<p><strong>ನವದೆಹಲಿ:</strong> 'ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಗುರಿಯಾಗಿಸಿ ಭಾರತ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಹತ್ಯೆಗೀಡಾಗಿದ್ದಾರೆ' ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಗುರುವಾರ) ಮಾಹಿತಿ ನೀಡಿದ್ದಾರೆ. </p><p>ಆಪರೇಷನ್ ಸಿಂಧೂರ ಸಂಬಂಧ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಈ ಕುರಿತು ರಕ್ಷಣಾ ಸಚಿವರು ವಿವರಣೆ ನೀಡಿದ್ದಾರೆ. </p><p>ಮಂಗಳವಾರ ಮಧ್ಯರಾತ್ರಿ ಸಶಸ್ತ್ರ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. </p><p>ಸದ್ಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಜಾರಿಯಲ್ಲಿದ್ದು, ಒಂದು ವೇಳೆ ಪಾಕಿಸ್ತಾನ ದಾಳಿ ನಡೆಸಿದರೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ರಾಜನಾಥ ತಿಳಿಸಿದ್ದಾರೆ. </p><p>'ಆಪರೇಷನ್ ಸಿಂಧೂರ ಜಾರಿಯಲ್ಲಿರುವುದರಿಂದ ಸಶಸ್ತ್ರ ಪಡೆಗಳ ಈ ಕಾರ್ಯಾಚರಣೆಗೆ ಸಂಬಂಧಿಸಿದ ತಾಂತ್ರಿಕ ವಿವರಗಳನ್ನು ಈಗ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಸಶಸ್ತ್ರ ಪಡೆಯ ಯಾವುದೇ ಅಧಿಕಾರಿಯೂ ಸಭೆಯಲ್ಲಿ ಭಾಗವಹಿಸಿಲ್ಲ. ಅವರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>ಸರ್ವಪಕ್ಷ ಸಭೆಯಲ್ಲಿ ಒಮ್ಮತ ಮೂಡಿಬಂದಿದೆ. ಗಡಿಯಲ್ಲಿ ಭಾರತೀಯರ ಭದ್ರತೆ ಹಾಗೂ ರಾಷ್ಟ್ರೀಯ ಭದ್ರತೆ ಬಗ್ಗೆ ವಿಪಕ್ಷದವರು ಕಳವಳ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರ ಹಾಗೂ ಸಶಸ್ತ್ರ ಪಡೆಗಳ ಜತೆ ಇಡೀ ದೇಶವೇ ಒಗ್ಗಟ್ಟು ಪ್ರದರ್ಶಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. </p> .Operation Sindoor | ಕರೆ ಬಂದರೆ ಈಗಲೂ ಯುದ್ಧಕ್ಕೆ ಸಿದ್ಧ: ಮಾಜಿ ಸೈನಿಕರ ಮಾತು.Operation Sindoor: ಇಂದು ಸರ್ವಪಕ್ಷ ಸಭೆ; ಮೋದಿ ಉಪಸ್ಥಿತಿಗೆ ಕಾಂಗ್ರೆಸ್ ಒತ್ತಾಯ.Operation Sindoor: ಉಗ್ರರ ನೆಲೆ ‘ಸಿಂಧೂರ’ಕ್ಕೆ ತರಗೆಲೆ.Operation Sindoor: ಯೋಜನೆಯಂತೆ ನಮ್ಮ ದಾಳಿ ಯಶಸ್ವಿ: ರಾಜನಾಥ್ ಸಿಂಗ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಗುರಿಯಾಗಿಸಿ ಭಾರತ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಹತ್ಯೆಗೀಡಾಗಿದ್ದಾರೆ' ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಗುರುವಾರ) ಮಾಹಿತಿ ನೀಡಿದ್ದಾರೆ. </p><p>ಆಪರೇಷನ್ ಸಿಂಧೂರ ಸಂಬಂಧ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಈ ಕುರಿತು ರಕ್ಷಣಾ ಸಚಿವರು ವಿವರಣೆ ನೀಡಿದ್ದಾರೆ. </p><p>ಮಂಗಳವಾರ ಮಧ್ಯರಾತ್ರಿ ಸಶಸ್ತ್ರ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. </p><p>ಸದ್ಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಜಾರಿಯಲ್ಲಿದ್ದು, ಒಂದು ವೇಳೆ ಪಾಕಿಸ್ತಾನ ದಾಳಿ ನಡೆಸಿದರೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ರಾಜನಾಥ ತಿಳಿಸಿದ್ದಾರೆ. </p><p>'ಆಪರೇಷನ್ ಸಿಂಧೂರ ಜಾರಿಯಲ್ಲಿರುವುದರಿಂದ ಸಶಸ್ತ್ರ ಪಡೆಗಳ ಈ ಕಾರ್ಯಾಚರಣೆಗೆ ಸಂಬಂಧಿಸಿದ ತಾಂತ್ರಿಕ ವಿವರಗಳನ್ನು ಈಗ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಸಶಸ್ತ್ರ ಪಡೆಯ ಯಾವುದೇ ಅಧಿಕಾರಿಯೂ ಸಭೆಯಲ್ಲಿ ಭಾಗವಹಿಸಿಲ್ಲ. ಅವರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>ಸರ್ವಪಕ್ಷ ಸಭೆಯಲ್ಲಿ ಒಮ್ಮತ ಮೂಡಿಬಂದಿದೆ. ಗಡಿಯಲ್ಲಿ ಭಾರತೀಯರ ಭದ್ರತೆ ಹಾಗೂ ರಾಷ್ಟ್ರೀಯ ಭದ್ರತೆ ಬಗ್ಗೆ ವಿಪಕ್ಷದವರು ಕಳವಳ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರ ಹಾಗೂ ಸಶಸ್ತ್ರ ಪಡೆಗಳ ಜತೆ ಇಡೀ ದೇಶವೇ ಒಗ್ಗಟ್ಟು ಪ್ರದರ್ಶಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. </p> .Operation Sindoor | ಕರೆ ಬಂದರೆ ಈಗಲೂ ಯುದ್ಧಕ್ಕೆ ಸಿದ್ಧ: ಮಾಜಿ ಸೈನಿಕರ ಮಾತು.Operation Sindoor: ಇಂದು ಸರ್ವಪಕ್ಷ ಸಭೆ; ಮೋದಿ ಉಪಸ್ಥಿತಿಗೆ ಕಾಂಗ್ರೆಸ್ ಒತ್ತಾಯ.Operation Sindoor: ಉಗ್ರರ ನೆಲೆ ‘ಸಿಂಧೂರ’ಕ್ಕೆ ತರಗೆಲೆ.Operation Sindoor: ಯೋಜನೆಯಂತೆ ನಮ್ಮ ದಾಳಿ ಯಶಸ್ವಿ: ರಾಜನಾಥ್ ಸಿಂಗ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>