇರಿದವರು ಎಂಬುದನ್ನು ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರಿಗೆ ಈ ಆರೋಪಿಗಳು ಆಶ್ರಯ, ಆಹಾರ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಿದ್ದರು. </p>.<p>ಏಪ್ರಿಲ್ 22ರಂದು ನಡೆದಿದ್ದ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>